ವಕೀಲರ ಕೊರೊನಾ ಮಾತಿಗೆ ಸಿಜೆ ವಿಚಲಿತ


Team Udayavani, Mar 17, 2020, 3:06 AM IST

highcourt3

ಬೆಂಗಳೂರು: ಮಾರಕ ಕೊರೊನಾ ವೈರಸ್‌ ವಿಚಾರವಾಗಿ ಹಿರಿಯ ವಕೀಲರೊಬ್ಬರು ಆಡಿದ ಮಾತು ಗಲಿಬಿಲಿ ಉಂಟು ಮಾಡಿದ ಪ್ರಸಂಗ ಸೋಮವಾರ ಹೈಕೋರ್ಟ್‌ನಲ್ಲಿ ನಡೆಯಿತು. ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಮಧ್ಯಾಹ್ನ ಪ್ರಕರಣದವೊಂದರ ವಿಚಾರಣೆ ನಡೆಯುತ್ತಿತ್ತು.

ಈ ವೇಳೆ ರಾಜ್ಯ ಸರ್ಕಾರ ಸ್ವಾಮ್ಯದ ಮಂಡಳಿಯೊಂದರ ಪರ ಹಾಜರಿದ್ದ ಹಿರಿಯ ವಕೀಲರೊಬ್ಬರು ಮಾಸ್ಕ್ ಹಾಕಿಕೊಂಡು ವಾದ ಮಂಡಿಸುತ್ತಿದ್ದರು. ವಾದ ಮಂಡಿಸಿದ ಬಳಿಕ ಏಕಾಏಕಿ “ಮೈ ಲಾರ್ಡ್‌ ಕ್ಷಮೆ ಇರಲಿ’ ಎಂದು ಕೇಳಿದರು. ಕ್ಷಮೆ ಏಕೆ ಎನ್ನುವಂತೆ ಮುಖ್ಯ ನ್ಯಾಯಮೂರ್ತಿಗಳು ಹುಬ್ಬೇರಿಸಿ ನೋಡಿದರು.

“ನನ್ನ ಕಕ್ಷಿದಾರರೊಬ್ಬರಿಗೆ ಕೊರೊನಾ ವೈರಸ್‌ ಅಂಟಿಕೊಂಡಿದೆ. ನಾನು ಅವರನ್ನು ಭೇಟಿಯಾಗಬೇಕಾಯಿತು. ಅದಕ್ಕಾಗಿ “ಸೆಲ್ಫ್ ಐಸೋಲೇಷನ್‌’ ಮಾಡಿಕೊಂಡಿದ್ದು, ಮಾಸ್ಕ್ ಹಾಕಿ ಕೊಂಡಿದ್ದೇನೆ ಎಂದು ಹೇಳಿದರು’ ಇದನ್ನು ಕೇಳಿದ್ದೇ ತಡ ಮುಖ್ಯ ನ್ಯಾಯಮೂರ್ತಿ, ವಕೀಲರು ತಬ್ಬಿಬ್ಟಾದರು.

“ನೀವು ಕೋರ್ಟ್‌ ಗೆ ಬರಬಾದಿತ್ತು, ತಕ್ಷಣ ನೀವು ಹೊರ ಹೋಗುವುದೇ ದೊಡ್ಡ ಐಸೋಲೇಷನ್‌. ನೀವು ಹಾಜರಾಗದಿದ್ದರೆ ವಿಚಾರಣೆ ಮುಂದೂಡಲಾಗುವುದು, ಯಾವುದೇ ವ್ಯತಿರಿಕ್ತ ಆದೇಶ ಅಥವಾ ನಿರ್ದೇಶನ ನೀಡಲಾಗುವುದಿಲ್ಲ ಎಂದರು. ಸ್ವಯಂ ನಿಗಾ ವಹಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಆದರೆ, ತುರ್ತು ಪ್ರಕರಣ ಇರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಮಾಸ್ಕ್ ಧರಿಸಿ ಬಂದಿದ್ದೇನೆ ಎಂದು ಹೇಳುತ್ತಿರುವಾಗಲೇ ಆ ಹಿರಿಯ ವಕೀಲರು ಜೋರಾಗಿ ಕೆಮ್ಮಿದರು. ಇದರಿಂದ ವಿಚಲಿತಗೊಂಡ ಮುಖ್ಯ ನ್ಯಾಯಮೂರ್ತಿಗಳು ನಿಮ್ಮ ಕಿರಿಯ ಸಹೋದ್ಯೋಗಿ ವಾದ ಮಂಡಿಸುತ್ತಾರೆ. ಇಂತಹ ಸ್ಥಿತಿಯಲ್ಲಿ ನೀವು ಹೊರ ಹೋಗುವುದು ಒಳ್ಳೆಯದು ಎಂದರು.

ಈ ವೇಳೆ ಕೋರ್ಟ್‌ನಲ್ಲಿದ್ದ ವಕೀಲರು ಕೆಲ ಕ್ಷಣ ಗಲಿಬಿಲಿಗೊಂಡರು. ವಕೀಲರು ಕೋರ್ಟ್‌ ಹಾಲ್‌ನಿಂದ ಹೊರಹೋದ ಮೇಲೆ “ನಿಮ್ಮ ಸಿನೀಯರ್‌ಗೆ 14 ದಿನದ ನಿಗಾ ಅವಧಿಯಲ್ಲಿ (ಕ್ವಾರಂಟೇನ್‌ ಪಿರಿಯಡ್‌) ಇರುವಂತೆ ಹೇಳಿ ಎಂದು ಕಿರಿಯ ಸಹೋದ್ಯೋಗಿ ವಕೀಲರಿಗೆ ಮುಖ್ಯ ನ್ಯಾಯಮೂರ್ತಿಗಳು ಸೂಚಿಸಿದರು.

ಕಕ್ಷಿದಾರರಿಗೆ ಕೋರ್ಟ್‌ ಹಾಲ್‌ ಪ್ರವೇಶ ನಿರ್ಬಂಧ
ಬೆಂಗಳೂರು: ಕೊರೊನಾ ವೈರಸ್‌ ಹರಡುವ ಆತಂಕ ಸೋಮವಾರ ಹೈಕೋರ್ಟ್‌ಗೂ ಕಾಡಿತು. ಕೊರೊನಾ ವೈರಸ್‌ ಸೋಂಕು ಹರಡುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಕೋರ್ಟ್‌ ಪ್ರಧಾನ ಪೀಠದ ಕೋರ್ಟ್‌ ಹಾಲ್‌ ಪ್ರವೇಶಿಸದಂತೆ ಕಕ್ಷಿದಾರರಿಗೆ ನಿರ್ಬಂಧ ಹೇರಲಾಗಿತ್ತು.

ವಕೀಲರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿತ್ತು. ನ್ಯಾಯಪೀಠಗಳು ತುರ್ತು ಪ್ರಕರಣಗಳ ವಿಚಾರಣೆಗೆ ಆದ್ಯತೆ ನೀಡಿ, ಉಳಿದ ಪ್ರಕರಣಗಳ ವಿಚಾರಣೆಗೆ ದಿನಾಂಕ ನೀಡಲಾಯಿತು. ಅನೇಕ ವಕೀಲರು ತಮ್ಮ ಪ್ರಕರಣಗಳ ವಿಚಾರಣೆ ಮುಗಿದ ಕೂಡಲೇ ಹೈಕೋರ್ಟ್‌ನಿಂದ ಹೊರ ನಡೆದರು. ಕೋರ್ಟ್‌ ಹಾಲ್‌ಗ‌ಳಲ್ಲಿ ಅನಗತ್ಯವಾಗಿ ಕುಳಿತಿದ್ದ ಸರ್ಕಾರಿ ಅಧಿಕಾರಿಗಳನ್ನೂ ಹೊರಗಡೆ ಕಳುಹಿಸಲಾಯಿತು.

ಕಕ್ಷಿದಾರರನ್ನು ಹೊರ ಕಳುಹಿಸಿದ ಸಿಜೆ: ಮುಖ್ಯ ನ್ಯಾಯಮೂರ್ತಿ ಕೋರ್ಟ್‌ ಹಾಲ್‌ನಲ್ಲಿ ಬೆಳಗ್ಗೆ ಕಕ್ಷಿದಾರರು, ಸರ್ಕಾರಿ ಅಧಿಕಾರಿ ಹಾಗೂ ಸಾರ್ವಜನಿಕರು ತುಂಬಿದ್ದರು. ಇದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಓಕಾ, ಅನವಶ್ಯಕವಾಗಿರುವ ಕಕ್ಷಿದಾರರು, ಅಧಿಕಾರಿಗಳು ಕೋರ್ಟ್‌ ಹಾಲ್‌ನಿಂದ ಹೊರಗೆ ಹೋಗುವಂತೆ ಮೌಖೀಕವಾಗಿ ಸೂಚಿಸಿದರು.

ಸಿಜೆಐ ವಿಡಿಯೋ ಕಾನ್ಫರೆನ್ಸ್: ಸೋಮವಾರ ಮಧ್ಯಾಹ್ನವಷ್ಟೇ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಎಲ್ಲ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಜತೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ್ದಾರೆ. ಹೇಗೂ ಕೋರ್ಟ್‌ಗಳಿಗೆ ಶೀಘ್ರವೇ ಬೇಸಿಗೆ ರಜೆ ಆರಂಭವಾಗಲಿದೆ. ಆದಾಗ್ಯೂ, ಈಗ ಕೋರ್ಟ್‌ ಬಂದ್‌ ಮಾಡುವುದು ಬೇಡ. ತುರ್ತು ಪ್ರಕರಣಗಳನ್ನು ಮಾತ್ರವೇ ವಿಚಾರಣೆ ನಡೆಸಿ ಎಂದಿದ್ದಾರೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.