ವಿಮರ್ಶಕರ ಹಂಗಿಲ್ಲದೆ ಓದುಗರ ತಲುಪಿದ ಚಿತ್ತಾಲ


Team Udayavani, Aug 12, 2018, 12:11 PM IST

chittalaya.jpg

ಬೆಂಗಳೂರು: ವಿಮರ್ಶಕರ ಹಂಗಿಲ್ಲದೆ ಓದುಗರನ್ನು ತಲುಪಿದ ಕಾದಂಬರಿಕಾರ ಅಂದರೆ ಅದು ಯಶವಂತ ಚಿತ್ತಾಲ ಎಂದು ಸಾಹಿತಿ ಜಯಂತ ಕಾಯ್ಕಿಣಿ ಬಣ್ಣಿಸಿದ್ದಾರೆ. ಕೆಪಿಟಿಸಿಎಲ್‌ ಲೆಕ್ಕಾಧಿಕಾರಿಗಳ ಸಂಘದ ವತಿಯಿಂದ ಆಯೋಜಿಸಿದ್ದ  “ಯಶವಂತ ಚಿತ್ತಾಲರ ಬದುಕು ಬರಹ’ ಕುರಿತ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಿತ್ತಾಲರು ವಿಮರ್ಶಕರ ಹಂಗಿಲ್ಲದೆ ಸಾಹಿತ್ಯದಲ್ಲಿ ತೊಡಗಿಸಿಕೊಂಡಿದ್ದರು. ಇವರ ಶಿಕಾರಿ ಕಾದಂಬರಿ ಸಾಕಷ್ಟು ಜನಪ್ರಿಯವಾಯಿತು. ಈ ವೇಳೆ ಅವರ ವಿರುದ್ಧ ಪತ್ರಿಕೆಯೊಂದರಲ್ಲಿ ವಿಮರ್ಶೆ ಬರೆಸಲಾಯಿತು. ಈ ಸತ್ಯವನ್ನು ಇತ್ತೀಚೆಗಷ್ಟೇ ಆ ವಿಮರ್ಶೆ ಬರೆದವರು ತಮ್ಮ ಬಳಿ ನೋವಿನಿಂದ ಹೇಳಿಕೊಂಡಿದ್ದರು ಎಂದು ತಿಳಿಸಿದರು.

ಬಾಂಬೆಯಲ್ಲಿ ಚಿತ್ತಾಲರೊಂದಿಗೆ ಕಳೆದ ದಿನಗಳನ್ನು ಮೆಲುಕು ಹಾಕಿದ ಅವರು, ಚಿತ್ತಾಲರು ಭಾವ ಜೀವಿಯಾಗಿದ್ದರು. ಹಿರಿಯರು, ಕಿರಿಯರು ಎನ್ನದೇ ಎಲ್ಲರನ್ನೂ ಒಂದೆ ಸಮನಾಗಿ ಕಾಣುವ ಮನುಷ್ಯತ್ವದ ದೊಡ್ಡಗುಣ ಅವರಲ್ಲಿ ಅಡಕವಾಗಿತ್ತು ಎಂದು ಹೇಳಿದರು.

ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿದ್ದೇವೆ ಎಂದು ಚಿತ್ತಾಲರು ಆಗಾಗ ಹೇಳುತ್ತಿದ್ದರು. ಅವರ ಈ ಮಾತಿನಲ್ಲಿ ಒಳಾರ್ಥವಿದೆ. ನಾವು ಮನುಷ್ಯರು ಎಂದು ಹೇಳುವುದೇ ದೊಡ್ಡ ತಪ್ಪು, ಬದುಕನ್ನು ಪ್ರೀತಿಸುವುದರ ಮೂಲಕ ನಾವು ಮನುಷ್ಯರಾಗಬೇಕು ಎಂದರು.

ಚಿತ್ತಾಲರ ಮನೆ ಸಾಹಿತ್ಯದ ತಾಣ: ಚಿತ್ತಾಲರ ಬಾಂಬೆ ಮನೆ ಸಾಹಿತ್ಯದ ತಾಣವಾಗಿತ್ತು. ನಮ್ಮ ಸ್ನೇಹತರ ತಂಡ ವಾರದ ಕೊನೆಯಲ್ಲಿ ಅಲ್ಲಿ ಸೇರುತ್ತಿತ್ತು. ಸಾಹಿತ್ಯದ ಕುರಿತಾದ ವಿಚಾರಗಳನ್ನೇ ಮಾತನಾಡುತ್ತಿದ್ದೆವು. ಚಿತ್ತಾಲರು ತಮ್ಮ ಶಿಕಾರಿ, ಕೇಂದ್ರವೃತ್ತಾಂತ ಕಾದಂಬರಿ ಸೇರಿದಂತೆ ಹಲವು ಕಾದಂಬರಿಗಳನ್ನು ನಮಗೆ ಹೇಳುತ್ತಿದ್ದರು.

ಗೋಪಾಲಕೃಷ್ಣ ಅಡಿಗರು ಸೇರಿದಂತೆ ಹಲವು ಹೆಸರಾಂತ ಕನ್ನಡ ಸಾಹಿತಿಗಳು ಇಲ್ಲಿ ಸೇರುತ್ತಿದ್ದರು. ಹೀಗಾಗಿ ಕನ್ನಡ ಹೆಸರಾಂತ ಸಾಹಿತಿಗಳನ್ನು ಹತ್ತಿರದಿಂದ ನೋಡುವ ಸೌಭಾಗ್ಯ ನನಗೆ ಒದಗಿತ್ತು ಎಂದರು. ಇತ್ತೀಚಿನ ದಿನಗಳಲ್ಲಿ ಫ‌ಲಾಪೇಕ್ಷೆಯನ್ನಷ್ಟೇ ಬಯಸುವ  ಪ್ರಕಾಶಕರು ಹುಟ್ಟಿಕೊಂಡಿದ್ದಾರೆ. ಇಂತವರಿಂದ ಉತ್ತಮ ಪುಸ್ತಕಗಳು ಮರು ಮುದ್ರಣ ಕಾಣುವುದು ಅಸಾಧ್ಯ.

ಒಳ್ಳೇಯ ಪ್ರಕಾಶಕರು ಸಾಹಿತಿಯೊಬ್ಬರ ಕೃತಿಗಳು ಖರ್ಚಾದ ತಕ್ಷಣವೆ ಮತ್ತೆ ಮರು ಮುದ್ರಣ ಮಾಡುತ್ತಾರೆ. ಕೃತಿಕಾರ ನಿಧನದ ನಂತರವೂ ಅದನ್ನು ಮುಂದುವರಿಸುತ್ತಾರೆ. ಆದರೆ ಈ ಮನೋಭಾವನೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೆಪಿಟಿಸಿಎಲ್‌ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಎಚ್‌.ಸಿ.ಮುಕುಂದ್‌, ಮಾಜಿ ಅಧ್ಯಕ್ಷ ರಾಮನ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.