ಅಪಘಾತದಲ್ಲಿ ಬಟ್ಟೆ ವ್ಯಾಪಾರಿ ಸಾವು
Team Udayavani, Apr 11, 2019, 3:00 AM IST
ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಪೇಟೆ ಸಂಚಾರ ಠಾಣೆ ವ್ಯಾಪ್ತಿಯ ಮೈಸೂರು ರಸ್ತೆ ಮೇಲು ಸೇತುವೆ ಮೇಲೆ ಬುಧವಾರ ಮುಂಜಾನೆ ನಡೆದಿದೆ.
ಹೊಸಗುಡ್ಡದಹಳ್ಳಿ ನಿವಾಸಿ ಖಲೀಲ್ ಶಂಷೀರ್ (21) ಮೃತ ಬೈಕ್ ಸವಾರ. ಘಟನೆಯಲ್ಲಿ ಗಾಯಗೊಂಡಿರುವ ಶಂಷೀರ್ ಸ್ನೇಹಿತ ಸರ್ಘರಾಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರ ಪ್ರದೇಶ ಮೂಲದ ಖಲೀಲ್ ಬಟ್ಟೆ ವ್ಯಾಪಾರಿಯಾಗಿದ್ದು, ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ಸ್ನೇಹಿತ ಸಫìರಾಜ್ ಜತೆ ಸಿಟಿ ಮಾರುಕಟ್ಟೆಯಲ್ಲಿರುವ ದರ್ಗಾಕ್ಕೆ ಮೈಸೂರು ರಸ್ತೆ ಮೇಲು ಸೇತುವೆ ಮಾರ್ಗವಾಗಿ ಬೈಕ್ನಲ್ಲಿ ಹೋಗುತ್ತಿದ್ದರು.
ಈ ವೇಳೆ ಬೈಕ್ ನಿಯಂತ್ರಣ ಕಳೆದುಕೊಂಡು ಮೇಲು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಖಲೀಲ್ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಸಫರಾಜ್ ಗಾಯಗೊಂಡಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಕಾರು-ಬೈಕ್ ಮುಖಾಮುಖೀ ಡಿಕ್ಕಿ: ಮತ್ತೂಂದು ಪ್ರಕರಣದಲ್ಲಿ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಂದಿಬೆಟ್ಟದಿಂದ ನಗರಕ್ಕೆ ಹಿಂತಿರುಗುತ್ತಿದ್ದ ಹೋಟೆಲ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದು, ಆತನ ಸಹಪಾಠಿ ಗಾಯಗೊಂಡಿರುವ ಘಟನೆ ಚಿಕ್ಕಜಾಲ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದಿರಾನಗರದ ನಿವಾಸಿ ಅನಿಲ್ (23) ಮೃತರು. ಆತನ ಸಹಪಾಠಿ ಲೋಲಿಯಾ ಎಂಬಾಕೆ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿರಾನಗರದ ಕಾರ್ನಾಡ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿರುವ ಆಶಿಶ್ ಸಹಪಾಠಿ ಲೋಲಿಯಾ ಜತೆ ಬುಧವಾರ ಮುಂಜಾನೆ ಬೈಕ್ನಲ್ಲಿ ನಂದಿ ಬೆಟ್ಟಕ್ಕೆ ಹೋಗಿದ್ದರು.
ಬೆಳಗ್ಗೆ 6 ಗಂಟೆ ಸುಮಾರಿಗೆ ನಂದಿ ಬೆಟ್ಟದಿಂದ ನಗರಕ್ಕೆ ವಾಪಸ್ ಬರುವಾಗ ಚಿಕ್ಕಜಾಲ ಸಮೀಪ ಸರ್ವೀಸ್ ರಸ್ತೆಯಲ್ಲಿ ಎದುರಿಗೆ ಬಂದ ಇನ್ನೋವಾ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಶಿಶ್ ಸ್ಥಳದಲ್ಲೇ ಮೃತಪಟ್ಟರೆ, ಲೋಲಿಯಾ ಗಾಯಗೊಂಡಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಪ್ರಕರಣ ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ