ಕಟ್ಟಡ ಕಾರ್ಮಿಕರ ಪರಿಹಾರಕ್ಕೆ ಸಂಹಿತೆ ಅಡ್ಡಿ


Team Udayavani, Apr 10, 2019, 3:00 AM IST

Udayavani Kannada Newspaper

ಬೆಂಗಳೂರು: ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿ ನಿರ್ಮಾಣ ಹಂತದಲ್ಲಿದ್ದ ಪಾರ್ಕಿಂಗ್‌ ಕಟ್ಟಡದ ಚಾವಣಿ ಕುಸಿದು ಗಾಯಗೊಂಡಿದ್ದ ಬಹುತೇಕ ಕಾರ್ಮಿಕರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಪಾರ್ಕಿಂಗ್‌ ನಿಲ್ದಾಣಕ್ಕಾಗಿ ನಿರ್ಮಿಸಲಾಗುತ್ತಿದ್ದ ಕಟ್ಟಡದ ಎರಡನೇ ಮಹಡಿಗೆ ಕಾಂಕ್ರಿಟ್‌ ಹಾಕುವ ಕೆಲಸ ನಡೆಯುವಾಗ ಸೆಂಟ್ರಿಂಗ್‌ ಸಡಿಲಗೊಂಡಿದ್ದರಿಂದ, ಕಟ್ಟಡ ಚಾವಣಿ ಕುಸಿದಿತ್ತು.

ಈ ಅವಘಡದಲ್ಲಿ ಬಿಹಾರ ಮೂಲದ ರಾಕೇಶ್‌ (21) ಮತ್ತು ರಾಹುಲ್‌ (18) ಎಂಬ ಕಾರ್ಮಿಕರಿಬ್ಬರು ಸಾವಿಗೀಡಾಗಿದ್ದರು. 12 ಮಂದಿ ಗಾಯಗೊಂಡಿದ್ದರು ಅವರನ್ನು ನಂದಿನಿ ಲೇಔಟ್‌ನ ಕಣ್ವ ಶ್ರೀಸಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ 9 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ದುರಂತದಲ್ಲಿ ಗಾಯಗೊಂಡವರಿಗೆ ಸಿಕ್ಕಿದ್ದು ಪುಡಿಗಾಸಷ್ಟೇ: ದುರಂತದಲ್ಲಿ ಮೃತಪಟ್ಟ ಇಬ್ಬರೂ ಸೇರಿದಂತೆ ಆಸ್ಪತ್ರೆಯಿಂದ ಬಿಡುಗಡೆಯಾದ 9 ಮಂದಿಗೆ ಎಷ್ಟು ಪರಿಹಾರ ಸಿಕ್ಕಿದೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ. ಎಪಿಎಂಸಿಯಲ್ಲಿ ಗಾಯಗೊಂಡ ಕಾರ್ಮಿಕರೊಬ್ಬರಿಗೆ ಸ್ಟಾರ್‌ ಕನ್ಸಸ್ಟ್ರಕ್ಷನ್‌ ಕಂಪನಿ 20 ಸಾವಿರ ರೂ ನೀಡಿದೆ.

ಇನ್ನೂ ಹಲವರಿಗೆ ಯಾವುದೇ ಸಹಾಯಧನ ಸಿಕ್ಕಿಲ್ಲ ಎನ್ನಲಾಗಿದೆ. ಗಾಯಗೊಂಡ ಕಾರ್ಮಿಕರಲ್ಲಿ ಬಹುತೇಕರು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ.

ನೋಂದಾಯಿಸಿಕೊಂಡಿದ್ದರೆ, ಇವರಿಗೆ 12ಕ್ಕೂ ಹೆಚ್ಚು ಸೌಲಭ್ಯಗಳು ಸಿಗುತ್ತಿತ್ತು. ಅಪಘಾತ ಸಂಭವಿಸಿದ ಸಮಯದಲ್ಲಿ ಸಿಗುವ ಸಹಾಯಧನವೂ ಸಿಗುತ್ತಿತ್ತು. ಆದರೆ, ಅದ್ಯಾವುದೂ ಈಗ ಇಲ್ಲವಾಗಿದೆ. ಹಣ ನೀಡುವುದಾಗಿ ಹಲವರು ಭರವಸೆ ನೀಡಿದ್ದರಾದರೂ ಅದು ಕಾರ್ಯರೂಪಕ್ಕೆ ಬರುವುದರ ಬಗ್ಗೆ ಖಾತರಿ ಇಲ್ಲ.

ನೀತಿ ಸಂಹಿತೆಯಿಂದ ಹಿನ್ನಡೆ: ಚುನಾವಣಾ ನೀತಿಸಹಿಂತತೆ ಜಾರಿಯಲ್ಲಿ ಇರುವುದರಿಂದ ಕಟ್ಟಡ ಕಾರ್ಮಿಕರ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಗಾಯಗೊಂಡ ಸಂದರ್ಭದಲ್ಲಿ ಅವರಿಗೆ ಸಿಗಬೇಕಾದ ಪರಿಹಾರ ಸಹ ಸೂಕ್ತ ಸಮಯದಲ್ಲಿ ಸಿಗುತ್ತಿಲ್ಲ.

ಅಪಘಾತ ನೀತಿಸಹಿಂತತೆ ಅಡಿ ಬರುವುದಿಲ್ಲ. ನೋಂದಣಿಯನ್ನು ಮುಂದುವರಿಸಿ, ಪರಿಹಾರನಿಧಿಯನ್ನು ಬೇಗ ನೀಡಬೇಕು ಎಂದು ಹಲವು ಕಾರ್ಮಿಕ ಸಂಘಟನೆಗಳು ಒತ್ತಾಯಿಸಿದ್ದು, ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

“ಚುನಾವಣಾ ಸಮಯದಲ್ಲಿ ನೋಂದಣಿಯನ್ನು ನಿಲ್ಲಿಸಲು ಮುಖ್ಯ ಕಾರಣ ಕೆಲವು ರಾಜಕಾರಣಿಗಳು ತಮ್ಮ ಪಕ್ಷದ ಕಾರ್ಯಕರ್ತರನ್ನು ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಂತಹ ಪ್ರಕರಣಗಳು ಈ ಹಿಂದೆ ನಡೆದಿದೆ’ ಎನ್ನುತ್ತಾರೆ ಹೆಸರು ಹೇಳಲು ಇಚ್ಛಿಸದ ಇಲಾಖೆಯ ಅಧಿಕಾರಿಗಳು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.