ನಾಗರಿಕ ಸಮಾಜ ವೇದಿಕೆ ಪ್ರಣಾಳಿಕೆ ಬಿಡುಗಡೆ
Team Udayavani, Apr 10, 2019, 3:00 AM IST
ಬೆಂಗಳೂರು: ಜನಸಾಮಾನ್ಯರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂಬುದು ಸೇರಿದಂತೆ ಭ್ರಷ್ಟಾಚಾರ ಮುಕ್ತ ಆಡಳಿತ, ಉದ್ಯೋಗ ಖಾತ್ರಿ, ಕೃಷಿ ಸ್ವಾವಲಂಬನೆ, ಕಾರ್ಮಿಕರ ಹಕ್ಕುಗಳ ರಕ್ಷಣೆ ಮೊದಲಾದ ಅಂಶಗಳನ್ನು ಪ್ರಸ್ತಾಪಿಸಿರುವ ನಾಗಕರಿಕ ಸಮಾಜ ವೇದಿಕೆಯ ಪ್ರಣಾಳಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬಿಡುಗಡೆ ಮಾಡಿದರು.
ಮಂಗಳವಾರ ನಗರದ ಎಸ್ಸಿಎಂ ಹೌಸ್ನಲ್ಲಿ ಸಿವಿಲ್ ಸೊಸೈಟಿ ಫೋರಂ ವತಿಯಿಂದ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಅಂಗವಾಗಿ ಜನರ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.
ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಣದ ಆದ್ಯತೆ, ಗ್ರಾಮೀಣ ಹಾಗೂ ನಗರ ಆಡಳಿತ ವಿಕೇಂದ್ರೀಕರಣ, ಬಲಿಷ್ಠ ಲೋಕಪಾಲ್ ಹಾಗೂ ಲೋಕಯುಕ್ತ ರಚನೆ ಮಾಡಬೇಕು. ಚುನಾವಣಾ ಸುಧಾರಣೆ ತರಬೇಕು, ಕೃಷಿ ಆದ್ಯತೆಯ ವಲಯ ಆಗಬೇಕು, ವಲಸೆ ನಿಲ್ಲಿಸಲು ಕ್ರಮ ಆಗಬೇಕು ಮತ್ತು ಭೂ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂಬದನ್ನು ಸಮಗ್ರವಾಗಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಮಾತನಾಡಿ, ಭವಿಷ್ಯದ ನೆಮ್ಮದಿಯ ಬದುಕಿಗೆ ಬೇಕಾದ ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯದ ವಿಷಯಗಳು ಲೋಕಸಭಾ ಚುನಾವಣೆಯ ಪ್ರಮುಖ ವಿಷಯಗಳಾಗಬೇಕು. ಮನುಷ್ಯ ಗೌರವಯುತವಾಗಿ ಜೀವಿಸಲು ಅಗತ್ಯವಾದ ಶಿಕ್ಷಣ, ಉದ್ಯೋಗ, ಆರೋಗ್ಯ, ಆಹಾರ, ವಸತಿ ಸೇರಿದಂತೆ ಎಲ್ಲ ಸೌಲಭ್ಯಗಳು ಪ್ರಮುಖ ವಿಷಯವಾಗಿ ಚರ್ಚೆಯಾಗಬೇಕಿದೆ ಎಂದರು. ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್