ಸಿಎಂ ವಸತಿ ಯೋಜನೆ ಮನೆ ನಿರ್ಮಾಣಕ್ಕೆ 12ರಂದು ಚಾಲನೆ
Team Udayavani, Aug 7, 2018, 6:20 AM IST
ಬೆಂಗಳೂರು: ಮುಖ್ಯಮಂತ್ರಿ ವಸತಿ ಯೋಜನೆಯಡಿ ಬೆಂಗಳೂರು ನಗರ ಹೊರತುಪಡಿಸಿ ಉಳಿದ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 60 ಸಾವಿರ ಮನೆ ನಿರ್ಮಿಸುವ ಯೋಜನೆಗೆ ಕೊನೆಗೂ ಚಾಲನೆ ಸಿಗುತ್ತಿದೆ. ವಿಶೇಷವೆಂದರೆ, ಹಿಂದಿನ ಸರ್ಕಾರ ಘೋಷಿಸಿದ್ದ ಯೋಜನೆಗೆ ಆ. 12ರಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡುವ ಮೂಲಕ ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕ ವಿರೋಧಿ ಎಂಬ ಆರೋಪದಿಂದ ಮುಕ್ತವಾಗಲು ಪ್ರಯತ್ನಿಸಲಾಗುತ್ತಿದೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳ ವಸತಿ ಯೋಜನೆಗೆ ಈಗಾಗಲೇ ಕ್ರಮ ಕೈಗೊಂಡು ಫಲಾನುಭವಿಗಳ ಆಯ್ಕೆಯಾಗಿದೆ.
ಕಾಮಗಾರಿ ಗುತ್ತಿಗೆಯನ್ನೂ ಖಾಸಗಿಯವರಿಗೆ ವಹಿಸಲಾಗಿದೆ. ಇದೀಗ ರಾಜ್ಯಾದ್ಯಂತ ಏಕಕಾಲದಲ್ಲಿ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದ್ದು, ಆ. 12ರಂದು ಹುಬ್ಬಳ್ಳಿಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.
ಪ್ರತಿಪಕ್ಷ ನಾಯಕರು, ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದರು. ಸಿಎಂ ವಸತಿ ಯೋಜನಯೆ ಒಟ್ಟು 60 ಸಾವಿರ ಮನೆಗಳ ಪೈಕಿ ಉತ್ತರ ಕರ್ನಾಟಕ ಭಾಗಕ್ಕೆ 22 ಸಾವಿರ ಮನೆಗಳು ಸಿಗಲಿವೆ. ಒಂದು ಬೆಡ್ರೂಂ ಮನೆಗೆ ಸಬ್ಸಿಡಿ ಸಿಗಲಿದ್ದು, ಡಬಲ್ ಬೆಡ್ರೂಂ ಮನೆಗೆ ಯಾವುದೇ ಸಬ್ಸಿಡಿ ಇರುವುದಿಲ್ಲ. ಸಂಪೂರ್ಣ ಮೊತ್ತ ಫಲಾನುಭವಿ ಭರಿಸಬೇಕಾಗುತ್ತದೆ ಎಂದರು.
ಬೆಂಗಳೂರು ನಗರದಲ್ಲಿ 1 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಒಂದು ಸಾವಿರ ಎಕರೆ ಭೂಮಿ
ಗುರುತಿಸಲಾಗಿದೆ. ಆದರೆ, ಅರ್ಜಿ ಆಹ್ವಾನಿಸಿದಾಗ ಕೇವಲ 45 ಸಾವಿರ ಅರ್ಜಿಗಳು ಮಾತ್ರ ಬಂದಿವೆ. ಅರ್ಜಿ ಸಲ್ಲಿಸಿದವರು ಇರುವ ಪ್ರದೇಶ ಗುರುತಿಸಿ ಆ ಭಾಗದಲ್ಲಿ ನಿರ್ಮಾಣ ಕಾರ್ಯ ಆರಂಭಿಸಿ ಉಳಿದ 55 ಸಾವಿರ ಮನೆಗಳಿಗೆ ಮತ್ತೂಮ್ಮೆ ಅರ್ಜಿ ಅಹ್ವಾನಿಸಲಾಗುವುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್