ಪ್ರತಿಷ್ಠೆ ಬಿಟ್ಟು ಜನಹಿತಕ್ಕೆ ಹಕ್ಕು ಚಲಾಯಿಸಿ


Team Udayavani, Nov 16, 2018, 11:38 AM IST

pratishte.jpg

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೂ ಸರ್ವಾಧಿಕಾರಿ ಮನೋಭಾವ ಬರಬಾರದು. ಆದರೆ, ಇತ್ತೀಚೆಗೆ ದೇಶದ ರಾಜಕಾರಣದ ಎಲ್ಲ ಹಂತಗಳಲ್ಲಿ ಸರ್ವಾಧಿಕಾರಿ ಮನೋಭಾವ ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಹಾಗೂ ವಿಧಾನ ಪರಿಷತ್‌ಗೆ ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಕಾಸಸೌಧದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನಲ್ಲಿ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮವೆನಿಸಿದೆ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೊಬ್ಬರಿಗೂ ಸರ್ವಾಧಿಕಾರಿ ಮನೋಭಾವ ಇರಬಾರದು. ಆಂತರಿಕ ಪ್ರಜಾಪ್ರಭುತ್ವ ಕೂಡ ಬಹಳ ಮುಖ್ಯ ಎಂದರು.

ರಾಜ್ಯದ 6 ಕೋಟಿ ಜನರಲ್ಲಿ 300 ಮಂದಿಯಷ್ಟೇ ವಿಧಾನಸಭೆ, ವಿಧಾನ ಪರಿಷತ್‌ ಪ್ರವೇಶಿಸಲು ಸಾಧ್ಯ. ಹಾಗಾಗಿ ಆಯ್ಕೆಯಾದ ಪ್ರತಿಯೊಬ್ಬರೂ ಪುಣ್ಯವಂತರೆನ್ನಬಹುದಾಗಿದ್ದು, ಜನಹಿತ ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸಬೇಕು. ಸದನದಲ್ಲಿ ಪಾಲ್ಗೊಳ್ಳುವುದು, ವಿಷಯ ಪ್ರಸ್ತಾಪ, ಸಾರ್ವಜನಿಕ ಹಿತಕ್ಕಾಗಿ ಚರ್ಚಿಸುವ ಬಗ್ಗೆ ತಿಳಿದುಕೊಳ್ಳಬೇಕು. ಅಧಿವೇಶನಕ್ಕೆ ಗೈರಾಗಬಾರದು. ಸದನ ನಡೆಯುವ ವೇಳೆ ಹೊರಗಿರಬಾರದು.

ಸಮಿತಿ ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಸ್ತ್ರ ಸಂಹಿತೆ ಬಗ್ಗೆಯೂ ಗಮನವಿರಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸನ ಮಾಡುವ ಅವಕಾಶವಿರುತ್ತದೆ. ಆಗ ವೈಯಕ್ತಿಕ ಜೀವನ, ಆಸ್ತಿಪಾಸ್ತಿ, ಕೌಟುಂಬಿಕ ಹಿನ್ನೆಲೆ, ವರ್ಚಸ್ಸು ತಮ್ಮ ಕಾರ್ಯ ನಿರ್ವಹಣೆಗೆ ಸಂಘರ್ಷ ಒಡ್ಡುವಂತಿರಬಾರದು. ಶಾಸಕರಿಗಿರುವ ಹಕ್ಕುಗಳನ್ನು ಪ್ರತಿಷ್ಠೆಗೆ ಬದಲಾಗಿ ಜನಹಿತಕ್ಕಾಗಿ ಚಲಾಯಿಸಬೇಕು ಎಂದು ಕಿವಿಮಾತು ಹೇಳಿದರು.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಈಚಿನ ವರ್ಷಗಳಲ್ಲಿ ಶಾಸಕರು ಸದನದಲ್ಲಿ ಹೆಚ್ಚು ಸಮಯ ಪಾಲ್ಗೊಳ್ಳುವುದಿಲ್ಲ. ಸಹಿ ಮಾಡಿ ಹೊರ ಹೋಗುವುದು, ಗೈರಾಗುವುದು ಹೆಚ್ಚಾಗುತ್ತಿದ್ದು, ಜನರಲ್ಲಿ ಶಾಸಕರ ಬಗ್ಗೆ ಗೌರವ ಕಡಿಮೆಯಾಗುತ್ತಿರುವಂತಿದೆ. ಸಮಿತಿ ಸಭೆಗಳಲ್ಲಿ ಪಾಲ್ಗೊಳ್ಳುವುದರಿಂದ ಬಹಳಷ್ಟು ಮಾಹಿತಿ ಸಿಗುತ್ತದೆ. ಅಧಿವೇಶನ ನಡೆಯುವಾಗ ಜನಪರ ವಿಚಾರವಿದ್ದರೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲು ಅವಕಾಶವಿದೆ. ಜನಸೇವೆಗೆ ದೊರೆತ ಅವಕಾಶ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಂಶಾಡಳಿತ ನಿಲ್ಲಬೇಕು: ಪ್ರಜಾಪ್ರಭುತ್ವದ ಮಹತ್ವ ಹಾಗೂ ಭಾರತದ ಸಂವಿಧಾನದ ಆಶಯಗಳು/ ಶಾಸನ ರಚನೆ ಮತ್ತು ಶಾಸಕರ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದ ಮಾಜಿ ಸಭಾಪತಿ ಬಿ.ಎಲ್‌.ಶಂಕರ್‌, ರಾಜಕಾರಣ ಇಂದು ಅಪರಾಧೀಕರಣ, ವ್ಯಾಪಾರೀಕರಣ ಹಾಗೂ ಕೋಮುವಾದೀಕರಣ ಎಂಬಂತಾಗಿದ್ದು, ಸಂವಿಧಾನಕ್ಕೆ ಸವಾಲಾಗಿವೆ.

ಗಣಿ, ರಿಯಲ್‌ ಎಸ್ಟೇಟ್‌, ನಾನಾ ಉದ್ಯಮ ನಡೆಸುತ್ತಿರುವವರು ರಾಜಕಾರಣದಲ್ಲಿರುವುದರಿಂದ ಕಾನೂನು ರೂಪಿಸುವವರೇ ಫ‌ಲಾನುಭವಿಗಳು ಎಂಬಂತಾಗುತ್ತಿದೆ. ವಂಶಾಡಳಿತ ರಾಜಕಾರಣ ದೊಡ್ಡ ಸವಾಲಾಗಿದೆ. ಉತ್ತರದಾಯಿತ್ವದ ಕೊರತೆ ತೀವ್ರವಾಗಿದ್ದು, ಇವೆಲ್ಲಾ ಸವಾಲುಗಳೆನಿಸಿವೆ. ಕೆಲ ಸಲಹೆಗಳು ನಮ್ಮ ಪಕ್ಷದವರಿಗೂ ಹಿಡಿಸುವುದಿಲ್ಲ ಎಂದು ಹೇಳಿದರು.

ಏಕಕಾಲಕ್ಕೆ ಚುನಾವಣೆ: ಇವು ಪರಿಹಾರವಾಗಬೇಕಾದರೆ ಶಾಸನಸಭೆ, ಲೋಕಸಭೆಗೆ ನಿರ್ದಿಷ್ಟ ಅವಧಿ ನಿಗದಿಪಡಿಸಿ ಕಡ್ಡಾಯವಾಗಿ ಪೂರ್ಣಗೊಳಿಸುವಂತಾಗಬೇಕು. ಏಕಕಾಲಕ್ಕೆ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯಬೇಕು. ಹಾಗೆಯೇ ಗ್ರಾಮ ಪಂಚಾಯ್ತಿಯಿಂದ ಜಿಲ್ಲಾ ಪಂಚಾಯ್ತಿವರೆಗೆ ಏಕಕಾಲಕ್ಕೆ ಚುನಾವಣೆ ನಡೆಯಬೇಕು. ಪ್ರಧಾನಿ, ರಾಷ್ಟ್ರಪತಿ, ಮುಖ್ಯಮಂತ್ರಿ, ರಾಜ್ಯಪಾಲರು, ಸಭಾಧ್ಯಕ್ಷರು, ಸಭಾಪತಿ, ಸಚಿವರಿಗೆ ಗರಿಷ್ಠ 2 ಅವಧಿಯಷ್ಟೇ ಅವಕಾಶ ನೀಡಬೇಕು.

ಪಕ್ಷಾಂತರ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಬೇಕು. ಉಪಚುನಾವಣೆಯೇ ಇರಬಾರದು. ಒಂದೊಮ್ಮೆ ಉಪ ಚುನಾವಣೆ ಪರಿಸ್ಥಿತಿ ನಿರ್ಮಾಣವಾದರೆ ಅತಿ ಹೆಚ್ಚು ಮತ ಪಡೆದ ಎರಡನೇ ಅಭ್ಯರ್ಥಿಗೆ ಅವಕಾಶ ನೀಡಬೇಕು. ಮತದಾನ ಕಡ್ಡಾಯಗೊಳಿಸಿ ಮತದಾರರ ಪಟ್ಟಿ ಕರಾರುವಕ್ಕಾಗಿ ಇರಬೇಕು ಎಂದು ಸಲಹೆ ನೀಡಿದರು. ಸಚಿವ ಆರ್‌.ಶಂಕರ್‌, ವಿಧಾನಸಭೆ ನಿರ್ದೇಶಕಿ ವಿಶಾಲಾಕ್ಷಿ ಉಪಸ್ಥಿತರಿದ್ದರು.

ಹೊಸ ಶಾಸಕರ ನಿರಾಸಕ್ತಿ: ಪ್ರಥಮ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ಗುರುವಾರ ಬೆಳಗ್ಗೆ 10 ಗಂಟೆಗೆ ತರಬೇತಿ ಶಿಬಿರ ನಿಗದಿಯಾಗಿತ್ತು. 10 ಗಂಟೆ ಹೊತ್ತಿಗೆ ಮೂವರು ಮಾತ್ರ ಹಾಜರಿದ್ದರು.  10.30ಕ್ಕೆ ಉದ್ಘಾಟನಾ ಸಮಾರಂಭ ಆರಂಭವಾಗುವ ವೇಳೆಗೆ ಕೇವಲ 11 ಶಾಸಕರಷ್ಟೇ ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭ ಮುಗಿಯುವ ವೇಳೆಗೆ ಶಾಸಕರ ಸಂಖ್ಯೆ 25 ದಾಟಿರಲಿಲ್ಲ. ಮೊದಲ ದಿನದ ಶಿಬಿರದಲ್ಲಿ ಸುಮಾರು 50 ಶಾಸಕರು ಪಾಲ್ಗೊಂಡಿದ್ದರು. ಕೆಲವು ಶಾಸಕರಿಗೆ ಬುಧವಾರ ಮಧ್ಯಾಹ್ನ ಶಿಬಿರದ ಬಗ್ಗೆ ಮಾಹಿತಿ ನೀಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳೂರಿಗೆ ಬಂದಿದ್ದರಿಂದ ಆ  ಭಾಗದ ಕೆಲ ಶಾಸಕರಿಗೆ ಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಶಾಸಕಿ ರೂಪಾ ತಿರುಗೇಟು: ತರಬೇತಿ ಶಿಬಿರದಲ್ಲಿ ಸಂವಾದಕ್ಕೂ ಅವಕಾಶ ಕಲ್ಪಿಸಲಾಗಿತ್ತು. ಬಿ.ಎಲ್‌.ಶಂಕರ್‌ ಅವರು ವಂಶಾಡಳಿತ ಸಂವಿಧಾನಕ್ಕೆ ಸವಾಲು ಎಂದಿದ್ದನ್ನು ಶಾಸಕಿ ರೂಪಾ ಶಶಿಧರ್‌ ಸಂವಾದದ ವೇಳೆ ಪ್ರಸ್ತಾಪಿಸಿದರು. ಕ್ರೀಡೆ, ಸಿನಿಮಾ ಇತರೆ ರಂಗಗಳಲ್ಲೂ ತಂದೆ, ತಾಯಿಯಂತೆ ಮಕ್ಕಳು ಅದೇ ಕ್ಷೇತ್ರ ಪ್ರವೇಶಿಸುತ್ತಾರೆ. ಅದರಂತೆ ರಾಜಕೀಯದಲ್ಲೂ ಇದೆ ಎಂದು ರೂಪಾ ಶಶಿಧರ್‌ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದರು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.