ಜೋರಾಗಿದೆ ಮಾತಿನ ಮಲ್ಲರ ಛೂ ಬಾಣ
Team Udayavani, Apr 3, 2018, 6:00 AM IST
ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ವಿವಿಧ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ಕೆಸರೆರಚಾಟ ಒಂದುಕಡೆಯಾದರೆ, ಪ್ರಾದೇಶಿ ಪಕ್ಷ ಜೆಡಿಎಸ್ ತಾನೇನು ಕಡಿಮೆ ಎಂದು ಎರಡೂ ಪಕ್ಷಗಳ ವಿರುದ್ಧ ಹರಿಯಾಯುತ್ತಿದೆ. ಇದಕ್ಕೊಂದು ಉದಾಹರಣೆ ಎನ್ನುವಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಾಣಕ್ಕೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹಾವೇರಿಯಲ್ಲಿ ತಿರುಗುಬಾಣ ನೀಡಿದ್ದಾರೆ.
ಸಿಎಂ ಹೇಳಿದ್ದೇನೇನು?
1. ಯಡಿಯೂರಪ್ಪಗೂ ವರುಣಾ ಕ್ಷೇತ್ರಕ್ಕೂ ಏನು ಸಂಬಂಧ? ಅವರ ಮಗ ಬಂದು ಚುನಾವಣೆಗೆ ಸ್ಪರ್ಧಿಸಿದ ಕೂಡಲೇ ಕ್ಷೇತ್ರದ ಜನ ಅವರ ಹಿಂದೆ ಓಡಿ ಹೋಗಿಬಿಡುತ್ತಾರಾ?
3. ನನ್ನ ಮಗ ನಿಂತರೂ ಸಿಎಂ ಮಗ ಎಂದು ಜನ ಮತ ಹಾಕಲ್ಲ, ಕ್ಷೇತ್ರದಲ್ಲಿ ನಾನು ಮಾಡಿರುವ ಕೆಲಸದ ಆಧಾರದ ಮೇಲೆ ಮತಹಾಕುತ್ತಾರೆ.
4. ವರುಣಾ ಕ್ಷೇತ್ರದ ಕಷ್ಟಕ್ಕೆ ಸ್ಪಂದಿಸಿರುವುದು ನಾವು. ಆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದು ನಾನು. ಹೀಗಿರುವಾಗ ಯಾರೋ ಬಂದು ಚುನಾವಣೆಗೆ ನಿಂತ ತಕ್ಷಣ ಅಲ್ಲಿನ ಜನ ಬದಲಾಗುವುದಿಲ್ಲ.
5. ಕ್ಷೇತ್ರದ ಜನರಿಗೆ ಯಾರಿಗೆ ಮತ ಹಾಕಬೇಕು ಎಂಬುದು ಗೊತ್ತಿದೆ. ಮಾಜಿ ಸಿಎಂಗಳ ಮಕ್ಕಳು ಚುನಾವಣೆಗೆ ನಿಂತು ಗೆಲ್ಲುವುದಾಗಿದ್ದರೆ, ಯಾರ್ಯಾರೋ ಶಾಸಕರಾಗಿರುತ್ತಿದ್ದರು. ವಿಜಯೇಂದ್ರ ಬಗ್ಗೆ ನನ್ನ ಬಳಿ ಪ್ರಶ್ನೆ ಕೇಳಬೇಡಿ.
ವರುಣಾ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಯಾಕೆ? ಅವರಪ್ಪ ಯಡಿಯೂರಪ್ಪ ಅವರೇ ಬಂದು ಸ್ಪರ್ಧಿಸುವುದಕ್ಕೆ ಹೇಳಿ.
– ಸಿದ್ದರಾಮಯ್ಯ. ಮುಖ್ಯಮಂತ್ರಿ
ಈಶ್ವರಪ್ಪ ಹೇಳಿದ್ದೇನೇನು?
1. ಸಿದ್ದರಾಮಯ್ಯ ಹಿಂದುಳಿದ ವರ್ಗದ ನಕಲಿ ನಾಯಕ. ಪ್ರಧಾನಿ ಮೋದಿ ಅಸಲಿ ನಾಯಕ.
2. ಹಲವು ವರ್ಷಗಳ ಕಾಲ ಅಹಿಂದ ಜಪ ಮಾಡಿದ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಆ ವರ್ಗಕ್ಕೆ ನೀಡಿದ ಕೊಡುಗೆ ಶೂನ್ಯ.
3. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ತಾವೇ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಹೈಕಮಾಂಡ್ ಚಕಾರವೆತ್ತಿಲ್ಲ. ಸದ್ಯ ಇವರು ಸ್ವಯಂ ಘೋಷಿತ ಸಿಎಂ.
– ಕೆ.ಎಸ್. ಈಶ್ವರಪ್ಪ, ಪರಿಷತ್ ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ