ನಗರ ಹಾಳು ಮಾಡಿದ ಕ್ರಿಮಿನಲ್‌ಗ‌ಳು


Team Udayavani, May 20, 2018, 12:20 PM IST

nagara-halu.jpg

ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರನ್ನು ಹಾಳುಮಾಡಿದ ಫ‌ಸ್ಟ್‌ಕ್ಲಾಸ್‌ ಕ್ರಿಮಿನಲ್‌ಗ‌ಳು ನಾವು (ಬೆಂಗಳೂರಿಗರು) ಎಂದು ಪರಿಸರವಾದಿ ಡಾ.ಎ.ಎನ್‌. ಯಲ್ಲಪ್ಪರೆಡ್ಡಿ ಬೇಸರ ವ್ಯಕ್ತಪಡಿಸಿದರು. 

ನಗರದ ನಯನ ಸಭಾಂಗಣದಲ್ಲಿ ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ “ಮನೆಯಂಗಳದಲ್ಲಿ ಮಾತುಕತೆ’ಯಲ್ಲಿ ಮಾತನಾಡಿದ ಅವರು, ಪ್ರಪಂಚದ ಯಾವುದೇ ನಗರಗಳಲ್ಲಿ ಇಲ್ಲದಷ್ಟು ನೈಸರ್ಗಿಕ ಸಂಪತ್ತು ಈ ಉದ್ಯಾನ ನಗರಿಯಲ್ಲಿತ್ತು. ಇದೊಂದು ರೀತಿ “ಕಂಫ‌ರ್ಟ್‌ ಝೋನ್‌’ ಆಗಿತ್ತು.

ಅಂದು ಮಹಾತ್ಮ ಗಾಂಧಿ ಕೂಡ ತಮ್ಮ ಚಿಕಿತ್ಸೆಗಾಗಿ ಇಲ್ಲಿನ ನಂದಿಬೆಟ್ಟವನ್ನು ಆಯ್ಕೆ ಮಾಡಿಕೊಂಡಿದ್ದೂ ಇದೇ ಕಾರಣಕ್ಕಾಗಿ. ಐದು ನದಿಗಳು, 550 ಜಾತಿಯ ವೃಕ್ಷ ಸಮೂಹ, ಸಾವಿರಾರು ಕೆರೆಗಳು ಇಲ್ಲಿದ್ದವು. ಆದರೆ, ಇಂದು ಅವೆಲ್ಲವನ್ನೂ ನಾವು ನಾಶಪಡಿಸಿದ್ದೇವೆ. ಈ ಹಿನ್ನೆಲೆಯಲ್ಲಿ ನಾವು ಫ‌ಸ್ಟ್‌ಕ್ಲಾಸ್‌ ಕ್ರಿಮಿನಲ್‌ಗ‌ಳು ಎಂದು ಸೂಚ್ಯವಾಗಿ ಹೇಳಿದರು. 

ನಗರವನ್ನು ಈ ರೀತಿ ಬೆಳೆಯಲು ಬಿಡಬಾರದಿತ್ತು. ಅಷ್ಟರಮಟ್ಟಿಗೆ ಅಭಿವೃದ್ಧಿ ನಮ್ಮನ್ನು ಆವರಿಸಿಕೊಂಡಿದೆ. ಈ ನಿಟ್ಟಿನಲ್ಲಿ ಜನ ಆತ್ಮಾವಲೋಕನ ಮಾಡಿಕೊಳ್ಳುವ ಅವಶ್ಯಕತೆ ಇದೆ. ಬೆಳ್ಳಂದೂರು ಕೆರೆಯೊಂದರಲ್ಲೇ 80ರ ದಶಕದಲ್ಲಿ 40ಕ್ಕೂ ಹೆಚ್ಚು ಪ್ರಕಾರದ 10 ಸಾವಿರ ಪಕ್ಷಿಗಳು ಸಂತಾನ ಅಭಿವೃದ್ಧಿಗೆ ಬರುತ್ತಿದ್ದವು.

ಆದರೆ, ಈಗ ಅಲ್ಲಿ ಬರೀ ನೊರೆ ಬರುತ್ತಿದೆ. ಶತಮಾನಗಳ ಹಿಂದೆ ಸ್ಥಳೀಯರು ತಮ್ಮ ಆಸ್ತಿ ಮಾರಿ, ಆಭರಣಗಳನ್ನು ಅಡ ಇಟ್ಟು ಕೆರೆಗಳನ್ನು ಕಟ್ಟಿಸಿದ್ದರು. ಅವೆಲ್ಲವುಗಳನ್ನು ಅತಿಕ್ರಮಣ ಮಾಡಿಕೊಂಡಿರುವ ಕೋಟ್ಯಾಧೀಶರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮೀಕ್ಷೆಯಲ್ಲಿ ಮೊಬೈಲ್‌, ಟಿವಿ!: ಆರ್ಥಿಕ ಸಮೀಕ್ಷೆಯಲ್ಲಿ ಜನರ ಬಳಿ ಟಿವಿ, ಮೊಬೈಲ್‌, ಬೈಕ್‌, ಫ್ರಿಡ್ಜ್ ಇದೆಯೇ ಎಂದು ಸರ್ಕಾರ ಮಾಹಿತಿ ಪಡೆಯುತ್ತದೆ. ಆದರೆ, ಸಮೀಕ್ಷೆ ನಡೆಯುವ ಆ ಪ್ರದೇಶಗಳಲ್ಲಿ ಕೆರೆ ಬತ್ತಿರುವುದು, ಅಂತರ್ಜಲಮಟ್ಟ ಕುಸಿದಿರುವುದು, ಹಸಿರೀಕರಣ ಮರೆಯಾಗಿದ್ದರೂ ಆ ಬಗ್ಗೆ ಪ್ರಸ್ತಾಪವೂ ಇರುವುದಿಲ್ಲ. ಇದರರ್ಥ ಸರ್ಕಾರದ ನೀತಿಗಳಲ್ಲೂ ಬದಲಾವಣೆ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು. 

ಇದಕ್ಕೂ ಮುನ್ನ “ಮಾತುಕತೆ’ಯಲ್ಲಿ ತಾವು ಇಂಡಿಯನ್‌ ಫಾರೆಸ್ಟ್‌ ಕಾಲೇಜು ವಿದ್ಯಾರ್ಥಿಯಾಗಿ ಆಯ್ಕೆಯಾದಾಗ ಮನೆಗೆ ಕರೆದು ಪಫ್, ಕೇಕ್‌, ಹಣ್ಣು ತಿನ್ನಿಸಿದ ಟೈಲರ್‌ ಮುನಿಯಪ್ಪ, ಐಎಫ್ಎಸ್‌ ಪೂರೈಸಿದಾಗ ಮನೆಗೆ ಕರೆದು ಆತಿಥ್ಯ ನೀಡಿದ್ದ ಪಕ್ಕದ ಮನೆಯ ಅಮ್ಮನನ್ನು ಡಾ.ಯಲ್ಲಪ್ಪರೆಡ್ಡಿ ಸ್ಮರಿಸಿಕೊಂಡರು. 

ಮಕ್ಕಳು ಅರಳು ಹುರಿದಂತೆ ಮೊಬೈಲ್‌ ಫೋನ್‌ ಮತ್ತು ಕಾರುಗಳ ಹೆಸರುಗಳನ್ನು ಪಟಪಟನೆ ಹೇಳುವ ಮಕ್ಕಳು, 20 ಮರಗಳ ಹೆಸರು ಹೇಳಲು ಕಷ್ಟಪಡುತ್ತಾರೆ. ಇದು ಮಕ್ಕಳನ್ನು ನಾವು ಬೆಳೆಸುತ್ತಿರುವ ರೀತಿಗೆ ಕನ್ನಡಿ ಹಿಡಿಯುತ್ತದೆ. ಪೋಷಕರು ಮಕ್ಕಳಲ್ಲಿ ನಿಸರ್ಗದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು.
-ಡಾ.ಎ.ಎನ್‌. ಯಲ್ಲಪ್ಪರೆಡ್ಡಿ, ಪರಿಸರವಾದಿ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.