ಸುತ್ತೋಲೆ ವಾಪಸ್‌ ಪಡೆದ ರಾಜ್ಯ ಸರ್ಕಾರ


Team Udayavani, Sep 18, 2018, 6:35 AM IST

govt.jpg

ಬೆಂಗಳೂರು: ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಲೋಕಾಯುಕ್ತ ಸಂಸ್ಥೆ ಮಾಡಿರುವ ಶಿಫಾರಸುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲೇ ಲೋಪ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯನ್ನು ವಾಪಸ್‌ ಪಡೆದಿದೆ.

ಲೋಕಾಯುಕ್ತ ಶಿಫಾರಸುಗಳ ಜಾರಿ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರಿಗಳು ಕೈಗೊಳ್ಳುವ ಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಯವರು ಸೆ. 11ರಂದು ಹೊರಡಿಸಿದ ಸುತ್ತೋಲೆಯಲ್ಲಿ ದಿನಾಂಕವನ್ನು 2017ರ ಸೆ. 11 ಎಂದು ನಮೂದಿಸಲಾಗಿತ್ತು. ಅಲ್ಲದೆ, ಸುತ್ತೋಲೆ ಸಂಖ್ಯೆಯಲ್ಲೂ “ಸಿಆಸುಇ 27 ಸೇಲೋಯು 2017′ ಎಂದು ನಮೂದಾಗಿತ್ತು. ಈ ಸುತ್ತೋಲೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರೇ ಸಹಿ ಮಾಡಿದ್ದರು.

ಆದರೆ, ಸುತ್ತೋಲೆಯಲ್ಲಿ ನಮೂದಾಗಿದ್ದ ದಿನಾಂಕದ (2017ರ ಸೆ. 11) ವೇಳೆ ಮುಖ್ಯ ಕಾರ್ಯದರ್ಶಿಯಾಗಿದ್ದವರು ಕೆ.ರತ್ನಪ್ರಭಾ. ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರು ಅಧಿಕಾರ ವಹಿಸಿಕೊಂಡಿದ್ದು 2018ರ ಜುಲೈ 1ರಂದು. ಈ ತಾಂತ್ರಿಕ ಲೋಪದ ಹಿನ್ನೆಲೆಯಲ್ಲಿ ಸುತ್ತೋಲೆ ವಾಪಸ್‌ ಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೂಲಗಳು ತಿಳಿಸಿವೆ.

ಏನಿದು ಸುತ್ತೋಲೆ?:
ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಬರುವ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಥವಾ ಉಪಲೋಕಾಯುಕ್ತರು ಲೋಕಾಯುಕ್ತ ಕಾಯ್ದೆ 12(3)ರ ಅನ್ವಯ ತನಿಖೆ ನಡೆಸಿ ಆರೋಪ ಭಾಗಷಃ ಅಥವಾ ಪೂರ್ಣ ಸಾಬೀತಾಗಿದೆ ಎಂದು ಮನದಟ್ಟಾದಾಗ ಆ ಕುರಿತಂತೆ ಅಧಿಕಾರಿಗಳು, ನೌಕರರ ವಿರುದ್ಧ ಕ್ರಮಕ್ಕೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಮಾಡುತ್ತದೆ. ಈ ಶಿಫಾರಸನ್ನು ಸಕ್ಷಮ ಪ್ರಾಧಿಕಾರವು ಕಾಯ್ದೆಯ ನಿಯಮ 12(4)ರ ಅನ್ವಯ ಪರಿಶೀಲಿಸಿ ಮೂರು ತಿಂಗಳೊಳಗೆ ಕ್ರಮ ಕೈಗೊಂಡಿರುವ ಕುರಿತ ವರದಿಯನ್ನು ಲೋಕಾಯುಕ್ತ ಅಥವಾ ಉಪಲೋಕಾಯುಕ್ತಕ್ಕೆ ಕಳುಹಿಸಿಕೊಡಬೇಕು. 

ನಿಯಮಾವಳಿಯಂತೆ ಲೋಕಾಯುಕ್ತರ ಶಿಫಾರಸಿನನ್ವಯ ಸಕ್ಷಮ ಪ್ರಾಧಿಕಾರವು ಕ್ರಮ ಕೈಗೊಳ್ಳುವಾಗ ತನ್ನ ವಿವೇಚನೆ ಬಳಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆಯಾದರೂ ನಿಯಮ ಉಲ್ಲಂ ಸಿ ಸಕ್ಷಮ ಪ್ರಾಧಿಕಾರವು ಲೋಕಾಯುಕ್ತರ ಶಿಫಾರಸನ್ನು ಆರೋಪಿತ ಅಧಿಕಾರಿ ಅಥವಾ ನೌಕರರಿಗೆ ಕಳುಹಿಸಿಕೊಟ್ಟು ಅದರ ಕುರಿತಂತೆ ಅವರಿಂದ ಲಿಖೀತ ಹೇಳಿಕೆಗಳನ್ನು ಪಡೆಯುತ್ತಿತ್ತು. ಬಳಿಕ ಈ ಲಿಖೀತ ಹೇಳಿಕೆ ಆಧರಿಸಿ ಕ್ರಮ ಕೈಗೊಳ್ಳುತ್ತಿತ್ತು.

ಈ ಲೋಪವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರು ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸುತ್ತೋಲೆ ಕಳುಹಿಸಿ, ಶಿಸ್ತು ಕ್ರಮ ಕುರಿತಂತೆ ಲೋಕಾಯುಕ್ತರು ಮಾಡಿದ ಶಿಫಾರಸಿನ ಕುರಿತು ಸಕ್ಷಮ ಪ್ರಾಧಿಕಾರಿಗಳು ಕ್ರಮ ಕೈಗೊಳ್ಳುವಾಗ ಶಿಫಾರಸನ್ನು ಆರೋಪಿತ ನೌಕರರಿಗೆ ಕಳುಹಿಸಿಕೊಟ್ಟು ಅವರಿಂದ ಹೇಳಿಕೆ ಪಡೆಯಲು ಅವಕಾಶವಿಲ್ಲ. ಸಕ್ಷಮ ಪ್ರಾಧಿಕಾರವೇ ತನ್ನ ವಿವೇಚನೆ ಬಳಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.