ಗ್ರಾಹಕರ ಮನ ಗೆದ್ದರೆ ಅಂತಾರಾಷ್ಟ್ರೀಯ ಮಾರುಕಟ್ಟೆ: ಸಿಎಂ ಬೊಮ್ಮಾಯಿ
"ಖಾದಿ ಉತ್ಸವ-2023' ಉದ್ಘಾಟಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Jan 27, 2023, 7:15 AM IST
ಬೆಂಗಳೂರು: ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಬಟ್ಟೆಗಳಿಗೆ ಬಣ್ಣ, ವಿನ್ಯಾಸವನ್ನು ಬದಲಾಯಿಸಿಕೊಂಡರೆ ಖಾದಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ತಲುಪಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿದ್ದ “ಖಾದಿ ಉತ್ಸವ-2023′ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನ ಬೆಳೆದಂತೆ ಪಾಲಿಸ್ಟರ್ ಉತ್ಪಾದನೆಯಿಂದಾಗಿ ಖಾದಿಯ ಬೇಡಿಕೆ ಕುಸಿದಿತ್ತು. ಆದರೆ ಇಂದಿನ ಬಣ್ಣ, ವಿನ್ಯಾಸದ ಬದಲಾವಣೆ ಪರಿಣಾಮವಾಗಿ ಖಾದಿ ವಸ್ತ್ರ ಉತ್ಪಾದನೆಗೆ ಹೆಚ್ಚಿನ ಬೇಡಿಕೆಯಿದೆ ಎಂದರು.
ವಿಶೇಷವಾಗಿ ಸಂಘ-ಸಂಸ್ಥೆಗಳು, ಸಣ್ಣ ಮಾರುಕಟ್ಟೆಗಳು ಡಿಜಿಟಲ್ ಮಾರುಕಟ್ಟೆಯನ್ನು ಉಪಯೋಗಿಸಿಕೊಳ್ಳಬೇಕಿದೆ. ಅಮೆಜಾನ್, ಫ್ಲಿಪ್ಕಾರ್ಟ್ನಂತಹ ಆನ್ಲೈನ್ ಮಾರುಕಟ್ಟೆಯಲ್ಲಿ ಈಗಾಗಲೇ ಸ್ತ್ರೀಶಕ್ತಿ ಸಂಘಗಳು, ನೇಕಾರರು ಉತ್ಪಾದಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ಸರಕಾರವು ಎಂಒಯು ಮಾಡಿಕೊಂಡಿದೆ. ಉತ್ಪಾದಕರಿಂದ ನೇರವಾಗಿ ಮಧ್ಯವರ್ತಿಗಳಿಲ್ಲದೇ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದಲ್ಲಿ ಮಾರಾಟ ಮಾಡಬೇಕು ಎಂದು ತಿಳಿಸಿದರು.
ಎರಡು ವರ್ಷಗಳಿಂದ ಬಾಕಿ ಇರುವ 24 ಕೋಟಿ ರೂ.ಪ್ರೋತ್ಸಾಹಧನವನ್ನು ನೀಡಲು ಅನು ಮೋದನೆ ಕೊಟ್ಟು, ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜು ಮಾತನಾಡಿ, ಗ್ರಾಮೀಣ ಜನರ ಕೈಗೆ ಕೆಲಸ ನೀಡುವುದು ಮಹಾತ್ಮಾ ಗಾಂಧಿ ಕನಸಾಗಿತ್ತು. ಇಂದು ರಾಜ್ಯಾದ್ಯಂತ 172 ಖಾದಿ ಸಂಸ್ಥೆಗಳಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಾಗಿದೆ. ರಾಜ್ಯದ 12 ಜಿಲ್ಲೆಗಳಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ಆಸ್ತಿಯನ್ನು ಸಂರಕ್ಷಿಸಲು ಹಾಗೂ ಕಚೇರಿ ಯನ್ನು ಸ್ಥಾಪಿಸಲು 5 ಕೋಟಿ ರೂ.ಬಿಡುಗಡೆ ಮಾಡಬೇಕಿದೆ. ಜತೆಗೆ ಸಿಬಂದಿ ಕೊರತೆ ನೀಗಿಸಲು ಸಹಕಾರದ ಜತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ