ಕನ್ನಡ ಪರ ಹೋರಾಟಗಳಲ್ಲಿ ಒಂದಾಗುವ ಚಿತ್ರರಂಗ


Team Udayavani, May 25, 2019, 3:09 AM IST

kannada

ಬೆಂಗಳೂರು: ರೈತರ ಸಮಸ್ಯೆ, ನೆಲ, ಜಲಕ್ಕೆ ಸಂಬಂಧಿಸಿದ ಕನ್ನಡ ಪರ ಹೋರಾಟಗಳ ಸಂದರ್ಭದಲ್ಲಿ ಚಿತ್ರರಂಗ ಒಂದಾಗುತ್ತದೆ ಎಂದು ಚಿತ್ರನಟ ಶಿವರಾಜ್‌ಕುಮಾರ್‌ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು, ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ನಟಿ ಜಯಂತಿ ಅವರಿಗೆ ಈ ಸಾಲಿನ “ಡಾ.ರಾಜ್‌ಕುಮಾರ್‌ ಸಂಸ್ಕೃತಿ ದತ್ತಿ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹೋರಾಟದಲ್ಲಿ ನಾನೊಬ್ಬನೇ ಪಾಲ್ಗೊಳ್ಳಲಿಲ್ಲ, ಇಡೀ ಚಿತ್ರರಂಗವೇ ಕುಟುಂಬದ ರೀತಿಯಲ್ಲಿ ಭಾಗವಹಿಸಿತ್ತು ಎಂದು ಸ್ಮರಿಸಿದರು.

ಕೆಲವೊಮ್ಮೆ ನದಿ ನೀರಿನ ಸಮಸ್ಯೆ ಸೇರಿದಂತೆ ಕನ್ನಡಪರ ಹೋರಾಟಗಳಲ್ಲಿ ಬಣ್ಣದ ಲೋಕದವರು ಬಂದಿಲ್ಲ ಎಂದು ದೂರುತ್ತಾರೆ. ಕನ್ನಡ ಪರ ಹೋರಾಟಗಳಲ್ಲಿ ಬಣ್ಣದ ಲೋಕದವರಿಗಿಂತಲೂ ಶಾಸಕರು, ಸಂಸದರು ಭಾಗವಹಿಸಬೇಕು. ಅವರು ಹೋರಾಟದ ಅಖಾಡಕ್ಕಿಳಿದರೆ ಮಾತ್ರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ ಎಂದರು.

ಜಯಂತಿ ಅಮ್ಮ, ಬಾಂಡ್‌ ಶೈಲಿಯ ಪಾತ್ರಗಳಿಂದ ಹಿಡಿದು ಎಲ್ಲಾ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅಪ್ಪಾಜಿ ಅವರನ್ನು ರಾಜ್‌ ಎಂದು ಕರೆಯುತ್ತಿದ್ದ ಬಣ್ಣದ ಲೋಕದ ಏಕೈಕ ಮಹಿಳೆ ಅಂದರೆ ಅದು, ಜಯಂತಿ ಅಮ್ಮ. ಅಪ್ಪಾಜಿ ಅವರ ಹಲವು ಸಿನಿಮಾಗಳಲ್ಲಿ ನಟಿಸಿದ ಇವರಿಗೆ ಅಪ್ಪಾಜಿ ಹೆಸರಿನ ದತ್ತಿ ಪ್ರಶಸ್ತಿ ನೀಡುತ್ತಿರುವುದು ಖುಷಿ ಕೊಟ್ಟಿದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಿರಿಯ ನಟಿ ಜಯಂತಿ, ಕನ್ನಡ ಸಾಹಿತ್ಯದ ಬಗ್ಗೆ ನನಗೆ ಗೌರವವಿದೆ. ಶ್ರೇಷ್ಠ ಕಾದಂಬರಿಕಾರರ ಚಿತ್ರಗಳಲ್ಲಿ ನಟಿಸಿದ ಸಂತಸವಿದೆ. ಬಣ್ಣದ ಲೋಕಕ್ಕೆ ಬರುವ ಮೊದಲು ಕನ್ನಡ ಸ್ಪಷ್ಟವಾಗಿ ಬರುತ್ತಿರಲಿಲ್ಲ. ಆಗ ನನಗೆ ಕನ್ನಡ ಕಲಿಸಿಕೊಟ್ಟ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ರಾಜ್‌ ಹೆಸರಿನ ದತ್ತಿ ಪ್ರಶಸ್ತಿಯನ್ನು ನನ್ನ ಮಗನ (ಶಿವರಾಜ್‌ಕುಮಾರ್‌) ಕೈಯಿಂದಲೇ ಪಡೆದಿರುವುದು ಮತ್ತಷ್ಟು ಖುಷಿ ಕೊಟ್ಟಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಮಾತನಾಡಿ, ಗೋಕಾಕ್‌ ಚಳವಳಿ ಸೇರಿದಂತೆ ಅನೇಕ ಕನ್ನಡ ಪರ ಹೋರಾಟಗಳಲ್ಲಿ ಡಾ.ರಾಜ್‌ಕುಮಾರ್‌ ಮುಂಚೂಣಿಯಲ್ಲಿದ್ದರು. ಆದರೆ ಈಗ ಕನ್ನಡ ಭಾಷೆ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್‌ಕುಮಾರ್‌ ಅವರ ಸ್ಥಾನ ತುಂಬುವವರು ಬೇಕಾಗಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಇದ್ದರು.

ಕನ್ನಡ ಸಾಹಿತ್ಯ ಎಂದರೆ ಪ್ರೀತಿ: ರಾಜ್‌ಕುಮಾರ್‌ ಅವರಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಬಂದಾಗಮ ಪ್ರಶಸ್ತಿ ಜತೆ ಒಂದು ಲಕ್ಷ ರೂ.ನಗದು ಕೂಡ ಬಂದಿತ್ತು. ಆಗ ಈ ಮೊತ್ತವನ್ನು ಏನು ಮಾಡಬೇಕು ಎಂಬುವುದೇ ರಾಜ್‌ಕುಮಾರ್‌ ಅವರಿಗೆ ತಿಳಿಯಲಿಲ್ಲ. ಈ ಸಂಬಂಧ ಪಾರ್ವತಮ್ಮ ಅವರ ಜತೆಗೂ ಚರ್ಚೆ ಮಾಡಿದ್ದರು.

ನಂತರ ಚಿತ್ರ ನಿರ್ದೇಶಕರೊಬ್ಬರ ಸಲಹೆಯಂತೆ ಆ ಮೊತ್ತವನ್ನು ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಿ ದತ್ತಿ ಪ್ರಶಸ್ತಿ ಸ್ಥಾಪಿಸಿದರು. ಕನ್ನಡ ಸಾಹಿತ್ಯ ಅಂದರೆ ರಾಜಕುಮಾರ್‌ ಅವರಿಗೆ ಪ್ರೀತಿ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಮತ್ತು ನಿರ್ಮಾಪಕಿ ಪಾರ್ವ ತಮ್ಮ ರಾಜ್‌ಕುಮಾರ್‌ ಅವರ ಸಹೋದರ ಎಸ್‌.ಎ.ಚನ್ನೇಗೌಡ ಹೇಳಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.