ಬೆಕ್ಕಿನ ಕನಸಲ್ಲಿ ಸದಾ ಇಲಿ: ಡಿಕೆ ಶಿವಕುಮಾರ್ಗೆ ಸಿಎಂ ತಿರುಗೇಟು
ಶಿವಕುಮಾರ್ ಹಾಗೂ ಕಾಂಗ್ರೆಸ್ ಸದಾ ಹಿಂದುತ್ವದ ವಿರುದ್ಧವೇ ಚಿಂತನೆ ನಡೆಸುತ್ತಾರೆ.
Team Udayavani, Dec 31, 2021, 10:55 AM IST
ಬೆಂಗಳೂರು : ಬೆಕ್ಕಿನ ಕನಸಲ್ಲಿ ಸದಾ ಇಲಿ ಎಂಬಂತೆ ಡಿ.ಕೆ.ಶಿವಕುಮಾರ್ ಯಾವಾಗಲೂ ಹಿಂದುತ್ವದ ವಿರುದ್ಧವೇ ಚಿಂತಿಸುತ್ತಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು “ ಹಿಂದು ದೇಗುಲಗಳನ್ನು ಸ್ವತಂತ್ರಗೊಳಿಸಿ ಬಿಜೆಪಿ ಕಾರ್ಯಕರ್ತರಿಗೆ ಹಸ್ತಾಂತರಿಸಲು ಸರಕಾರ ಹೊರಟಿದೆʼʼ ಎಂದು ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪಕ್ಕೆ ಪ್ರತಿ ಏಟು ನೀಡಿದರು.
ಶಿವಕುಮಾರ್ ಹಾಗೂ ಕಾಂಗ್ರೆಸ್ ಸದಾ ಹಿಂದುತ್ವದ ವಿರುದ್ಧವೇ ಚಿಂತನೆ ನಡೆಸುತ್ತಾರೆ. ಬೆಕ್ಕಿನ ಕನಸಲ್ಲಿ ಸದಾ ಇಲಿ ಎಂಬ ಮಾತಿನಂತೆ, ಇವರು ಕನಸು ಮನಸಿನಲ್ಲೂ ಹಿಂದು ಧಾರ್ಮಿಕ ಭಾವನೆಯ ವಿರುದ್ಧ ಚಿಂತನೆ ನಡೆಸುತ್ತಾರೆ. ದೇಗುಲಗಳನ್ನು ಸರಕಾರದ ಹಿಡಿತದಿಂದ ಸ್ವತಂತ್ರಗೊಳಿಸುವುದು ಎಂದರೆ ಅದನ್ನು ಖಾಸಗಿ ಪರಭಾರೆ ಮಾಡುವುದಲ್ಲ. ಎಲ್ಲದಕ್ಕೂ ಒಂದು ವ್ಯವಸ್ಥೆ ಇರುತ್ತದೆ. ಇಂಥ ಹೇಳಿಕೆ ನೀಡುವ ಮೂಲಕ ಶಿವಕುಮಾರ್ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ಕ್ರಮ : ರಾಜ್ಯದಲ್ಲಿ ಹಾಗೂ ದೇಶದಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಕೋವಿಡ್ ಪ್ರಕರಣಗಳು ಹೆಚ್ಚಿರುವ ಎಂಟು ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎಂದು ಕೇಂದ್ರ ಸರಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತೇವೆ ಎಂದು ತಿಳಿಸಿದರು.
ಹೊಸ ವರ್ಷದಲ್ಲಿ ಹೊಸ ಚೈತನ್ಯದೊಂದಿಗೆ ಕೆಲಸ ಮಾಡಲು ನಿರ್ಧರಿಸಿದ್ದೇನೆ. ಅದೇ ರೀತಿ ಜಿಲ್ಲಾಧಿಕಾರಿಗಳು ದಿಕ್ಸೂಚಿ ಕಾರ್ಯಕ್ರಮದೊಂದಿಗೆ ಕೆಲಸ ಮಾಡಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜತೆಗೆ ಸಭೆ ನಡೆಸಿ ಗುರಿ ನಿರ್ಧರಿತ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ