![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
ಬ್ಯಾಂಕ್ ಅಧಿಕಾರಿಗೆ ಸಿಎಂ ತರಾಟೆ
Team Udayavani, Aug 19, 2018, 11:59 AM IST
![bank-adhika.jpg](https://www.udayavani.com/wp-content/uploads/2018/08/19/bank-adhika.jpg)
ಬೆಂಗಳೂರು: “ಸರ್ಕಾರ ರೈತರ ಸಾಲ ಮನ್ನಾ ಮಾಡ್ತಿದ್ರೆ, ನೀವು ಅವರಿಗೆ ನೋಟಿಸ್ ಕೊಟ್ಟು ಕಿರುಕುಳ ಕೊಡ್ತೀರಾ’ ಹೀಗೆಂದು ಬ್ಯಾಂಕ್ ಅಧಿಕಾರಿ ಒಬ್ಬರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಶನಿವಾರ ನಡೆಯಿತು.
ದೇವನಹಳ್ಳಿ ತಾಲೂಕು ವಿಜಯಪುರದ ಆಕ್ಸಿಸ್ ಬ್ಯಾಂಕ್ ಶಾಖೆ ಅಧಿಕಾರಿಗಳು ನೋಟಿಸ್ ನೀಡಿ ಕಿರುಕುಳ ಕೊಡುತ್ತಿದ್ದಾರೆ ಎಂದು ರೈತ ದೇವರಾಜ್ ಸಿಎಂಗೆ ದೂರಿದರು. ಇದಕ್ಕೆ ತಕ್ಷಣ ಬ್ಯಾಂಕಿನ ಅಧಿಕಾರಿ ವೆಂಕಟೇಶ್ರಿಗೆ ಕರೆ ಮಾಡಿದ ಸಿಎಂ, “ರೀ ವೆಂಕಟೇಶ್ ನಾನು ಕುಮಾರಸ್ವಾಮಿ ಮಾತಾಡ್ತಿದೀನಿ, ಸರ್ಕಾರ ರೈತರ ಸಾಲ ಮನ್ನಾ ಮಾಡ್ತಿದ್ರೆ, ನೀವು ಅವರಿಗೆ ನೋಟಿಸ್ ಕೊಟ್ಟು ಯಾಕೆ ಕಾಟ ಕೊಡ್ತೀದಿರಾ, ಯಾರು ನಿಮ್ಮ ಅಧ್ಯಕ್ಷರು, ಹೇಳಿ ಅವರಿಗೆ, ಇದೆಲ್ಲಾ ಮಾಡಬೇಡಿ ಅಂತ’ ಎಂದು ಗದರಿದರು.
“ಈಗಾಗಲೇ ಸಹಕಾರಿ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಶೀಘ್ರವೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಬಗ್ಗೆಯೂ ಆದೇಶ ಹೊರಡಿಸುತ್ತೇವೆ. ರೈತರಿಗೆ ಈ ರೀತಿ ನೋಟಿಸ್ ಕೊಟ್ಟು ಅವರನ್ನು ಮಾನಸಿಕವಾಗಿ ಕುಗ್ಗಿಸಬೇಡಿ,’ ಎಂದು ಅಧಿಕಾರಿಗೆ ಹೇಳಿದರು.
ಅಸಲಿಯತ್ತು ಬಿಚ್ಚಿಡುತ್ತೇನೆ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, “ರೈತರ ಸಾಲ ಮನ್ನಾದ ಮೊತ್ತ 28 ಸಾವಿರ ಕೋಟಿ ರೂ.ಗಳನ್ನು ಒಂದೇ ಕಂತಿನಲ್ಲಿ ಪಾವತಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಅಡ್ಡಗಾಲು ಹಾಕಲು ಬಿಜೆಪಿಯವರು ದೆಹಲಿಯಲ್ಲಿ ಇನ್ನಿಲ್ಲಿದ ಕಸರತ್ತು ನಡೆಸುತ್ತಿದ್ದಾರೆ. ಇದನ್ನು ನಾನು ಸವಾಲಾಗಿ ಸ್ವೀಕರಿಸಿದ್ದು, ಸೂಕ್ತ ಸಮಯದಲ್ಲಿ ಬಿಜೆಪಿಯ ಅಸಲಿಯತ್ತು ಬಿಚ್ಚಿಡುತ್ತೇನೆ’ ಎಂದರು.
ಟಾಪ್ ನ್ಯೂಸ್
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.