ಕನ್ನಡಿಗರಿಗೆ ಉದ್ಯೋಗ ಭದ್ರತೆ ಕಲ್ಪಿಸಲು ಬದ್ಧ
Team Udayavani, Nov 2, 2019, 9:32 AM IST
ಬೆಂಗಳೂರು: ಕನ್ನಡಗರಿಗೆ ಉದ್ಯೋಗ ಭದ್ರತೆ ಕಲ್ಪಿಸುವ ಮತ್ತು ಸರೋಜಿನಿ ಮಹಿಷಿ ವರದಿಯನ್ನು ಅಗತ್ಯ ತಿದ್ದುಪಡಿಗಳೊಂದಿಗೆ ಶೀಘ್ರವಾಗಿ ಜಾರಿ ಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅಖೀಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ನಗರದ ಬನ್ನಪ್ಪ ಪಾರ್ಕ್ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಸಂಬಂಧಪಟ್ಟವಿಷಯಗಳಲ್ಲಿ ರಾಜಿಯಿಲ್ಲದೆ ಕನ್ನಡ ಪರ ಶ್ರಮಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಕನ್ನಡ ಪರ ಹೋರಾಟಗಾರರ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಲಿದ್ದು, ಹೋರಾಟಗಾರರಿಗೆ ಸಹಕಾರ ನೀಡಲಿದೆ. ಕನ್ನಡವನ್ನು ಸಂಪೂರ್ಣವಾಗಿ ಸರ್ಕಾರಿ ಕಚೇರಿಗಳ ಆಡಳಿತ ಭಾಷೆಯಾಗಿಸಲಾಗುವುದು ಎಂದು ಭರವಸೆ ನೀಡಿದರು. ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರು ದೇವ ನಾರಾಯಣಕುಮಾರ್ ಮಾತನಾಡಿ, ರಾಜಧಾನಿಯಲ್ಲಿ ಕನ್ನಡ ಅಲ್ಪಸಂಖ್ಯಾತ ಭಾಷೆಯಾಗಿದೆ. ಕನ್ನಡ ಉಳಿವಿಗಾಗಿ ಹಲವಾರು ಕಾನೂನುಗಳನ್ನು ಜಾರಿ ಮಾಡುವುದು ಅನಿವಾರ್ಯ. ರಾಜ್ಯದ ಎಲ್ಲಾ ಖಾಸಗಿ ಶಾಲಾ ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ಆಚರಿಸವುದು ಕಡ್ಡಾಯ ಗೊಳಿಸಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಹಲವು ಕನ್ನಡಪರ ಹೋರಾಟಗಾರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ