ಸಿಎಂ ಸಂಧಾನ ಫ‌ಲಪ್ರದ: ದಳಕ್ಕಿಲ್ಲ ಸಿ.ಎಂ.ಇಬ್ರಾಹಿಂ


Team Udayavani, Jan 3, 2017, 3:45 AM IST

CM-IBrhim.jpg

ಬೆಂಗಳೂರು: ಸಾರ್ವಜನಿಕವಾಗಿ ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಮುನಿಸು ಶಮನಗೊಂಡಿದ್ದು, ಕಾಂಗ್ರೆಸ್ಸಿನಲ್ಲೇ ಉಳಿದು ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‌ ಕಡೆ ಮುಖ ಮಾಡಿದ್ದ ತಮ್ಮ ಆಪ್ತರಲ್ಲೊಬ್ಬರಾದ ಇಬ್ರಾಹಿಂ ಅವರ ಮನವೊಲಿಸುವ ಕಸರತ್ತಿನ ಭಾಗವಾಗಿ ಸೋಮವಾರ ಅವರ ನಿವಾಸಕ್ಕೇ ತೆರಳಿ ಭೋಜನ ಸೇವಿಸಿದ ಸಿದ್ದರಾಮಯ್ಯ, ಪಕ್ಷದಲ್ಲೇ ಉಳಿದುಕೊಳ್ಳುವ ಭರವಸೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಇಬ್ರಾಹಿಂ ಅವರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರನ್ನಾಗಿ ನೇಮಿಸಿ 18 ತಿಂಗಳು ಕಳೆದಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಹುದ್ದೆಯಿಂದ ಇಳಿಸಿ ವಿ.ಆರ್‌.ಸುದರ್ಶನ್‌ ಅವರಿಗೆ ಹುದ್ದೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ದೇಶಿಸಿದ್ದರು. ಇದರಿಂದಾಗಿ ಸಿದ್ದರಾಮಯ್ಯ ಅವರ ವಿರುದ್ಧ  ಮುನಿಸಿಕೊಂಡಿದ್ದ ಇಬ್ರಾಹಿಂ ಪರೋಕ್ಷವಾಗಿ ಕಾಂಗ್ರೆಸ್‌ ತೊರೆಯುವ ಮಾತುಗಳನ್ನಾಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ರಾಹಿಂ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ ಸಿದ್ದರಾಮಯ್ಯ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವೊಲಿಸಿದ್ದಾರೆ.

ಪಕ್ಷ ಅವರನ್ನು ಕಡೆಗಣಿಸಿಲ್ಲ- ಸಿಎಂ: ಇಬ್ರಾಹಿಂ ಭೇಟಿ ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಬ್ರಾಹಿಂ ಕಾಂಗ್ರೆಸ್‌ ಬಿಡುತ್ತಾರೆ ಅಂತ ಹೇಳಿದ್ದು ಯಾರು? ಅವರು ಕಾಂಗ್ರೆಸ್‌ನಲ್ಲೇ ಇರುತ್ತಾರೆ.ಅವರನ್ನು ಕಾಂಗ್ರೆಸ್‌ ಕಡೆಗಣಿಸಿದೆ ಎಂಬುದೆಲ್ಲಾ ಸುಳ್ಳು. ಇಬ್ರಾಹಿಂಬಹಳ ಹಿಂದಿನಿಂದಲೂ ಒಳ್ಳೆಯ ಸ್ನೇಹಿತ. ಅವರ ಮಕ್ಕಳು ದುಬೈನಿಂದ ಆಗಮಿಸಿದ್ದರಿಂದ ಊಟಕ್ಕೆ ಆಹ್ವಾನಿಸಿದ್ದರು, ಬಂದಿದ್ದೆ ಅಷ್ಟೇ ಎಂದರು. ಇಬ್ರಾಹಿಂ ಮಾತನಾಡಿ, ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ಪ್ರಶ್ನಾತೀತ ನಾಯಕ. ಮುಂದಿನ ವಿಧಾನಸಭಾ ಚುನಾವಣೆಗೆ ನಾವೆಲ್ಲಾ ಸಿದ್ದರಾಮಯ್ಯ ನೇತೃತ್ವದಲ್ಲೇ ಹೋಗಲಿದ್ದೇವೆ. 

ಸೋನಿಯಾಗಾಂಧಿ ಹಾಗೂ ರಾಹುಲ್‌ಗಾಂಧಿ ಸಿದ್ದರಾಮಯ್ಯ ಅವರನ್ನು ನಂಬಿ ರಾಜ್ಯದ ಅಧಿಕಾರವನ್ನು ಅವರಿಗೆ
ನೀಡಿದ್ದಾರೆ. ನಾವೆಲ್ಲಾ ಅವರಿಗೆ ಬಲ ತುಂಬಲಿದ್ದೇವೆ ಎಂದು ಹೇಳಿದರು.

ಎಚ್‌.ಡಿ. ದೇವೇಗೌಡರು ನಮ್ಮ ಅಪ್ಪಾಜಿ ಇದ್ದ ಹಾಗೆ. ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬುದು ಜೆಡಿಎಸ್‌ ಹಾಗೂ ನಮ್ಮ ಎರಡೂ ಪಕ್ಷಗಳ ಉದ್ದೇಶ.

ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದಾಗ ಹೇಗೆ ಇದ್ದರೋ ಅದೇ ರೀತಿ ಇರಬೇಕೆಂದು ಹೇಳಿದ್ದು ನಿಜ. ಆದರೆ ಕಾಂಗ್ರೆಸ್‌ ತೊರೆಯುವ ಉದ್ದೇಶ ತಮಗಿಲ್ಲ ಎಂದು ಇಬ್ರಾಹಿಂ ಸ್ಪಷ್ಟಪಡಿಸಿದರು. ಈ ವೇಳೆ ದೇವೇಗೌಡರಿಂದ ಆಹ್ವಾನ ಬಂದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಹ್ವಾನ ಬಂದರೆ ಎಂಬ ಪ್ರಶ್ನೆಗಳಿಗೆ ಉತ್ತರ ಬೇಡ ಎಂದಷ್ಟೇ ಹೇಳಿದರು.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.