ಮಕ್ಕಳ ಶೌರ್ಯ, ಸಾಹಸ ಶ್ಲಾಘನೀಯ


Team Udayavani, Dec 6, 2018, 11:43 AM IST

makkala.jpg

ಬೆಂಗಳೂರು: ಯಾವುದೇ ತರಬೇತಿ ಇಲ್ಲದೆ ಧೈರ್ಯ, ಶೌರ್ಯ, ಸಾಹಸ ತೋರಿದ ಮಕ್ಕಳ ಸಾಧನೆ ಶಾಘÉನಿಯವಾದದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಜಯಮಾಲಾ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬುಧವಾರ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್‌ ನೆಹರು ಅವರನ್ನು ಮರೆತರೆ ಬದುಕಿನಲ್ಲಿ ಎಲ್ಲವನ್ನು ಕಳೆದುಕೊಂಡಂತೆ. ಮಕ್ಕಳು ಈ ದೇಶದ ಭವಿಷ್ಯ ಎಂಬ ಕಲ್ಪನೆಯನ್ನು ನೀಡಿದವರು ನೆಹರು. ಮಕ್ಕಳು ಮನಸು ಮಾಡಿದರೆ ಸುಲಭದಲ್ಲಿ ಬದಲಾವಣೆಯನ್ನು ತರಬಹುದು. ಇಂದು ಪ್ರಶಸ್ತಿ ಪಡೆದ ಮಕ್ಕಳು ತಮ್ಮ ವಯಸ್ಸಿಗೆ ಮೀರಿದ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರಿನ ಮಗುವೊಂದು ಹಾರಂಗಿ ಜಲಾಶಯದ ಬಳಿ ಕಾಲುಜಾರಿ ನೀರಿಗೆ ಬಿದ್ದ ವೃದ್ಧೆಯೊಬ್ಬರನ್ನು ರಕ್ಷಿಸಿದೆ. ಇದೇ ಅಲ್ಲವೇ ಮಕ್ಕಳ ಶೌರ್ಯ. ತರಬೇತಿ ಇಲ್ಲದೆ, ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಸಾಹಸ ಮೆರೆದಿರುವ ಈ ಮಕ್ಕಳ ಸಾಧನೆ ಮೆಚ್ಚುವಂತಹುದು. ಈ ನಿಸ್ವಾರ್ಥ ಸೇವೆಗೆ ಯಾವುದೇ ಪ್ರಶಸ್ತಿ ಪುರಸ್ಕಾರ ನೀಡಿದರೂ ಕಡಿಮೆಯೇ. ಅಂಗವೈಕಲ್ಯ ಹಾಗೂ ಎಚ್‌ಐವಿ ಪೀಡಿತ ಮಕ್ಕಳನ್ನು ಪೋಷಣೆ ಮಾಡುವಂತಹ ಸಂಸ್ಥೆಗಳ ಕಾರ್ಯ ಶಾಘÉನೀಯವಾದುದು ಎಂದು ತಿಳಿಸಿದರು.

ಮಕ್ಕಳು ಎಂದರೆ ಬಂಡವಾಳ ಹೂಡುವ ವಸ್ತುವಲ್ಲ. ಅವರ ಮೇಲೆ ಒತ್ತಡ ಹೇರುವ ವಾತಾವರಣ ನಿರ್ಮೂಲನೆಯಾಗಬೇಕು. ಇಂದಿನ ಮಕ್ಕಳು ಮನಸು ಮಾಡಿದರೆ ಇಡೀ ಸಮಾಜವನ್ನು ಬದಲಾಯಿಸಬಹುದು. ಆದರೆ, ಬಾಲ್ಯದಿಂದಲೇ ಮಕ್ಕಳ ಮಾನಸಿಕತೆಯ ಮೇಲೆ ಒತ್ತಡ ಹೇರುವುದನ್ನು ಪೋಷಕರು ಬಿಡಬೇಕು. ಆಗ ಮಕ್ಕಳು ಸಾಹಸಿಗರಾಗಲು ಸಾಧ್ಯವಾಗುತ್ತದೆ ಎಂದರು.

ಈಗಿನ ಮಕ್ಕಳ ಕಾಲದಲ್ಲಿ ತಂತ್ರಜ್ಞಾನ ಮುಂದುವರಿದಿದೆ. ನಾವು ಮಕ್ಕಳಿದ್ದಾಗ ಇಲ್ಲದಂತಹ ಸೌಲಭ್ಯಗಳು ಈಗೀನ ಮಕ್ಕಳಿಗೆ ದೊರೆತ್ತಿದೆ. ಮಕ್ಕಳು ಈ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಹಂತ ತಲುಪಬೇಕು. ತಂದೆ ತಾಯಿ ಹಾಗೂ ಸಮಾಜದ ಋಣ ತೀರಿಸಲು ಸಾಧ್ಯವಿಲ್ಲ. ಸಮಾಜದಿಂದ ವಿದ್ಯೆ ಒಳ್ಳೆಯ ಮೌಲ್ಯಗಳನ್ನು ಪಡೆದುಕೊಂಡು ಸಮಾಜಕ್ಕೆ ಅರ್ಪಿಸಬೇಕು ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಮಕ್ಕಳಿಗಾಗಿ ಮಾತೃಪೂರ್ಣ, ಕ್ಷೀರಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈಗೀನ ಸರ್ಕಾರ ಕೂಡ ಈ ಯೋಜನೆಗಳನ್ನು ಮುಂದುವರೆಸುತ್ತಿದ್ದು ಮಕ್ಕಳ ಸಮಗ್ರ ಬೆಳವಣಿಗೆಗೆ ಶ್ರಮಿಸುತ್ತಿದೆ. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌, ನಿರ್ದೇಶಕಿ ಡಾ.ಅರುಂಧತಿ ಚಂದ್ರಶೇಖರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.