ನಾಳೆ ಕಾರ್ಖಾನೆ ಮಾಲೀಕರ ಜತೆ ಸಿಎಂ ಸಭೆ
Team Udayavani, Nov 21, 2018, 6:00 AM IST
ಬೆಂಗಳೂರು: ಕಬ್ಬು ಬೆಳೆಗಾರರಿಗೆ ಬರಬೇಕಾಗಿರುವ ಬಾಕಿ ಹಣಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಗುರುವಾರ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಭೆ ನಡೆಸಲಿದ್ದಾರೆ. ಕಬ್ಬು ಬೆಳೆಗಾರರ ಜತೆ ಮಂಗಳವಾರ ನಡೆದ ಸಭೆಯಲ್ಲಿ ರೈತರಿಗೆ ಈ ಬಗ್ಗೆ ಭರವಸೆ ನೀಡಿರುವ ಮುಖ್ಯಮಂತ್ರಿಗಳು, ಗುರುವಾರವೇ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೋರಾಟ ಸ್ಥಗಿತ ಮಾಡುವ ಬಗ್ಗೆ ರೈತರೂ ಸಿಎಂಗೆ ಭರವಸೆ ನೀಡಿದ್ದಾರೆ. ಜತೆಗೆ, ರೈತರು ಸಕ್ಕರೆ ಕಾರ್ಖಾನೆ ಮಾಲೀಕರಿಂದ ತಮಗೆ ಆಗುತ್ತಿರುವ ಅನ್ಯಾಯಗಳ ಪಟ್ಟಿಯನ್ನು ಮುಖ್ಯ ಮಂತ್ರಿಗೆ ಸಲ್ಲಿಸಿದ್ದಾರೆ. ಪ್ರಮುಖವಾಗಿ ಕಾರ್ಖಾನೆ ಮಾಲೀಕರು ತೂಕದಲ್ಲಿ ಮೋಸ ಮಾಡುವುದು, 14 ದಿನದೊಳಗೆ ಕಬ್ಬಿನ ಬಿಲ್ ನೀಡದಿರುವುದನ್ನು ಪ್ರಸ್ತಾಪಿಸಿದ್ದಾರೆ. ಕಬ್ಬಿನ ಸಾಗಾಣಿಕೆ ದರವನ್ನು ಕಾರ್ಖಾನೆ ಮಾಲೀಕರೆ ನೀಡಬೇಕು ಎನ್ನುವ ಬೇಡಿಕೆಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಿದ್ದಾರೆ.
ರೈತರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ, ಕಬ್ಬಿನ ತೂಕದಲ್ಲಿ ಮೋಸ ಮಾಡುವುದನ್ನು ಪತ್ತೆ ಹಚ್ಚಲು ಅಧಿಕಾರಿ ತಂಡ ರಚಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಕಬ್ಬಿನ ತೂಕ ಮಾಡುವ ಹದಿನೈದು ದಿನದಲ್ಲಿ ಪ್ರತಿಯೊಂದು ಕಾರ್ಖಾನೆಯೂ ಆಧುನಿಕ ತೂಕದ ಯಂತ್ರ ಅಳವಡಿಸಿ ಕೊಳ್ಳಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಮಂತ್ರಿ, ರೈತರು ಹಾಗೂ ಕಾರ್ಖಾನೆ ಮಾಲೀಕರೊಂದಿಗಿನ ಸಭೆ ಸುಗಮ ವಾಗಿ ನಡೆದಿದೆ. ಸರ್ಕಾರ ರೈತರ ಭಾವನೆಗಳನ್ನು ಅರ್ಥ ಮಾಡಿ ಕೊಂಡಿದ್ದು, ರೈತರಿಗೂ ಸರ್ಕಾರದ ನಿಲುವು ಏನು ಎನ್ನುವುದು ಮನವರಿಕೆಯಾಗಿದೆ. 2017-18ನೇ ಸಾಲಿನಲ್ಲಿ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಆಗಿರುವ
ಒಪ್ಪಂದದಂತೆ ರೈತರಿಗೆ ಬಾಕಿ ಕೊಡಿಸಲು ಸರ್ಕಾರ ಬದಟಛಿವಾಗಿದೆ. ರೈತರ ಪ್ರಕಾರ 450 ಕೋಟಿ ರೂ.ಬಾಕಿ ಇದೆ. ಅದನ್ನು ಇನ್ನೆರಡು ದಿನದಲ್ಲಿ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ರೈತರಿಗೆ ಕೊಡಿಸುವುದಾಗಿ ತಿಳಿಸಿದರು.
ಈ ವರ್ಷದ ಹಂಗಾಮಿನಲ್ಲಿ ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ ನಿಗದಿ ಮಾಡಿರುವ ಎಫ್ಆರ್ಪಿ ದರ 2750 ರೂ.ಯನ್ನು ಮೊದಲ ಕಂತಿನಲ್ಲಿಯೇ ನೀಡಬೇಕು ಎಂದು ಸೂಚಿಸಲಾಗಿದೆ. ಬಾಕಿ ಹಣ ಕೊಡಿಸಲು ಸರ್ಕಾರದ ಕಾನೂನು ಪ್ರಕಾರ ಕಾರ್ಖಾನೆ ಮಾಲೀಕರಿಂದ ವಸೂಲಿ ಮಾಡಲಾಗುವುದು. ರೈತರಿಗೆ ಬಾಕಿ ಹಣ ಕೊಡಿಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಂಡಿದೆ. ರೈತರ ಹಣ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳಿಂದ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರೈತರು ಎಕ್ಸ್ಫಿಲ್ಡ್ ಪ್ರಕಾರ ದರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಕಾರ್ಖಾನೆ ಮಾಲೀಕರು ಹಾಗೂ ರೈತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಸಕ್ಕರೆ ಆಯುಕ್ತರಿಗೆ ಸೂಚಿಸಲಾಗಿದೆ. ರೈತರ ಹಿತ ದೃಷ್ಠಿಯಿಂದ ಕಾನೂನಿನಲ್ಲಿರುವ ಲೋಪಗಳನ್ನು
ಸರಿಪಡಿಸಿ, ಸಕ್ಕರೆ ಕಾರ್ಖಾನೆ ಮಾಲೀಕರನ್ನು ನಿಯಂತ್ರಿಸಲು ಸೂಕ್ತ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.
ಸರ್ಕಾರ ಕಾರ್ಖಾನೆ ಮಾಲೀಕರನ್ನು ಕಾನೂನು ಪ್ರಕಾರ ಹಿಡಿತಕ್ಕೆ ತರಬೇಕು. ಬಾಕಿ ಹಣವನ್ನು ಕೊಡಿಸಲು ಸರ್ಕಾರದಿಂದ ಸಾಧ್ಯವಾಗದಿದ್ದರೆ, ಸರ್ಕಾರ ರೈತರಿಗೆ ರಕ್ಷಣೆ ನೀಡಿದರೆ, ನಾವೇ ಕಾರ್ಖಾನೆ ಮಾಲೀಕರಿಂದ ಹಣ ವಸೂಲಿ ಮಾಡಿಕೊಳ್ಳುತ್ತೇವೆ.
● ಕುರಬೂರು ಶಾಂತಕುಮಾರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ
ಮುಖ್ಯಮಂತ್ರಿ ಸಭೆಯಲ್ಲಿ ಮಾತು ಕೊಟ್ಟಂತೆ ಕಾರ್ಖಾನೆ ಮಾಲೀಕರಿಂದ ಬಾಕಿ ಹಣ ಕೊಡಿಸಬೇಕು. ಬೆಳಗಾವಿ ಅಧಿವೇಶನಕ್ಕೂ ಮೊದಲೇ ರೈತರ ಮತ್ತೂಂದು ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ, ಅಧಿವೇಶನ ಸಂದರ್ಭದಲ್ಲಿ ಮತ್ತೆ ಪ್ರತಿಭಟನೆ ಅನಿವಾರ್ಯವಾಗುತ್ತದೆ.
● ಸುಭಾಸ್, ಶಿರಬೂರ್ ರೈತ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!