ಜನರಿಂದಲೇ ಕೈ ದೇಣಿಗೆ ಸಂಗ್ರಹ


Team Udayavani, Sep 24, 2018, 6:00 AM IST

congress-700.jpg

ಬೆಂಗಳೂರು:ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಎಐಸಿಸಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಕ್ಕೆ ಮುಂದಾಗಿದೆ.

ರಾಷ್ಟ್ರಾದ್ಯಂತ ಪಕ್ಷ ಸಂಘಟನೆಗಾಗಿ ಲೋಕ ಸಂಪರ್ಕದ ಮೂಲಕ ಒಂದು ಕೋಟಿ ಸಹಯೋಗಿ ನೋಂದಣಿ ಗುರಿಯೊಂದಿಗೆ ಸಂಪನ್ಮೂಲ ಕ್ರೋಢೀಕರಣಕ್ಕೆ ಜನರಿಂದಲೇ ಹಣ ಸಂಗ್ರಹಕ್ಕೆ ಸಜ್ಜಾಗಿದೆ. ಇದಕ್ಕಾಗಿ ಪ್ರತಿ ಮನೆಯಿಂದ ನಿಧಿ ಸಂಗ್ರಹಿಸುವಂತೆ ಕೆಪಿಸಿಸಿಗೆ ಸೂಚನೆ ನೀಡಲಾಗಿದೆ  ಸಾರ್ವಜನಿಕರಿಂದ ಸಂಗ್ರಹವಾದ ದೇಣಿಗೆ/ ನಿಧಿ ಮೊತ್ತದಲ್ಲಿ ಎಐಸಿಸಿಗೆ ಶೇ. 50, ಕೆಪಿಸಿಸಿಗೆ ಶೇ.25, ಡಿಸಿಸಿಗೆ ಶೇ. 15 ಹಾಗೂ ಬಿಸಿಸಿಗೆ ಶೇ.10ರಷ್ಟು ಹಂಚಿಕೆಯಾಗಲಿದೆ.

ಲೋಕ ಸಂಪರ್ಕ ಹಾಗೂ ನಿಧಿ ಸಂಗ್ರಹ ಅಭಿಯಾನವನ್ನು ವಾರ್ಷಿಕ ಕಾರ್ಯಕ್ರಮವಾಗಿ ಪ್ರತಿವರ್ಷ ಜನವರಿ- ಫೆಬ್ರವರಿಯಲ್ಲಿ ಕೈಗೊಳ್ಳಲು ನಿರ್ಧರಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಅ.2ರ ಗಾಂಧಿ ಜಯಂತಿ ದಿನದಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮದಿನವಾದ ನ.19ರವರೆಗೆ ಅಭಿಯಾನ ಕೈಗೊಳ್ಳಲು ಸಿದ್ಧತೆ ನಡೆಸಿದೆ.

ಪಂಜಾಬ್‌ ಹಾಗೂ ಕೇಂದ್ರಾಡಳಿತ ಪ್ರದೇಶ ಪಾಂಡಿಚೆರಿಯಲ್ಲಿ ಪೂರ್ಣ ಸರ್ಕಾರವಿರುವುದನ್ನು ಹೊರತುಪಡಿಸಿದರೆ ಕರ್ನಾಟಕದಲ್ಲಿ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‌ ಪಾಲುದಾರ ಪಕ್ಷವಾಗಿದೆ. ಹಾಗಾಗಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆ, ಕಾರ್ಯಕರ್ತರ ಸಂಖ್ಯೆ ವೃದ್ಧಿ, ಪಕ್ಷದ ಪ್ರಚಾರ ಕಾರ್ಯ ಇತರೆ ಚಟುವಟಿಕೆಗಳಿಗಾಗಿ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಸಾರ್ವಜನಿಕರಿಂದಲೇ ನಿಧಿ ಸಂಗ್ರಹಕ್ಕೆ ಸಜ್ಜಾಗಿದೆ.ನಗರದಲ್ಲಿ ಭಾನುವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರು, ರಾಜ್ಯ ಮುಂಚೂಣಿ ಘಟಕ, ಸೆಲ್‌/ ವಿಭಾಗದ ಅಧ್ಯಕ್ಷರ ಸಭೆಯಲ್ಲಿ ಈ ಬಗ್ಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸೂಚನೆ ನೀಡಿದರು.

ಅಭಿಯಾನದ ಐದು ಮಾರ್ಗಸೂಚಿ
ಪ್ರತಿ ಮನೆ ಮನೆಗೆ ಭೇಟಿ ನೀಡಿ ಎಐಸಿಸಿ ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕರಪತ್ರ, ಕೈಪಿಡಿ ನೀಡಿ ಪಕ್ಷದ ಸರ್ಕಾರದ ಸಾಧನೆ ಬಗ್ಗೆ  ಮನವರಿಕೆ ಮಾಡಿಕೊಡಬೇಕು. 15ರಿಂದ 21ರ ವಯೋಮಾನದ ಯುವ ಮತದಾರರನ್ನು ಆದ್ಯತೆ ಮೇರೆಗೆ ಸದಸ್ಯರನ್ನಾಗಿ ನೋಂದಾಯಿಸಿಕೊಳ್ಳಬೇಕು. ಒಂದು ಕೋಟಿ ಬೂತ್‌ ಸಹಯೋಗಿಗಳನ್ನು ನೋಂದಾಯಿಸಬೇಕು. ಪ್ರತಿ ಮನೆಯಿಂದ ನಿಧಿ ಸಂಗ್ರಹಿಸಬೇಕು ಎಂದು ಮಾರ್ಗಸೂಚಿ ನೀಡಲಾಗಿದೆ.

ಎಐಸಿಸಿ ಅಧ್ಯಕ್ಷರ ಆದೇಶದಂತೆ ದೇಶಾದ್ಯಂತ “ಲೋಕಸಂಪರ್ಕ ಅಭಿಯಾನ’ ನಡೆಯಲಿದೆ. ಅದರಂತೆ ಅ.2ರಿಂದ ನ.19ರವರೆಗೆ ಅಭಿಯಾನ ನಡೆಸಬೇಕು. ಯುವ ಮತದಾರರನ್ನು ಪಕ್ಷದ ಸಕ್ರಿಯ ಸದಸ್ಯರನ್ನಾಗಿ ನೇಮಿಸಿಕೊಳ್ಳಬೇಕು. ಬೂತ್‌ ಮಟ್ಟದಲ್ಲಿ ನೋಂದಣಿಯಾದ “ಬೂತ್‌ ಸಹಯೋಗಿ’ ಜತೆಗೆ ದೇಣಿಗೆದಾರರ ವಿವರವನ್ನು “ಶಕ್ತಿ’ಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಒಂದು ಕೋಟಿ ಸಹಯೋಗಿ ನೋಂದಣಿ ಗುರಿ
ಕನಿಷ್ಠ ಒಂದು ಕೋಟಿ ಸಹಯೋಗಿ ನೋಂದಣಿ ಗುರಿ ನೀಡಲಾಗಿದ್ದು, ಪ್ರತಿ ಬೂತ್‌ನಲ್ಲಿ ಕನಿಷ್ಠ 10ರಿಂದ 15 ಸದಸ್ಯರ “ಬೂತ್‌ ಸಹಯೋಗಿ’ಗಳನ್ನು ನೇಮಿಸಬೇಕು. ಈ ಸಹಯೋಗಿಗಳು ತಮ್ಮ ಬೂತ್‌ ವ್ಯಾಪ್ತಿಯಲ್ಲಿ 20 -25 ಮನೆಯವರನ್ನು ಭೇಟಿಯಾಗಿ ನಿಧಿ ಸಂಗ್ರಹಿಸಬೇಕು. ಪ್ರತಿ 100 ಬೂತ್‌ ಸಹಯೋಗಿಗಳಿಗೆ ಒಬ್ಬ ಏರಿಯಾ ಬೂತ್‌ ಕೋ ಆರ್ಡಿನೇಟರ್‌ ನೇಮಿಸಬೇಕು. ನಿಧಿ ಸಂಗ್ರಹ ಕಾರ್ಯವನ್ನು ಬೂತ್‌ ಹಂತದಲ್ಲಿ ಅನುಷ್ಠಾನಗೊಳಿಸಬೇಕು. ಅಭಿಯಾನದ ಅನುಷ್ಠಾನ ಬೆಳವಣಿಗೆ ವಿವರವನ್ನು ನೇರವಾಗಿ ಎಐಸಿಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳು ಪಡೆಯಲಿದ್ದಾರೆ ಎಂದು ತಿಳಿಸಿದೆ.

ದೇಣಿಗೆ ಸಂಗ್ರಹಕ್ಕೆ ಎಐಸಿಸಿ ರಸೀದಿಯನ್ನೇ ಬಳಸಿ ಅದನ್ನು ಜೋಪಾನವಾಗಿ ಕಾಪಾಡಬೇಕು. ಎಐಸಿಸಿ ಮಾರ್ಗಸೂಚಿಯನ್ವಯವಷ್ಟೇ ನಿಧಿ ಸಂಗ್ರಹಿಸಬೇಕು. ಎಐಸಿಸಿ ಅನುಮೋದನೆ ಇಲ್ಲದೆ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಿದೆ. ಲೋಕ ಸಂಪರ್ಕ ಅಭಿಯಾನ ಹಾಗೂ ಶಕ್ತಿ ಪ್ರಾಜೆಕ್ಟ್ ಕಾರ್ಯಕ್ರಮಗಳ ಅನುಷ್ಠಾನದ ಆಧಾರದ ಮೇಲೆ ಕಾರ್ಯವೈಖರಿಯನ್ನು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಸೆಪ್ಟೆಂಬರ್‌ ಅಂತ್ಯದೊಳಗೆ ಖಾಲಿಯಿರುವ ಎಲ್ಲ ಬ್ಲಾಕ್‌, ಡಿಸಿಸಿ ಅಧ್ಯಕ್ಷರ ಸ್ಥಾನ ಹಾಗೂ ಕೆಪಿಸಿಸಿ ಸದಸ್ಯರ ನೇಮಕವಾಗಲಿದೆ. ಕೆಪಿಸಿಸಿಯಿಂದ ಬ್ಲಾಕ್‌ ಕಾಂಗ್ರೆಸ್‌ ಸಮಿತಿವರೆಗೆ ಎಲ್ಲ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಗಳ ಪಟ್ಟಿಯನ್ನು ಎಐಸಿಸಿಗೆ ಸೆ.25ರೊಳಗೆ ಸಲ್ಲಿಸಬೇಕು. ಕಳೆದ ಚುನಾವಣೆ ವೇಳೆ ಸಲ್ಲಿಸಿದ್ದ ಡಿಸಿಸಿ, ಬ್ಲಾಕ್‌ ಸಮಿತಿಗಳ ಪಟ್ಟಿಯನ್ನು ಮತ್ತೂಮ್ಮೆ ಪರಾಮರ್ಶಿಸಿ ಬದಲಾವಣೆಯಿದ್ದರೆ ಸರಿಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.