ಮಕ್ಕಳ ರಜಾ ಮಾಹಿತಿ ಕಲ್ಯಾಣ ಸಮಿತಿಗೆ ಕಡ್ಡಾಯ


Team Udayavani, Dec 9, 2018, 6:00 AM IST

school-teachers.jpg

ಬೆಂಗಳೂರು: ಶಾಲೆಗೆ ನಿರಂತರ ಗೈರು ಹಾಜರಾಗುವ ಮಕ್ಕಳ ಮಾಹಿತಿಯನ್ನು ಇನ್ಮುಂದೆ ಶಾಲೆಯಿಂದಲೇ ಕಡ್ಡಾಯವಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಲಿಖೀತ ರೂಪದಲ್ಲಿ ನೀಡಬೇಕು!

ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಅವಧಿಗೆ ಪೂರ್ವ ಸೂಚನೆ ಇಲ್ಲದೇ ಗೈರು ಹಾಜರಾಗಿರುವ ಮಕ್ಕಳ ಮನೆಗೆ ಶಾಲಾ ಶಿಕ್ಷಕರು ಹೋಗಿ ವಿಚಾರಿಸುವ ಪದ್ಧತಿ ಈಗ ಜಾರಿಯಲ್ಲಿದೆ. ಆದರೆ, ಶಾಲಾ ಶಿಕ್ಷಣ ವಂಚಿತ ಮಕ್ಕಳನ್ನು ಪುನರ್‌ ಶಾಲೆಗೆ ಕರೆತರುವಲ್ಲಿ ಈ ಪದ್ಧತಿ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ.

ಸದ್ಯದ ವ್ಯವಸ್ಥೆ ಪ್ರಕಾರ, ಶಾಲಾಡಳಿತ ಮಂಡಳಿಯಿಂದಲೇ ಗೈರಾದ ಮಕ್ಕಳ ತನಿಖೆ ನಡೆಸಲಾಗುತ್ತದೆ. ಅಷ್ಟಾಗಿಯೂ ಮಗು ಯಾಕೆ ಶಾಲೆಗೆ ಬರುತ್ತಿಲ್ಲ ಎಂಬುದು ಗೊತ್ತಾಗದೇ ಇದ್ದಾಗ ತನಿಖೆ ಅಲ್ಲಿಗೆ ನಿಂತು ಬಿಡುತ್ತದೆ. ಕಾಣೆಯಾದ ಮಗುವಿನ ಮಾಹಿತಿ ಕಲ್ಯಾಣ ಸಮಿತಿಗೆ ಬರುವ ವೇಳೆಗೆ ಒಂದೆರೆಡು ವರ್ಷವೇ ಕಳೆದಿರುತ್ತದೆ. ಅಷ್ಟೊತ್ತಿಗೆ ಮಗುವಿನ ಶೈಕ್ಷಣಿಕ ಭವಿಷ್ಯದ ಮೇಲೆ ಪರಿಣಾಮ ಬಿದ್ದಿರುತ್ತದೆ. ಇದನ್ನೆಲ್ಲ ತಪ್ಪಿಸುವ ಉದ್ದೇಶದಿಂದ ಇನ್ಮುಂದೆ ಶಾಲಾ ಶಿಕ್ಷಕರು ನಿರಂತರ ಗೈರಾದ ವಿದ್ಯಾರ್ಥಿ ಮಾಹಿತಿಯನ್ನು ತಕ್ಷಣ ಲಿಖೀತ ರೂಪದಲ್ಲಿ ಕಲ್ಯಾಣ ಸಮಿತಿಗೆ ನೀಡಬೇಕು ಎಂದು ಸರ್ವ ಶಿಕ್ಷಾ ಅಭಿಯಾನ ಶಾಲಾ ಮುಖ್ಯಸ್ಥರಿಗೆ ಹಾಗೂ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡಿದೆ.

ಯಾವುದೇ ಮಗು ಪೂರ್ವ ಸೂಚನೆ ಇಲ್ಲದೇ ದೀರ್ಘ‌ಕಾಲ ಗೈರು ಹಾಜರಾದಲ್ಲಿ ಅಥವಾ ಆ ಮಗುವಿನ ಕುಟುಂಬವನ್ನು ಕಂಡು ಹಿಡಿಯಲು ಶಾಲಾ ಶಿಕ್ಷಕರು ವಿಫ‌ಲವಾದಲ್ಲಿ ಮಗುವಿನ ಮಾಹಿತಿಯನ್ನು ಕಡ್ಡಾಯವಾಗಿ ತಮ್ಮ ಜಿಲ್ಲಾ ವ್ಯಾಪ್ತಿಯ ಮಕ್ಕಳ ಕಲ್ಯಾಣ ಸಮಿತಿಗೆ ಲಿಖೀತ ರೂಪದಲ್ಲಿ ನೀಡಬೇಕು. ಹಾಗೆಯೇ ಆ ಪ್ರತಿಯನ್ನು ಕಡ್ಡಾಯವಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ)ಗಳಿಗೆ ಮತ್ತು ಜಿಲ್ಲಾ ಉಪನಿರ್ದೇಶಕ(ಡಿಡಿಪಿಐ)ರಿಗೂ ಸಲ್ಲಿಸಬೇಕು  ಎಂದಿದೆ.

ಸಮಿತಿಯಿಂದ ಶೀಘ್ರ ತನಿಖೆ :
ಪ್ರಸಕ್ತ ಸಾಲಿನಲ್ಲಿ ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳ ಮಾಹಿತಿ ಕಲೆ ಹಾಕಲು ಸಮಗ್ರ ತನಿಖೆ ಸರ್ವಶಿಕ್ಷಾ ಅಭಿಯಾನದಿಂದ ನಡೆಯುತ್ತಿದೆ. ಸಮೀಕ್ಷೆ ವರದಿ ಜನವರಿ ಅಥವಾ ಫೆಬ್ರವರಿ ವೇಳೆಗೆ ಸರ್ಕಾರದ ಕೈ ಸೇರಲಿದೆ. ಶಾಲಾ ಮಕ್ಕಳ ಮೇಲೆ ನಿಗಾ ಇಡುವುದು ಶಿಕ್ಷಕರ ಹಾಗೂ ಶಾಲಾಡಳಿತ ಮಂಡಳಿಯ ಕರ್ತವ್ಯವಾಗಿದೆ. ನಿರಂತರವಾಗಿ ಶಾಲೆಗೆ ಗೈರಾದ ಮಗುವಿನ ಮಾಹಿತಿ ಕಲ್ಯಾಣ ಸಮಿತಿಗೆ ಬಂದ ತಕ್ಷಣವೇ ವಿಚಾರಣೆ ನಡೆಸಿ, ಮಗುವಿನ ಪತ್ತೆಗೆ ಬೇಕಾದ ಎಲ್ಲ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಲ್ಯಾಣ ಸಮಿತಿಯ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.

ಹಾಜರಾತಿ ಪ್ರಾಧಿಕಾರ ಸಕ್ರಿಯವಾಗಿಲ್ಲ
ಶಾಲಾ ಮಕ್ಕಳ ಹಾಜರಾತಿಯನ್ನು ಜಿಲ್ಲೆಯಿಂದಲೇ ನಿರ್ವಹಣೆ ಮಾಡುವ ಮತ್ತು ಮಕ್ಕಳು ನಿರಂತರವಾಗಿ ಶಾಲೆಗೆ ಬರುವಂತೆ ನೋಡಿಕೊಳ್ಳುವ ಹಾಜರಾತಿ ಪ್ರಾಧಿಕಾರ ಪ್ರತಿ ಜಿಲ್ಲೆಯಲ್ಲೂ ಇರುತ್ತದೆ. ರಾಜ್ಯದಲ್ಲೆಲ್ಲೂ ಈ ಪ್ರಾಧಿಕಾರ ಸಕ್ರಿಯವಾಗಿಲ್ಲ. ಶಾಲೆಗಳಿಂದ ಪ್ರತಿ ವಾರ ವಿದ್ಯಾರ್ಥಿಗಳ ಮಾಹಿತಿ ಪಡೆದು ಅವರ ಹಾಜರಾತಿ ಮೇಲೆ ನಿಗಾ ಇಡುವ ಕಾರ್ಯ ಮಾಡಬೇಕಿರುವ ಹಾಜರಾತಿ ಪ್ರಾಧಿಕಾರದ ಅಧಿಕಾರಿಗಳು ಅಷ್ಟೊಂದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಶಿಕ್ಷಣ ಪ್ರತಿ ಮಗುವಿನ ಮೂಲಭೂತ ಹಕ್ಕು. ಜಿಲ್ಲಾ ಹಾಜರಾತಿ ಪ್ರಾಧಿಕಾರಿಗಳು ಈ ಸಂಬಂಧ ಸಕ್ರಿಯವಾಗಿ ಕೆಲಸ ಮಾಡಬೇಕು. ಯಾವುದೇ ಸೂಚನೆ ಇಲ್ಲದೇ ಒಂದು ವಾರಕ್ಕಿಂತ ಹೆಚ್ಚುಕಾಲ ಮಗು ಶಾಲೆಗೆ ಬಾರದೇ ಇದ್ದರೆ ಅಂತಹ ಮಕ್ಕಳ ಮನೆಗೆ ಶಾಲಾ ಶಿಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
– ಮರಿಸ್ವಾಮಿ, ಮುಖ್ಯಸ್ಥ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ನಿರಂತರವಾಗಿ ಗೈರು ಹಾಜರಾಗಿರುವ ಮಕ್ಕಳ ಮಾಹಿತಿಯನ್ನು ಕಲ್ಯಾಣ ಸಮಿತಿಗೆ  ನೀಡಬೇಕು ಎಂಬ ನಿಯಮ ಇದೆ. ಆದರೆ, ಶಾಲಾ ಮುಖ್ಯ ಶಿಕ್ಷಕರು ಇದನ್ನು ಮಾಡುತ್ತಿಲ್ಲ. ವಿಚಾರಣೆ ವೇಳೆ ಸಮಿತಿಯು ಎನ್‌ಜಿಒಗಳ ಮೂಲಕ ಮಕ್ಕಳ ಮಾಹಿತಿ ಪಡೆದುಕೊಳ್ಳಬೇಕಾದ ಸ್ಥಿತಿ ಇದೆ.
– ಎಸ್‌. ಚಂದ್ರಶೇಖರ್‌, ಸದಸ್ಯ, ಮಕ್ಕಳ ಕಲ್ಯಾಣ ಸಮಿತಿ, ಬೆಂಗಳೂರು ನಗರ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.