ಮೆಟ್ರೋಗೆ ಬಂತು ಕಾಮನ್ ಮೊಬಿಲಿಟಿ ಗೇಟ್
Team Udayavani, Jan 29, 2020, 3:09 AM IST
ಬೆಂಗಳೂರು: ಬಹುನಿರೀಕ್ಷಿತ ಕಾಮನ್ ಮೊಬಿಲಿಟಿ ಕಾರ್ಡ್ ಪರಿಚಯಿಸುವ ಕಾರ್ಯಕ್ಕೆ “ನಮ್ಮ ಮೆಟ್ರೋ’ದಲ್ಲಿ ಸಿದ್ಧತೆ ನಡೆದಿದ್ದು, ಈಗಾಗಲೇ ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಈ ಸಂಬಂಧ ಅಗತ್ಯವಿರುವ ಏಕೀಕೃತ ದರ ಸಂಗ್ರಹ ದ್ವಾರಗಳನ್ನು ಅಳವಡಿಸಲಾಗಿದೆ.
ಈಗಾಗಲೇ ಇರುವ ಆಟೋಮೆಟಿಕ್ ಫೇರ್ ಕಲೆಕ್ಷನ್ ಗೇಟ್ (ಎಎಫ್ಸಿ) ಪಕ್ಕದಲ್ಲೇ “ಸ್ವಾಗತ್’ ಎಂಬ ಒಂದು ಜೋಡಿ ಏಕೀಕೃತ ದರ ಸಂಗ್ರಹ ದ್ವಾರಗಳನ್ನು ಬೈಯಪ್ಪನಹಳ್ಳಿಯಲ್ಲಿ ಅಳವಡಿಸ ಲಾಗಿದೆ. ಆದರೆ, ತಾಂತ್ರಿಕವಾಗಿ ಜೋಡಣೆ ಮಾಡಿ ಕಾರ್ಯಾಚರಣೆಗೊಳ್ಳಲು ಕನಿಷ್ಠ ಎರಡು ತಿಂಗಳು ಬೇಕಾಗುತ್ತದೆ. ಬರುವ ಹಣಕಾಸು ವರ್ಷದಿಂದ ಇದರ ಪ್ರಾಯೋಗಿಕ ಸೇವೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ಬೆಂಗಳೂರು ರೈಲು ನಿಗಮ (ಬಿಎಂಆರ್ಸಿಎಲ್) ಮೂಲಗಳು ತಿಳಿಸಿವೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿ., (ಬಿಇಎಲ್) ಹಾಗೂ ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್$x ಕಂಪ್ಯೂಟಿಂಗ್ (ಸಿಡಿಎಸಿ) ಸಹಯೋಗದಲ್ಲಿ ಈ ಗೇಟ್ಗಳು ಪೂರೈಕೆಯಾಗಿವೆ. ಈ ದ್ವಾರಗಳ ಸೇವೆ ಆರಂಭಗೊಂಡ ನಂತರ ಪ್ರಯಾಣಿಕರು ದೇಶದ ಯಾವುದೇ ಮೆಟ್ರೋದಲ್ಲಿ ಬಳಸುವ ಕಾರ್ಡ್ ಗಳನ್ನು “ನಮ್ಮ ಮೆಟ್ರೋ’ದಲ್ಲಿ ತೋರಿಸಿ ಸಂಚರಿಸಬಹುದು. ಬಿಎಂಟಿಸಿಯೂ ಈ ಸೇವೆಯನ್ನು ಅಳವಡಿಸಿಕೊಂಡರೆ, ಅದಕ್ಕೂ ಈ ಕಾರ್ಡ್ ಬಳಸಬಹುದಾಗಿದೆ. ಆದರೆ, ಇದಕ್ಕೆ ಬಿಎಂಟಿಸಿಯು ಇಟಿಎಂ ಅಪ್ಗ್ರೇಡ್ ಮಾಡಿಕೊಳ್ಳಬೇಕಾಗುತ್ತದೆ.
ಪ್ರಸ್ತುತ ದೆಹಲಿ ಮೆಟ್ರೋದಲ್ಲಿ ಈ ಕಾಮನ್ ಮೊಬಿಲಿಟಿ ಕಾರ್ಡ್ ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ. ಈ ಗೇಟ್ಗಳ ಸಾಫ್ಟ್ವೇರ್, ವಿನ್ಯಾಸ ಎಲ್ಲವೂ ದೇಶೀಯವಾಗಿದೆ. ಆದರೆ, ಅದಕ್ಕೆ ಬಳಸುವ ಚಿಪ್ ಮಾತ್ರ ಹೊರದೇಶದ್ದಾಗಿದೆ.
ಮೊಬಿಲಿಟಿ ಕಾರ್ಡ್ ಕಾರ್ಯ ಹೇಗೆ?: ಮೆಟ್ರೋದಲ್ಲಿ ಈಗಿರುವ ಕಾಂಟ್ಯಾಕ್ಟ್ಲೆಸ್ ಸ್ಮಾರ್ಟ್ ಕಾರ್ಡ್ ಕ್ಲೋಸ್ ಲೂಪ್ ವ್ಯವಸ್ಥೆ ಹೊಂದಿದೆ. ಅಂದರೆ, ಆ ಕಾರ್ಡ್ ಅನ್ನು ಆಟೋಮೆಟಿಕ್ ಫೇರ್ ಗೇಟ್ನಲ್ಲಿ ಸ್ವೆ„ಪ್ ಮಾಡಿದಾಗ, ಕಡಿತಗೊಳ್ಳುವ ಹಣ ನೇರವಾಗಿ ಬಿಎಂಆರ್ಸಿಎಲ್ ಖಾತೆಗೆ ಜಮೆ ಆಗುತ್ತದೆ. ಹಾಗಾಗಿ, ಅದನ್ನು ಬೇರೆ ಸಾರಿಗೆ ವ್ಯವಸ್ಥೆಯಲ್ಲಿ ಬಳಕೆ ಮಾಡಲು ಬರುವುದಿಲ್ಲ.
ಆದರೆ, ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಓಪನ್ ಲೂಪ್ ವ್ಯವಸ್ಥೆ ಹೊಂದಿದೆ. ಅದನ್ನು ಯಾವುದೇ ಸಾರಿಗೆ ವ್ಯವಸ್ಥೆಯಲ್ಲಿ ಬಳಕೆ ಮಾಡಿದರೂ, ಒಂದೇ ಖಾತೆಗೆ ಹಣ ಜಮೆ ಆಗುತ್ತದೆ. ಅಲ್ಲಿಂದ ಆಯಾ ಸಂಸ್ಥೆಗೆ ಹೋಗುತ್ತದೆ. ಈ ಸಂಬಂಧ ಬ್ಯಾಂಕ್ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಮೂಲಗಳ ಪ್ರಕಾರ ಸದ್ಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಕಾಮನ್ ಮೊಬಿಲಿಟಿ ಕಾರ್ಡ್ ಅನ್ನು ಪ್ರಾಯೋಗಿಕವಾಗಿ ಪರಿಚಯಿಸುವ ಕೆಲಸ ನಡೆದಿದೆ. ಮಾರ್ಚ್ ಅಂತ್ಯಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಏಪ್ರಿಲ್ನಿಂದ ಪ್ರಯಾಣಿಕರ ಸೇವೆಗೆ ಇದು ಲಭ್ಯವಾಗಲಿದೆ.
-ಅಜಯ್ ಸೇಠ್, ವ್ಯವಸ್ಥಾಪಕ ನಿರ್ದೇಶಕರು, ಬಿಎಂಆರ್ಸಿಎಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ