ಜಾತಿ ಆಧಾರದಲ್ಲಿ ಸಿಎಂ ಮತ ಕೇಳುತ್ತಿದ್ದಾರೆ: ಪ್ರಕಾಶ್ ರಾಠೋಡ್
Team Udayavani, Nov 28, 2019, 12:51 PM IST
ಬೆಂಗಳೂರು: ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ದೊಡ್ಡ ಅಕ್ರಮ ಎಸಗಿದ್ದಾರೆ. ಜಾತಿ ಆಧಾರದಲ್ಲಿ ಸಿಎಂ ಮತ ಕೇಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಮತದಾರರಿಗೆ ಉಂಗುರ, ಸೀರೆ, ಹಣ ಹಂಚುತ್ತಿದ್ದಾರೆ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಈ ಬಗ್ಗೆ ಚುನಾವಣಾ ಅಯೋಗ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸರ್ಕಾರಕ್ಕೆ ನಿರ್ಧಿಷ್ಟ ನಿರ್ದೇಶನ ನೀಡಬೇಕು ಎನ್ನುವ ಉದ್ದೇಶದಿಂದ ರಾಜ್ಯಪಾಲರ ಕಚೇರಿಗೆ ದೂರು ನೀಡಿದ್ದೇವೆ. ಜೊತೆಗೆ ಚುನಾವಣಾ ಆಯೋಗದ ವಿರುದ್ಧವೂ ದೂರು ನೀಡಿದ್ದೇವೆ ಎಂದು ಹೇಳಿದರು.