ಯಶಸ್ವಿನಿಗೆ ಸಿಎಂ ಗ್ರೀನ್‌ಸಿಗ್ನಲ್‌


Team Udayavani, May 31, 2018, 6:00 AM IST

30bnp-20.jpg

ಬೆಂಗಳೂರು: ಯಶಸ್ವಿನಿ ಯೋಜನೆ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ, ಮೇ 31ಕ್ಕೆ ಯಶಸ್ವಿನಿ ಯೋಜನೆ ಮುಗಿಯಲಿದೆ ಎಂದು ರೈತ ಮುಖಂಡರು ಪ್ರಸ್ತಾಪಿಸಿದಾಗ ಮಧ್ಯಪ್ರವೇಶಿಸಿದ ಸಿಎಂ ಕುಮಾರಸ್ವಾಮಿ, ಮಂಗಳವಾರ ಆರೋಗ್ಯ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಯಶಸ್ವಿನಿ ಯೋಜನೆ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಹಕಾರ ಸಂಘಗಳ ಸದಸ್ಯರು ಹಾಗೂ ಸ್ತ್ರೀಶಕ್ತಿ ಗುಂಪುಗಳ ಸದಸ್ಯರ ಪಾಲಿಗೆ ಸಂಜೀವಿನಿಯಾಗಿದ್ದ ಯಶಸ್ವಿನಿ ಆರೋಗ್ಯ ವಿಮೆ ಮೇ 31ಕ್ಕೆ ಅಂತ್ಯವಾಗಲಿದ್ದು, ಸಾರ್ವತ್ರಿಕ ಆರೋಗ್ಯ ಯೋಜನೆಯಡಿ ಅದನ್ನು ವಿಲೀನಗೊಳಿಸಿ ಜಾರಿಯಾ ಗಲಿದೆ ಎಂದು ಹೇಳಲಾಗಿತ್ತು.

ನೂತನ ಆರೋಗ್ಯ ವಿಮಾ ಯೋಜನೆಗೆ ನೆಟ್‌ವರ್ಕ್‌ ಆಸ್ಪತ್ರೆಗಳ ಗುರುತಿಸುವಿಕೆಗೆ 2018ರ ಡಿ.31ರ ವರೆಗೆ ಸಮಯ ನಿಗದಿ ಮಾಡಲಾಗಿತ್ತು. ಹೀಗಾಗಿ, ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಆಗುವವರೆಗೆ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ ಏನು? ಎಂದು ಗ್ರಾಮೀಣ ಪ್ರದೇಶದ ರೈತಾಪಿ ಸಮುದಾಯ ಆತಂಕಗೊಂಡಿತ್ತು. ಜತೆಗೆ ಹೊಸ ಆರೋಗ್ಯ ಸೇವೆ ಯೋಜನೆಯಡಿ ಕಿಸೆಯಿಂದ ಹಣ ಪಾವತಿಸಬೇಕಾಗಬಹುದು ಎಂಬ ಅನುಮಾನವಿತ್ತು. ಆದರೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಯಶಸ್ವಿನಿ ಮುಂದುವರಿಯಲಿದೆ ಎಂದು ಹೇಳಿರುವುದರಿಂದ ನಿಟ್ಟುಸಿರು ಬಿಟ್ಟಂತಾಗಿದೆ.

ಏನಿದು ಯಶಸ್ವಿನಿ?: 
ಯಶಸ್ವಿನಿ ಗ್ರಾಮೀಣ, ನಗರ ಸಹಕಾರಿಗಳ ಆರೋಗ್ಯ ರಕ್ಷಕ ಯೋಜನೆ. ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ ಸಹಾಯ ಗುಂಪಿನ ಸದಸ್ಯ, ಸಹಕಾರ ಸಂಘದಸದಸ್ಯ ಹಾಗೂ ಅವರ ಕುಟುಂಬದ ಎಲ್ಲ ಸದಸ್ಯರು ಯೋಜನೆಯ ಫಲಾನುಭವಿಗಳಾಗಬಹುದು.

ಯೋಜನೆಯಡಿ 525 ನೆಟ್‌ವರ್ಕ್‌ ಆಸ್ಪತ್ರೆಗ ಳಲ್ಲಿ 823 ಶಸ್ತ್ರಚಿಕಿತ್ಸೆ ಸೌಲಭ್ಯ ಪಡೆಯಬಹುದಾ ಗಿತ್ತು. ಸರ್ಕಾರವೇ ಆಸ್ಪತ್ರೆಗಳಿಗೆ ಹಣ ಪಾವತಿ ಸುತ್ತಿತ್ತು. 2003ರಿಂದ ಜಾರಿಗೆ ಬಂದ ಯಶಸ್ವಿ  ನಿಯಲ್ಲಿ ಗ್ರಾಮೀಣ ಭಾಗದಲ್ಲಿ ವಾರ್ಷಿಕ 250ರೂ. ವಂತಿಗೆ ಪಾವತಿಸಿ ವರ್ಷದಲ್ಲಿ ಒಂದು ಬಾರಿ ಗರಿಷ್ಠ ಮಿತಿ 1.25 ಲಕ್ಷ ರೂ.ವರೆಗಿನ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬಹುದು. ವರ್ಷದಲ್ಲಿ 2 ಬಾರಿ ಚಿಕಿತ್ಸೆಗೆ ದಾಖಲಾಗುವ ಪ್ರಸಂಗ ಬಂದರೆ ನಗದು ರಹಿತ  ಮಿತಿ 2 ಲಕ್ಷ ರೂ.ವರೆಗೆ ಇದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.