ಶಾಸಕ ಹರ್ಷವರ್ಧನ್ ಕೆಲಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೆಚ್ಚುಗೆ


Team Udayavani, Aug 18, 2021, 6:34 PM IST

CM Basavaraj Bommai

ಬೆಂಗಳೂರು: ನಂಜನಗೂಡು ಕ್ಷೇತ್ರದ ಶಾಸಕರಾದ ಹರ್ಷವರ್ಧನ ಅವರು ತಮ್ಮ ಕ್ಷೇತ್ರದಲ್ಲಿ ಕೈಗೊಂಡಿರುವ ಮಾನವೀಯ ಕಾರ್ಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಂಸೆ ವ್ಯಕ್ತಪಡಿಸಿದರು‌.

ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಹರ್ಷವರ್ಧನ್ ತಮ್ಮ ಕ್ಷೇತ್ರದ ಕೆಆರ್ ಪುರದಲ್ಲಿ ಜನರು ಕೈಯಿಂದಲೇ ಚರಂಡಿಗಳಲ್ಲಿನ ಹೊಲಸನ್ನು ಹೊತ್ತು ಹಾಕುವ ಅಮಾನವೀಯ ಪದ್ಧತಿ ಕುರಿತು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿ ಈ ಕುರಿತು ಮಾಹಿತಿ ಫಲಕವನ್ನು ಮುಖ್ಯಮಂತ್ರಿಗಳಿಗೆ ನೀಡಿದರು. ಶಾಸಕ ಬಿ ಹರ್ಷವರ್ಧನ್ ಅವರ ಮಾನವೀಯ ಕಾರ್ಯಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದರು.

ತಮ್ಮ ಅಜ್ಜ, ಮಾಜಿ ಸಚಿವ ಬಿ ಬಸವಲಿಂಗಪ್ಪ ಅವರು 50 ವರ್ಷಗಳ ಹಿಂದೆ ಮಲಹೊರುವ ಪದ್ಧತಿಯನ್ನು ಅಂತ್ಯಗೊಳಿಸುವ ಕುರಿತು ವಿಧಾನಸೌಧದಲ್ಲಿ ಘೋಷಣೆ ಮಾಡಿದ್ದರು.  ಈಗ ತಾವು ಶಾಸಕರಾದ ನಂತರ ಮೊದಲ ಆದ್ಯತೆಯಾಗಿ ಕೆಆರ್ ಪುರದಲ್ಲಿ ಇಂದಿಗೂ ನಡೆದುಕೊಂಡು ಬಂದಿರುವ ಅಮಾನವೀಯ ಪದ್ಧತಿಗೆ ತಿಲಾಂಜಲಿ ನೀಡಿರುವ ಕುರಿತು ಮುಖ್ಯಮಂತ್ರಿಗಳಿಗೆ ಹರ್ಷವರ್ಧನ್ ಮಾಹಿತಿ ನೀಡಿದರು.  ಸಮಸ್ಯೆಗಳನ್ನು ನಿವಾರಿಸಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದಾಗಿ ಗ್ರಾಮದ ಜನರು ಈಗ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ. ಗ್ರಾಮದ ಜನರಲ್ಲಿ ಸಂತಸ ಮೂಡಿದೆ ಎಂದು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಹರ್ಷವರ್ಧನ ಅವರು ನೀಡಿದ ಸಂಪೂರ್ಣ ಮಾಹಿತಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.  ನಿಮ್ಮ ಕಾರ್ಯ ಶ್ಲಾಘನೀಯ. ಇಡೀ ಕ್ಷೇತ್ರದಲ್ಲಿ ಇಂತಹ ಮಾದರಿ ಕೆಲಸಗಳನ್ನು ಮಾಡುವಂತೆ ಸಲಹೆ ನೀಡಿ ಪ್ರೋತ್ಸಾಹಿಸಿದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.