ಬಕ್ರೀದ್‌ ಆಚರಣೆಗೆ ನಗರ ಸಜ್ಜು


Team Udayavani, Aug 12, 2019, 3:00 AM IST

Udayavani Kannada Newspaper

ಬೆಂಗಳೂರು: ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಬಕ್ರೀದ್‌ ಹಬ್ಬವನ್ನು ಆಚರಿಸಲು ನಗರದ ಮುಸ್ಲಿಂ ಸಮುದಾಯ ಸಜ್ಜಾಗಿದೆ. ಇಸ್ಲಾಮಿ ಚಂದ್ರಮಾನ ಕ್ಯಾಲೆಂಡರ್‌ನ ಕೊನೆಯ ತಿಂಗಳು “ದುಲ್‌ಹಜ್‌’ನ 10ನೇ ತಾರೀಕಿನಂದು ಪ್ರತಿ ವರ್ಷ ವಿಶ್ವಾದ್ಯಂತ ಮುಸ್ಲಿಮರು ಬಕ್ರೀದ್‌ ಆಚರಿಸುತ್ತಾರೆ. ಅದರಂತೆ ಆ.12ರಂದು (ಸೋಮವಾರ) ರಾಜ್ಯ, ರಾಜಧಾನಿಯಲ್ಲಿ ಮುಸ್ಲಿಮರು ಹಬ್ಬ ಆಚರಿಸುತ್ತಿದ್ದಾರೆ.

ಹಬ್ಬದ ಪ್ರಯುಕ್ತ ನಗರದ ಎಲ್ಲ ಈದ್ಗಾ ಮೈದಾನ ಹಾಗೂ ಪ್ರಮುಖ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿದೆ. ಮುಖ್ಯವಾಗಿ ಖುದ್ದೂಸ್‌ ಸಾಬ್‌ ಈದ್ಗಾ, ಮೈಸೂರು ರಸ್ತೆ, ಟ್ಯಾನರಿ ರಸ್ತೆ, ಜಯನಗರ, ಚಾಮರಾಜಪೇಟೆ ಈದ್ಗಾ ಮೈದಾನ ಸೇರಿದಂತೆ ಬನ್ನೇರುಘಟ್ಟ ರಸ್ತೆಯ ಬಿಲಾಲ್‌ ಮಸೀದಿ, ಸಿಟಿ ಮಾರುಕಟ್ಟೆಯ ಜಾಮಿಯಾ ಮಸೀದಿ, ಶಿವಾಜಿನಗರದ ಸುಲ್ತಾನ್‌ಷಾ ಮಸೀದಿ, ಛೋಟಾ ಮೈದಾನ್‌, ಫ್ರೆಜರ್‌ಟೌನ್‌ನ ಫ‌ುಟ್ಬಾಲ್‌ ಗ್ರೌಂಡ್‌ ಸೇರಿದಂತೆ ನಗರದ ಬಹುತೇಕ ಎಲ್ಲ ಮಸೀದಿಗಳು ಹಾಗೂ ಕೆಲ ಪ್ರಮುಖ ಸ್ಥಳಗಳಲ್ಲಿ ಪ್ರಾರ್ಥನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇಸ್ಲಾಮಿನ ಪ್ರವಾದಿ ಹಜ್ರತ್‌ ಇಬ್ರಾಹೀಮರು ತಮ್ಮ ಮಗನನ್ನು ದೇವ ಮಾರ್ಗದಲ್ಲಿ ಬಲಿ ಅರ್ಪಿಸಲು ಮುಂದಾದಾಗ ದೇವಾದೇಶದಂತೆ ಮಗನ ಜಾಗದಲ್ಲಿ ಪ್ರಾಣಿಯೊಂದು ಉದ್ಭವವಾದ ಐತಿಹ್ಯ ಪಾಲಿಸಲು ಮುಸ್ಲಿಮರು ಬಕ್ರೀದ್‌ ದಿನ ಪ್ರಾಣಿ ಬಲಿ ನೀಡುತ್ತಾರೆ. ಇದೇ ದುಲ್‌ಹಜ್‌ ಮಾಸದಲ್ಲಿ 1ರಿಂದ 10ನೇ ತಾರೀಕಿನವರೆಗೆ ವಿಶ್ವದ ಮುಸ್ಲಿಮರು ಮೆಕ್ಕಾ-ಮದೀನಾದಲ್ಲಿ ಹಜ್‌ ಕರ್ಮ ನಿರ್ವಹಿಸುತ್ತಾರೆ.

ಹಬ್ಬದ ಹಿನ್ನೆಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯ ರಾಜಕೀಯ ಮುಖಂಡರು, ಧಾರ್ಮಿಕ ವಿದ್ವಾಂಸರು ಹಾಗೂ ವಿವಿಧ ಸಂಘ-ಸಂಸ್ಥೆಗಳು ನಗರ ಪೊಲೀಸ್‌ ಆಯುಕ್ತರಿಗೆ ಈಗಾಗಲೇ ಮನವಿ ಸಲ್ಲಿಸಿದ್ದು, ಆಯುಕ್ತರು ಅಗತ್ಯ ಕ್ರಮದ ಭರವಸೆ ನೀಡಿದ್ದಾರೆ. ಇದೇ ವೇಳೆ ಪ್ರಾಣಿ ಬಲಿ ನೀಡುವಾಗ ಪೊಲೀಸ್‌ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಮುದಾಯದ ಜನರಲ್ಲಿ ಮುಖಂಡರು ಮನವಿ ಮಾಡಿದ್ದಾರೆ.

ಬಕ್ರೀದ್‌ ಆಚರಣೆ ವೇಳೆ ಶಾಂತಿ-ಸೌಹಾರ್ದತೆ ಮುಖ್ಯ. ಇದಕ್ಕಾಗಿ ಮುಸ್ಲಿಮರು ಇತರ ಸಮುದಾಯಗಳ ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು. ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿ ಮತ್ತು ಸಂಘಟನೆಗಳ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
-ಮಹಮ್ಮದ್‌ ಅಥರುಲ್ಲಾ ಶರೀಫ್, ರಾಜ್ಯ ಮುಸ್ಲಿಂ ಮುತ್ತಹಿದ ಮಹಾಜ್‌ ಜಂಟಿ ಸಂಚಾಲಕ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.