ಆಯುಕ್ತರ ಕ್ರಮಕ್ಕೆ ಸಿಎಂ ಗರಂ
Team Udayavani, Sep 2, 2019, 3:05 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್ಟಾಪಿಂಗ್ ಕಾಮಗಾರಿಗೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರ ನಡೆಗೆ ಗರಂ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲ ನಿರ್ದಿಷ್ಟ ಸೂಚನೆ ನೀಡಿ ಪಾಲಿಸುವಂತೆ ತಾಕೀತು ಮಾಡಿದ್ದಾರೆ. ಡಾಲರ್ ಕಾಲೋನಿ ನಿವಾಸಕ್ಕೆ ಅನಿಲ್ ಕುಮಾರ್ ಅವರನ್ನು ಭಾನುವಾರ ಕರೆಸಿಕೊಂಡ ಯಡಿಯೂರಪ್ಪ ಅವರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಈಗಾಗಲೇ ಚಾಲ್ತಿಯಲ್ಲಿರುವ ಮತ್ತು ಅರ್ಧ ಕೆಲಸ ಮುಗಿದಿರುವ ವೈಟ್ಟಾಪಿಂಗ್ ಕಾಮಗಾರಿಗಳನ್ನೂ ಬಿಬಿಎಂಪಿ ತಡೆಹಿಡಿದಿರುವ ಆಯುಕ್ತರ ಕ್ರಮದ ಬಗ್ಗೆ ಮುಖ್ಯಮಂತ್ರಿಗಳು ಗರಂ ಆದರು ಎನ್ನಲಾಗಿದೆ. ಒಂದು ಮತ್ತು ಎರಡನೇ ಹಂತದಲ್ಲಿ ನಡೆದ ವೈಟ್ಟಾಪಿಂಗ್ ಕಾಮಗಾರಿಯಲ್ಲಿ ಅನುದಾನ ದುರುಪಯೋಗವಾಗಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ
ಹಾಗೂ ಮೂರನೇ ಹಂತದ ವೈಟ್ಟಾಪಿಂಗ್ ಕಾಮಗಾರಿಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಆದೇಶ ಮಾಡಿದ್ದರು. ಆದರೆ, ಚಾಲ್ತಿ ವೈಟ್ಟಾಪಿಂಗ್ ಕಾಮಗಾರಿಗಳನ್ನೂ ಬಿಬಿಎಂಪಿ ನಿಲ್ಲಿಸಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೂಡಲೇ ಅರ್ಧ ಮುಗಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಅಹವಾಲು ಆಲಿಸಲಿರುವ ಮುಖ್ಯಮಂತ್ರಿ: ಅದೇ ರೀತಿ ಬಿಬಿಎಂಪಿಯ ಏಳು ತ್ಯಾಜ್ಯ ಸಂಸ್ಕರಣಾ ಘಟಕ ಮತ್ತು ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದ ಒಂದು ಉದ್ಯಾನಕ್ಕೆ ವಾರಾಂತ್ಯದಲ್ಲಿ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಯನ್ನು ಖುದ್ದಾಗಿ ಆಲಿಸಲಾಗುವುದು. ಇದಕ್ಕೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಆಯುಕ್ತರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ