ತೈವಾನ್ ಕಂಪನಿ ಮುಖ್ಯಸ್ಥರಿಂದ ಸಿಎಂ ಭೇಟಿ
Team Udayavani, Jun 20, 2019, 3:04 AM IST
ಬೆಂಗಳೂರು: ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೋರೇಷನ್ ಕಂಪನಿಯ ನಿರ್ದೇಶಕ ವಿ.ಲೀ.ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿತು.
ಕೋಲಾರದ ನರಸಾಪುರದಲ್ಲಿ ಆರಂಭಿಸಲು ಉದ್ದೇಶಿಸಿರುವ 650 ಕೋಟಿ ರೂ.ಬಂಡವಾಳ ಹೂಡಿಕೆಯ ಮಾಹಿತಿ ಹಾಗೂ ಸಂವಹನ ತಂತ್ರಜ್ಞಾನಗಳ ಉತ್ಪನ್ನಗಳ ಕಂಪನಿಗೆ ಈಗಾಗಲೇ 40 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದ್ದು, ಬಾಕಿ 3 ಎಕರೆ ಜಮೀನು ಮಂಜೂರು ಮಾಡುವಂತೆ ಲೀ ಅವರು ಮನವಿ ಮಾಡಿದರು.
ವಿಸ್ಟ್ರಾನ್ ಕಂಪನಿಯ ಒಂದು ಘಟಕ ಪೀಣ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 1,500 ಜನರಿಗೆ ಉದ್ಯೋಗ ನೀಡಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ದೃಷ್ಟಿಯಿಂದ ಸರ್ಕಾರದ ವತಿಯಿಂದ ಕಂಪನಿಗೆ ಎಲ್ಲ ಸಹಕಾರ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು.
ಕಂಪನಿಯ ಸ್ಥಳೀಯ ನಿರ್ದೇಶಕ ಸೆಂಥಿಲ್ಕುಮಾರ್, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ವಿಸ್ಟ್ರಾéನ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಮಂಜುನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು