ಸಂಕಷ್ಟದಲ್ಲೂ ವಾಣಿಜ್ಯ, ಅಬಕಾರಿ ತೆರಿಗೆ ಚೇತರಿಕೆ


Team Udayavani, Oct 9, 2020, 12:10 PM IST

ಸಂಕಷ್ಟದಲ್ಲೂ ವಾಣಿಜ್ಯ, ಅಬಕಾರಿ ತೆರಿಗೆ ಚೇತರಿಕೆ

ಬೆಂಗಳೂರು: ಕೋವಿಡ್‌- 19, ಲಾಕ್‌ಡೌನ್‌, ಪ್ರವಾಹದ ಪರಿಣಾಮವಾಗಿ ಜನ ಜೀವನ ಅಸ್ತವ್ಯಸ್ತವಾಗಿ ಆರ್ಥಿಕ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲೂ ರಾಜ್ಯ ಸರ್ಕಾರಕ್ಕೆ ವಾಣಿಜ್ಯ ತೆರಿಗೆ ಹಾಗೂ ಅಬಕಾರಿ ತೆರಿಗೆ ಮೂಲದ ಆದಾಯ ಸಂಗ್ರಹ ಚೇತರಿಕೆಯಾಗುತ್ತಿರುವುದು ಆಶಾದಾಯಕವಾಗಿದೆ.

ಪ್ರಸಕ್ತ 2020-21ನೇ ಆರ್ಥಿಕ ವರ್ಷದ 2ನೇ ತ್ತೈಮಾಸಿಕ ಪೂರ್ಣಗೊಂಡಿದ್ದು, ವಾಣಿಜ್ಯ ತೆರಿಗೆ ಮೂಲದಿಂದ 6 ತಿಂಗಳಲ್ಲಿ ಒಟ್ಟು 30,274 ಕೋಟಿ ರೂ. ಸಂಗ್ರಹವಾಗಿದೆ. ಸದಾ ಏರುಮುಖವಾಗಿಯೇ ಇರುತ್ತಿದ್ದ ವಾಣಿಜ್ಯ ತೆರಿಗೆ ಆದಾಯ ಸಂಗ್ರಹಕ್ಕೆ ಪ್ರಸಕ್ತ ವರ್ಷದ ಆರಂಭದಲ್ಲೇ ಕೋವಿಡ್‌- 19ರ ಬಿಸಿ ತೀವ್ರವಾಗಿಯೇ ತಟ್ಟಿತ್ತು. ಕಳೆದ ಏಪ್ರಿಲ್‌ನಲ್ಲಿ 3,566ಕೋಟಿ ರೂ., ಮೇ ತಿಂಗಳಲ್ಲಿ 2,667 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದ್ದು,ಆತಂಕಮೂಡಿಸಿತ್ತು. ಆದರೆ ಇದೀಗ ಚೇತರಿಕೆ ಕಾಣುತ್ತಿದೆ.

2019ರ ಸೆಪ್ಟೆಂಬರ್‌ನಲ್ಲಿ 4799.74 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿತ್ತು. ಆದರೆ ಆರ್ಥಿಕ ಸಂಕಷ್ಟದ ನಡುವೆಯೂ ಕಳೆದ ಸೆಪ್ಟೆಂಬರ್‌ನಲ್ಲಿ 4854.24 ಕೋಟಿ ರೂ. ಸಂಗ್ರಹವಾಗಿರುವುದು ಆರ್ಥಿಕ ಇಲಾಖೆ ಅಧಿಕಾರಿಗಳಲ್ಲಿ ತುಸು ಸಮಾಧಾನ ಮೂಡಿಸಿದೆ. ಪೆಟ್ರೋಲ್‌, ಡೀಸೆಲ್‌ ಮಾರಾಟದ ಮೇಲೆ ವಿಧಿಸುವ ಮಾರಾಟ ತೆರಿಗೆಯಿಂದ 1301 ಕೋಟಿ ರೂ. ಸಂಗ್ರಹವಾಗಿದ್ದು, ಒಟ್ಟಾರೆ ವಾಣಿಜ್ಯ ತೆರಿಗೆ ಆದಾಯ ಸಂಗ್ರಹ ನಿರೀಕ್ಷೆ ಹುಟ್ಟಿಸುವಂತಿದೆ.

ಅಬಕಾರಿ ತೆರಿಗೆ ಏರುಮುಖ: ಮತ್ತೂಂದು ಪ್ರಮುಖ ರಾಜಸ್ವ ಮೂಲವಾಗಿರುವ ಅಬಕಾರಿ ತೆರಿಗೆ ಆದಾಯ ಸಂಗ್ರಹವೂ ಕ್ರಮೇಣ ಏರುಮುಖವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಉತ್ತಮ ಕೊಡುಗೆ ನೀಡಲಾರಂಭಿಸಿದೆ. ಸೆಪೆ rಂಬರ್‌ನಲ್ಲಿ 1936 ಕೋಟಿರೂ. ತೆರಿಗೆ ಆದಾಯ ಸಂಗ್ರಹವಾಗಿದ್ದು, 2019ರ ಸೆಪ್ಟೆಂಬರ್‌ನ ಆದಾಯಕ್ಕೆ ಹೋಲಿಸಿದರೆ 187 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹವಾಗಿದೆ. ಏಪ್ರಿಲ್‌ತಿಂಗಳಲ್ಲಿ ವಹಿವಾಟು ಸಂಪೂರ್ಣ ಸ್ಥಗಿತಗೊಂಡು ಮಾಸಿಕ ತೆರಿಗೆ ಆದಾಯ ಶೂನ್ಯಕ್ಕೆ ಕುಸಿದಿತ್ತು.ಜೂನ್‌ ನಿಂದ ಹಂತ ಹಂತವಾಗಿ ಅಬಕಾರಿ ತೆರಿಗೆ ಆದಾಯ ಹೆಚ್ಚಾಗುತ್ತಿದ್ದು, ಸೆಪ್ಟೆಂಬರ್‌ ಅಂತ್ಯಕ್ಕೆ ಒಟ್ಟು 9518 ಕೋಟಿರೂ. ಸಂಗ್ರಹವಾಗಿದೆ.ಕಳೆದ ವರ್ಷ ಸೆಪ್ಟೆಂಬರ್‌ ಅಂತ್ಯಕ್ಕೆ10,880 ಕೋಟಿ ರೂ. ಸಂಗ್ರಹವಾಗಿತ್ತು.

ಇನ್ನಷ್ಟೇ ಚೇತರಿಕೆ ನಿರೀಕ್ಷೆ: ಮುದ್ರಾಂಕ ಮತ್ತು ನೋಂದಣಿ ಶುಲ್ಕ ಹಾಗೂ ಸಾರಿಗೆ ತೆರಿಗೆ ಮೂಲದಿಂದ ಆದಾಯ ಸಂಗ್ರಹ ನಿರೀಕ್ಷಿತಪ್ರಮಾಣದಲ್ಲಿ ಚೇತರಿಕೆಕಾಣುತ್ತಿಲ್ಲ. ಮುದ್ರಾಂಕ ಮತ್ತು ನೋಂದಣಿ ಶುಲ್ಕ ಮೂಲದಿಂದ ಸೆಪ್ಟೆಂಬರ್‌ನಲ್ಲಿ 696.35 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ವರ್ಷದ ಸೆಪ್ಟೆಂಬರ್‌ಗೆ ಹೋಲಿಸಿದರೆ 181 ಕೋಟಿ ರೂ. ಆದಾಯ ಇಳಿಕೆಯಾಗಿದೆ. 2019ರಲ್ಲಿ ಎರಡನೇ ತ್ತೈಮಾಸಿಕ ಅಂತ್ಯಕ್ಕೆ 5530 ಕೋಟಿ ರೂ. ಸಂಗ್ರಹವಾಗಿದ್ದು, ಈ ಬಾರಿ ಇದೇ ಅವಧಿಯಲ್ಲಿ ಕೇವಲ 3562.94ಕೋಟಿ ರೂ. ಸಂಗ್ರಹವಾಗಿದೆ. ಮೋಟಾರು ವಾಹನ ತೆರಿಗೆ ಬಾಬ್ತಿಯಿಂದ ಮೊದಲಿಗೆ 7115 ಕೋಟಿ ರೂ. ಆದಾಯ ಗುರಿಯಿದ್ದರೂ ನಂತರ ಪರಿಷ್ಕರಿಸಿ 6616 ಕೋಟಿ ರೂ.ಗೆ ನಿಗದಿಪಡಿಸಲಾಗಿದೆ. ಆದರೆ ಈವರೆಗೆ ಸಂಗ್ರಹವಾಗಿರುವುದು 1845 ಕೋಟಿ ರೂ. ಮಾತ್ರ. ಸೆಪ್ಟೆಂಬರ್‌ ತಿಂಗಳಲ್ಲಿ 478 ಕೋಟಿ ರೂ. ಮೋಟಾರು ವಾಹನ ತೆರಿಗೆ ಮೂಲದಿಂದ ಸಂಗ್ರಹವಾಗಿದೆ. ಸಾರಿಗೆ ಹಾಗೂ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಮೂಲದ ಆದಾಯ ಇನ್ನಷ್ಟೇ ಚೇತರಿಕೆ ಕಾಣಬೇಕಿದೆ.

6 ತಿಂಗಳಲ್ಲಿ ಶೇ. 36ರಷ್ಟು ತೆರಿಗೆ ಸಂಗ್ರಹ: ಒಟ್ಟಾರೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅರ್ಧ ಅವಧಿ ಕಳೆದರೂ ವಾರ್ಷಿಕ ತೆರಿಗೆ ಸಂಗ್ರಹ ಈವರೆಗಿನ ಗುರಿ ಸಾಧನೆ ಶೇ. 36 ಮಾತ್ರ. ಕೋವಿಡ್‌- 19, ಲಾಕ್‌ಡೌನ್‌, ಪ್ರವಾಹ ಇತರೆ ಕಾರಣಕ್ಕೆ ರಾಜ್ಯ ಸರ್ಕಾರದ ಸ್ವಂತ ತೆರಿಗೆ ಮೂಲದ ಆದಾಯ ಸಂಗ್ರಹದಲ್ಲಿ ಭಾರೀ ಖೋತಾ ಆಗಿದೆ. 2020-21ನೇ ಸಾಲಿನಲ್ಲಿ ನಾಲ್ಕೂ ಪ್ರಮುಖ ತೆರಿಗೆ ಮೂಲಗಳಿಂದ 1.24 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ ಗುರಿಯಿದ್ದು, ಆರು ತಿಂಗಳಲ್ಲಿ ಸಂಗ್ರಹವಾಗಿರುವುದು ಕೇವಲ 45,000ಕೋಟಿ ರೂ. ಇನ್ನುಳಿದ ಆರು ತಿಂಗಳಲ್ಲಿ ಸುಮಾರು 80,000 ಕೋಟಿ ರೂ. ತೆರಿಗೆ ಸಂಗ್ರಹವಾಗ ಬೇಕಿದ್ದು, ಗುರಿ ತಲುಪುವುದುಕಷ್ಟಸಾಧ್ಯವೆನಿಸಿದೆ.

 

ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.