ಹಳ್ಳಿಗಳಲ್ಲಿ ನಡೆಯಲಿದೆ ಶುಚಿತ್ವ ರ‍್ಯಾಂಕ್ ಸರ್ವೆ


Team Udayavani, Dec 29, 2021, 2:32 PM IST

Untitled-1

ಸಾಂದರ್ಭಿಕ ಚಿತ್ರ

ಬೆಂಗಳೂರು: ಗ್ರಾಮ ಸ್ವಚ್ಛತೆ ಸಂಬಂಧಿಸಿದಂತೆ ಕೇಂದ್ರದ ಸ್ವಚ್ಛ ಸರ್ವೇಕ್ಷಣ ತಂಡ , ರ್‍ಯಾಂಕಿಂಗ್‌ ನೀಡುವ ಸಂಬಂಧ ಹಳ್ಳಿಗರಿಂದಲೇ ಮಾಹಿತಿ ಪಡೆಯಲು ಮುಂದಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಗ್ರಾಮೀಣ ಜನರ ಬಳಿಗೆ ಹೋಗಿ ಸ್ವಚ್ಛತೆ ವಿಚಾರದಲ್ಲಿ ಕೈಗೊಂಡಿರುವ ಕ್ರಮ ಹಾಗೂ ಪ್ರಗತಿಯ ಸಾಕ್ಷಾತ್‌ ದರ್ಶನ ಮಾಡಿ ಮಾಹಿತಿ ಸಂಗ್ರಹಿಸಿ ಆಯಾ ಜಿಲ್ಲೆಗಳಿಗೆ ಶ್ರೇಯಾಂಕ ಕುರಿತು‌ ವರದಿ ನೀಡಲಿದೆ. ಕೇಂದ್ರ ತಂಡ ಸದ್ಯದಲ್ಲೇ ಬೆಂಗಳೂರು ನಗರ ಜಿಪಂನ ಹಲವು ಗ್ರಾಪಂಗಳಿಗೆ ಭೇಟಿ ನೀಡಿ ನೇರ ಪರಿವೀಕ್ಷಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ತಂಡವು, ಕೇಂದ್ರದ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಡಿ ನಡೆದಿರುವ ಗ್ರಾಮೀಣ ನೈರ್ಮಲ್ಯ ಸುಧಾರಣೆ ಸೇರಿದಂತೆ ಮತ್ತಿತರರ ಪೂರಕ ಮಾಹಿತಿಗಳನ್ನು ಹಳ್ಳಿಗರಿಂದಲೇ ಕಲೆಹಾಕಲಿದೆ. ಪ್ರತಿಹಳ್ಳಿಯಲ್ಲಿ ವಯಕ್ತಿಕ ಗೃಹ ಶೌಚಾಲಯ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಪ್ರಗತಿ ದತ್ತಾಂಶಗಳ ಬಗ್ಗೆ ಮಾಹಿತಿ ಪಡೆಯಲಿದೆ.

ಒಟ್ಟು ಮೂರು ಹಂತಗಳಲ್ಲಿ ಜಿಲ್ಲೆಗಳಲ್ಲಿ ಮೌಲ್ಯಂಕನ ನಡೆಯಲಿದೆ. ಅದರಲ್ಲಿ ಒಂದು ಸಾರ್ವಜನಿಕರಿಂದ ನೇರವಾಗಿ ಮಾಹಿತಿಯನ್ನು ಪಡೆಯವುದಾಗಿದೆ. ಈ ಪ್ರಕ್ರಿಯೆಯಲ್ಲಿ ಹಳ್ಳಿಗರು ಆ್ಯಪ್‌ ಮತ್ತು ವೆಬ್‌ಸೈಟ್‌ ಮೂಲಕ ತಮ್ಮ ಗ್ರಾಮಗಳಲ್ಲಿ ನಡೆದಿರುವ ಸ್ವತ್ಛತೆ ಸೇರಿದಂತೆ ಇನ್ನಿತರ ಪೂರಕ ಮಾಹಿತಿಯನ್ನು ಕೇಂದ್ರದ ತಂಡಕ್ಕೆ ನೀಡಬಹುದಾಗಿದೆ ಎಂದು ನಗರ ಜಿಪಂನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ವಚ್ಛ ಭಾರತ್‌ ಮಿಷನ್‌ (ಗ್ರಾಮೀಣ) ಯೋಜನೆಯ ಹಂತ-2 ರ ಘಟಕಾಂಶಗಳು ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ, ಘನ ತ್ಯಾಜ್ಯ ನಿರ್ವಹಣೆ, ಋತು ಚಕ್ರ ನೈರ್ಮಲ್ಯ ನಿರ್ವಹಣೆ ಸೇರಿದಂತೆ ಹಲವು ವಿಷಯಗಳಿಗೆ ಸಮೀಕ್ಷೆಯಲ್ಲಿ ಕೇಂದ್ರ ತಂಡ ಹೆಚ್ಚಿನ ಆದ್ಯತೆಯನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಗಳಿಗೆ ರ್‍ಯಾಂಕ್‌ ನೀಡುವ ಕುರಿತಂತೆ ಕೇಂದ್ರ ಕುಡಿವ ನೀರು ಮತ್ತು ನೈರ್ಮಲ್ಯ ಮಂತ್ರಾಲಯ 2018 ಮತ್ತು 2019 ನೇ ಸಾಲಿನಿಂದಲೂ ಸ್ವಚ್ಛ ಸರ್ವೇಕ್ಷಣೆ ಗ್ರಾಮೀಣ ಯೋಜಿಸುತ್ತಿದೆ. ಕೇಂದ್ರ ತಂಡ ದತ್ತಾಂಶಗಳ ಜತೆಗೆ ಶಾಲೆ, ಅಂಗನವಾಡಿ ಕೇಂದ್ರ, ಸಂತೆ, ಬಸ್‌ ನಿಲ್ದಾಣ ಮತ್ತು ಧಾರ್ಮಿಕ ಕೇಂದ್ರಗಳು ಸರ್ವೆಯನ್ನೂ ಮಾಡಲಿದ್ದಾರೆ.

86 ಗ್ರಾಪಂಗಳಲ್ಲಿ ಸಮೀಕ್ಷೆ :  ಬೆಂಗಳೂರು ನಗರ ಜಿಪಂ ವ್ಯಾಪ್ತಿಯಲ್ಲಿ ಐದು ತಾಲೂಕುಗಳು ಹಾಗೂ 20 ಹೋಬಳಿಗಳಿವೆ. ಜತೆಗೆ 86 ಗ್ರಾಪಂ ಸೇರಿದಂತೆ ಒಟ್ಟು 588 ಹಳ್ಳಿಗಳಿವೆ. ಇದರಲ್ಲಿ ಆಯ್ದ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ ನೀಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಸಾರ್ವಜನಿಕ ಸ್ಥಗಳಲ್ಲಿ ನಡೆದಿರುವ ಸ್ವಚ್ಛತೆಯ ಕಾರ್ಯದ ಬಗ್ಗೆ ಪೂರಕ ಮಾಹಿತಿ ಸಂಗ್ರಹಿಸಲಿದೆ.

ಗ್ರಾಮ ಸ್ವಚ್ಛತೆ ಸಂಬಂಧಿಸಿದಂತೆ ಶೀಘ್ರದಲ್ಲೆ ಕೇಂದ್ರ ತಂಡ ಬೆಂಗಳೂರು ನಗರ ಜಿಲ್ಲೆಯ ಹಲವು ಗ್ರಾಪಂಗಳಿಗೆ ಭೇಟಿನೀಡಿ ಖುದ್ದಾಗಿ ಹಳ್ಳಿಗರಿಂದಲೇ ಶುಚಿತ್ವಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಿದೆ.ಈ ಸ್ವಚ್ಛ ಸರ್ವೇಕ್ಷಣೆ ಸರ್ವೇಯಲ್ಲಿ ಜನರು ಕೂಡ ಆ್ಯಪ್‌ ಮೂಲಕ ಮಾಹಿತಿ ನೀಡಬಹುದಾಗಿದೆ.– ನೋಮೇಶ್‌ ಕುಮಾರ್‌,ಉಪಕಾರ್ಯದರ್ಶಿ, ಬೆಂಗಳೂರು ನಗರ ಜಿಪಂ

 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.