“ಜಲಾಮೃತ’ ಯೋಜನೆಗೆ ಸಿಎಂ ಚಾಲನೆ


Team Udayavani, Mar 1, 2019, 6:12 AM IST

jalamrta.jpg

ಬೆಂಗಳೂರು: ರಾಜ್ಯದ ಜನರಿಗೆ ನೀರಿನ ಮೌಲ್ಯ ಹಾಗೂ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ “ಜಲಾಮೃತ’ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, 2019ನೇ ವರ್ಷವನ್ನು “ಜಲವರ್ಷ’ ಎಂದು ಘೋಷಿಸಿದರು. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಗುರುವಾರ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು. ಭವಿಷ್ಯದಲ್ಲಿ ಎದುರಾಗುವಂತಹ ಜಲ ಸಮಸ್ಯೆಗಳ ನಿವಾರಣೆಗಾಗಿ ಸರ್ಕಾರ ಈ ಯೋಜನೆ ಜಾರಿಗೊಳಿಸಿದ್ದು, ನೀರಿನ ಮಹತ್ವ ಹಾಗೂ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಮುಂದಾಗಿದೆ.

ಜಲಾಮೃತ ಯೋಜನೆ ಜಲ ಸಾಕ್ಷರತೆ, ಜಲ ಸಂರಕ್ಷಣೆ, ಜಲ ಪ್ರಜ್ಞೆ ಹಾಗೂ ಹಸಿರೀಕರಣ ಅಂಶಗಳನ್ನು ಒಳಗೊಂಡಿದೆ. ಅದರಂತೆ ಪ್ರತಿಯೊಂದು ಹನಿ ನೀರನ್ನೂ ಸಂರಕ್ಷಿಸುವುದು, ಜಲಮೂಲಗಳನ್ನು ಪುನಶ್ಚೇತನಗೊಳಿಸುವುದು, ನೀರಿನ ಜಾಗೃತ ಹಾಗೂ ದಕ್ಷ ಉಪಯೋಗಕ್ಕೆ ಪ್ರೋತ್ಸಾಹಿಸುವುದು ಹಾಗೂ ಜಲ ಸುಸ್ಥಿರತೆ, ಅರಣ್ಯೀಕರಣವನ್ನು ಆಂದೋಲನವಾಗಿರುಸುವುದು ಯೋಜನೆಯ ಉದ್ದೇಶವಾಗಿದೆ. 

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಪ್ರಕೃತಿಯೊಂದಿಗೆ ಚೆಲ್ಲಾಟ ಆಡಿದ್ದರ ಪರಿಣಾಮ ಹವಾಮಾನ ವೈಪರೀತ್ಯದಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತಿದೆ. ಬಂಡಿಪುರದಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದಾಗ ಕಣ್ಣಲ್ಲಿ ನೀರು ಬಂತು. ಹೆಲಿಕಾಪ್ಟರ್‌ ಮೂಲಕವೂ ನೀರು ಸಿಂಪಡಿಸಿ ಬೆಂಕಿ ನಂದಿಸಲಾಯಿತು. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಅಭಿನಂದಿಸಿದರು. 

ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ರಾಜ್ಯದಲ್ಲಿ ಪ್ರಸಕ್ತ ವರ್ಷ ಭೀಕರ ಬರಗಾಲವಿದ್ದು, ಈಗಾಗಲೇ 700-800 ಗ್ರಾಮಗಳಿಗೆ ಟ್ಯಾಂಕರ್‌ಗಳಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಭವಿಷ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಾರದೆಂಬ ಉದ್ದೇಶದಿಂದ ಜಲಾಮೃತ ಯೋಜನೆ ಜಾರಿಗೊಳಿಸುತ್ತಿದ್ದು, ಜಲ, “ಅಮೃತ’ ಎಂಬುದನ್ನು ತಿಳಿಸುವುದೇ ಇದರ ಉದ್ದೇಶವಾಗಿದೆ ಎಂದು ಹೇಳಿದರು. 

ಹಿಂದಿನ 17 ವರ್ಷಗಳ ಪೈಕಿ 15 ವರ್ಷಗಳಲ್ಲಿ ರಾಜ್ಯ ಬರಗಾಲ ಅನುಭವಿಸಿದ್ದು, 2011ರಲ್ಲಿ 123 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಅದೇ ರೀತಿ 2012ರಲ್ಲಿ 157, 2013ರಲ್ಲಿ 125, 2014 ರಲ್ಲಿ 35, 2015ರಲ್ಲಿ 136, 2016ರಲ್ಲಿ 110, 2017ರಲ್ಲಿ 162, 2018ರಲ್ಲಿ 156 ತಾಲೂಕುಗಳು ಬರಕ್ಕೆ ತತ್ತರಿಸಿವೆ. ಹಿಂದೆ 20-30 ಅಡಿಗಳಲ್ಲಿ ನೀರು ದೊರೆಯುತ್ತಿತ್ತು. ಆದರಿಂದು ಕೆಲವು ಜಿಲ್ಲೆಗಳಲ್ಲಿ 1500 ಅಡಿ ಹೋದರೂ ನೀರು ದೊರೆಯದಂತಹ ಪರಿಸ್ಥಿತಿಯಿದೆ ಎಂದು ಕಳವಳ ವ್ಯಕ್ತಪಡಿಸಿದರು. 

ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ಪಂಚಾಯಿತಿಯಿಂದ ಕೊಡಗು ಪ್ರವಾಹ ಸಂತ್ರಸ್ತರಿಗೆ 95 ಲಕ್ಷ ರೂ. ಮೊತ್ತದ ಚೆಕ್‌ ದೇಣಿಗೆ ನೀಡಲಾಯಿತು. ಜತೆಗೆ ಜಲಾಮೃತ ಆಂದೋಲನದ ಲಾಂಛನ ಬಿಡುಗಡೆಗೊಳಿಸಲಾಯಿತು. ಈ ವೇಳೆ ಸಚಿವರಾದ ಸಿ.ಎಸ್‌.ಪುಟ್ಟರಾಜು, ಡಿ.ಕೆ.ಶಿವಕುಮಾರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಹಾಗೂ ಇಲಾಖೆಯ ಹೆಚ್ಚುವರಿ ಅಭಿವೃದ್ಧಿ ಆಯುಕ್ತೆ ವಂದನಾ ಶರ್ಮಾ ಹಾಜರಿದ್ದರು.

ನಾಲ್ಕು ಅಂಶಗಳ ಮಹತ್ವ
ಜಲಸಂರಕ್ಷಣೆ:
ಯೋಜನೆಯನ್ವಯ ಜಲಮೂಲಗಳ ಪುನಶ್ಚೇತನಗೊಳಿಸಲಾಗುತ್ತದೆ. ಅದರಂತೆ 7 ನದಿಗಳು, 36,000 ಕೆರೆಗಳು ಹಾಗೂ ಲಕ್ಷಾಂತರ ಗೋಕಟ್ಟೆ, ಬಾವಿ, ಕಲ್ಯಾಣಿಗಳ ಪೈಕಿ ಶೇ.50 ರಷ್ಟು ಅತಿಕ್ರಮಣ ಹಾಗೂ ಹೂಳು ತುಂಬಿವೆ. ಹೀಗಾಗಿ ಅವುಗಳನ್ನು ಪುನಶ್ಚೇತನ ಹಾಗೂ ಹೊಸ ಜಲಮೂಲಗಳನ್ನು ಸೃಜಿಸಲಾಗುತ್ತದೆ. 2 ವರ್ಷಗಳಲ್ಲಿ 14,000 ಜಲಮೂಲಗಳ ಪುನಶ್ಚೇತನ, 12,000 ಚೆಕ್‌ ಡ್ಯಾಂ, ಕಿಂಡಿ ಅಣೆಕಟ್ಟು, ಸಣ್ಣ ಜಲಾಶಯ ನಿರ್ಮಿಸುವ ಗುರಿ ಇದೆ.

ಜಲ ಸಾಕ್ಷರತೆ: ನೀರಿನ ಮಿತವ್ಯಯ, ಪೋಲು ತಡೆಗಟ್ಟುವುದು, ಮನೆಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕುರಿತು ಜಾಗೃತಿ ಮೂಡಿಸಲಾಗುತ್ತದೆ. 

ಜಲಪ್ರಜ್ಞೆ: ವಿದ್ಯಾರ್ಥಿಗಳು, ಸ್ಥಳೀಯ ಸಮುದಾಯ, ಶಿಕ್ಷಕರು, ಜಲತಜ್ಞರನ್ನೊಳಗೊಂಡು ಸಾರ್ವಜನಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಅರಿವು ಮೂಡಿಸಲಾಗುತ್ತದೆ.

ಹಸಿರೀಕರಣ: ಪ್ರತಿ ಜಿಲ್ಲೆಯಲ್ಲಿ 1 ಕೋಟಿ ಸಸಿ ನೆಟ್ಟು ಪೋಷಿಸಿ, ಐದು ವರ್ಷಗಳ ಬಳಿಕ ಗಣತಿ ಮಾಡಿಸಲಾಗುತ್ತದೆ.

ಸರ್ಕಾರದಿಂದ ಗ್ರಾಮಗಳಿಗೆ ಪೂರೈಕೆ ಮಾಡುತ್ತಿರುವ ನೀರನ್ನು ಪ್ರತಿಯೊಂದಕ್ಕೂ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರದಿಂದ ಪೂರೈಕೆ ಮಾಡುವ ನೀರಿಗೆ ದರ ನಿಗದಿಪಡಿಸಬೇಕಿದೆ. ಇದರಿಂದಾಗಿ ಜನರಲ್ಲಿ ನೀರು ಉಳಿಸುವ ಮನೋಭಾವ ಬೆಳೆಯಲಿದೆ. ಎತ್ತಿನ ಹೊಳೆ ಯೋಜನೆಯಿಂದ ಮೂರು ತಿಂಗಳು ಮಾತ್ರ ನೀರು ದೊರೆಯಲಿದ್ದು, ನಾಲೆಯಿಂದ ಪಂಪ್‌ಸೆಟ್‌ ಹಾಕಿ ನೀರು ತೆಗೆಯದಂತೆ ಕಾನೂನು ಜಾರಿಗೊಳಿಸಲಾಗುವುದು. 
-ಡಿ.ಕೆ.ಶಿವಕುಮಾರ್‌, ಜಲಸಂಪನ್ಮೂಲ ಸಚಿವ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.