165 ವಾರ್ಡ್‌ಗಳಲ್ಲಿ ಕಮಿಟಿ ಸಭೆ

ನಾಗರಿಕರೊಂದಿಗೆ ಮುಕ್ತರಾದ ಆಯುಕ್ತರು, ಆಡಳಿತಾಧಿಕಾರಿ

Team Udayavani, Oct 4, 2020, 12:07 PM IST

165 ವಾರ್ಡ್‌ಗಳಲ್ಲಿ ಕಮಿಟಿ ಸಭೆ

ಬೆಂಗಳೂರು: ಪಾಲಿಕೆ ಸದಸ್ಯರ ಅಧಿಕಾರ ಅವಧಿ ಮುಕ್ತಾಯದ ಬೆನ್ನಲ್ಲೆ ಪಾಲಿಕೆಯ ಅಧಿಕಾರಿಗಳನ್ನುನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಿದ್ದು, ಇದೇ  ಮೊದಲ ಬಾರಿ ಶನಿವಾರ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಸೇರಿದಂತೆ ಪಾಲಿಕೆಯ 165ಅಧಿಕಾರಿಗಳು 165 ವಾರ್ಡ್‌ಗಳಲ್ಲಿ ವಾರ್ಡ್‌ ಕಮಿಟಿ ಸಭೆ ನಡೆಸಿದರು.

ಆಯುಕ್ತರೂ ವಸಂತನಗರ ನೋಡಲ್‌ ಅಧಿಕಾರಿಗಳಾಗಿ ನೇಮಕವಾಗಿದ್ದು, ಜನರೊಂದಿಗೆ ಮಾತುಕತೆ ನಡೆಸಿದರು. ಆಡಳಿತಾಧಿಕಾರಿ ಗೌರವ್‌ ಗುಪ್ತಾ ನಾಗರಿಕರ ಜತೆ ಮುಕ್ತವಾಗಿ ಮಾತನಾಡಿದರುಬಳಿಕ ಮಾತನಾಡಿ, ಬಿಬಿಎಂಪಿ ವಾರ್ಡ್‌ಗಳಿಗೆ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಿದ ಬಳಿಕ ಶನಿವಾರ ಮೊದಲ ವಾರ್ಡ್‌ ಕಮಿಟಿ ಸಭೆ ನಡೆಸಲಾಗಿದೆ. 198 ವಾರ್ಡ್‌ ಪೈಕಿ 165 ವಾರ್ಡ್‌ಗಳಲ್ಲಿ ವಾರ್ಡ್‌ ಕಮಿಟಿ ಸಭೆ ನಡೆದಿದೆ ಎಂದು ಆಯುಕ್ತರು ತಿಳಿಸಿದರು.

ತಿಂಗಳ ಮೊದಲ ಮತ್ತು ಮೂರನೇ ಶನಿವಾರ ವಾರ್ಡ್‌ ಸಮಿತಿ ಸಭೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಶನಿವಾರ165 ವಾರ್ಡ್‌ಗಳಲ್ಲಿ ಮೊದಲ ವಾರ್ಡ್‌ ಸಮಿತಿ ಸಭೆ ನಡೆಸಲಾಗಿದೆ. ಉಳಿದ 33 ವಾರ್ಡ್‌ಗಳಲ್ಲಿ ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು,ಸ್ಥಳೀಯರು ಮತ್ತೂಂದು ದಿನ ಸಭೆನಡೆಸುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಭೆ ನಡೆದಿಲ್ಲ ಎಂದು ಮಾಹಿತಿ ನೀಡಿದರು.

ಸಮಸ್ಯೆ ತ್ವರಿತವಾಗಿ ನಿವಾರಿಸಿ: ವಾರ್ಡ್‌ಗಳಲ್ಲಿ ಇರುವ ಸಮಸ್ಯೆಗಳನ್ನು ನಿಗದಿತ ಸಮಯದಲ್ಲಿ ನಿವಾರಣೆ ಮಾಡಲು ಸಮರ್ಪಕ ಯೋಜನೆ ರೂಪಿಸಬೇಕು ಎಂದು ಆಡಳಿತಾಧಿಕಾರಿ ಗೌರವ್‌ ಗುಪ್ತ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಲಸೂರುವಾರ್ಡ್‌ನಲ್ಲಿ ನಡೆದ ವಾರ್ಡ್‌ ಸಮಿತಿ ಸಭೆಯಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಸ್ಥಳೀಯ ಮಟ್ಟದ ಚಿಕ್ಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಹಲಸೂರು ಕೆರೆ, ಅಂಗಳ ಸ್ವಚ್ಛ ಹಾಗೂ ಸುಂದವಾಗಿರುವಂತೆ ಕ್ರಮ ವಹಿಸಬೇಕು. ಬೀದಿ ದೀಪ, ಸೂಕ್ಷ ಪ್ರದೇಶಗಳಿಗೆ ಸಿಸಿ ಕ್ಯಾಮೆರಾ, ಅನಧಿಕೃತವಾಹನ ತೆರವು ಸೇರಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ವಾರ್ಡ್‌ ವ್ಯಾಪ್ತಿಯಲ್ಲಿರುವ34 ಬೂತ್‌ ಮಟ್ಟದಲ್ಲಿ ಆಸ್ತಕ್ತಿಯುಳ್ಳ ವಿದ್ಯಾರ್ಥಿಗಳನ್ನು ಸ್ವಯಂಸೇವಕಾರಾಗಿ ನಿಯೋಜನೆ ಮಾಡಿಕೊಂಡರೆ ಇನ್ನೂ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಹಕಾರಿಯಾಗಲಿದೆ ಎಂದು ಕ್ಷೇಮಾಭಿವೃದ್ಧಿ ಸಂಘಗಳಿಗೆ ಸಲಹೆ ನೀಡಿದರು.

ನೋಡಲ್‌ ಅಧಿಕಾರಿ ಸರ್ಫರಾಜ್‌ ಖಾನ್‌ ಮಾತನಾಡಿ,ಹಲಸೂರುವಾರ್ಡ್‌ರಸ್ತೆಬದಿನಿಲ್ಲಿಸಿರುವ ವಾಹನಗಳನ್ನು ಪೊಲೀಸ್‌ ಅಧಿಕಾರಿಗಳ ಜೊತೆ ಚರ್ಚಿಸಿ ಬಿಂಗೀಪುರಭೂರ್ಭತಿಗೆಸ್ಥಳಾಂತರಮಾಡಲಾಗುವುದು. ಹಲಸೂರು ಕರೆಯನ್ನು ಸ್ವಚ್ಛಗೊಳಿಸಲಾಗುವುದು ಎಂದು ಹೇಳಿದರು.

ಸ್ವಿಚ್‌ ಹಾಳು ಮಾಡಲಾಗುತ್ತಿದೆ: ಸಭೆ ವೇಳೆ ಸಾರ್ವಜನಿಕರೊಬ್ಬರು ಬೀದಿ ದೀಪಗಳ ಸ್ವಿಚ್‌ಗಳನ್ನು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ ಎಂದರು. ಆಡಳಿತಾಧಿಕಾರಿ ಪ್ರತಿಕ್ರಿಯಿಸಿ, ರಾತ್ರಿ ಗಸ್ತು ತಿರುಗುವ ವೇಳೆ ಅಂತಹ ಪ್ರಕರಣಗಳು ಕಂಡುಬಂದರೆ ಸೂಕ್ತ ಕ್ರಮವಹಿಸಿ ಎಂದು ಮಾರ್ಷಲ್‌ಗ‌ಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಶಾಸಕ ರಿಜ್ವಾನ್‌ ಅರ್ಷದ್‌, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಎರಡೂ ವಾರ್ಡ್‌ಗಳಲ್ಲಿ ಕೇಳಿ ಬಂದ ದೂರುಗಳು :  ವಾರ್ಡ್‌ ಸಮಿತಿ ಸಭೆಯಲ್ಲಿ ಬ್ಲಾಕ್‌ ಸ್ಪಾಟ್‌ ಸಮಸ್ಯೆ, ರಸ್ತೆ ಗುಂಡಿ ಕಾಮಗಾರಿ ವಿಳಂಬ, ಅನಧಿಕೃತಕಟ್ಟಡ ನಿರ್ಮಾಣ, ವಸತಿ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆ ನಡೆಸುತ್ತಿರುವ ಆರೋಪಕೇಳಿಬಂದವು. ಆಡಳಿತಾಧಿಕಾರಿ ಹಾಗೂ ಆಯುಕ್ತರು ಮುಂದಿನ ಸಭೆ ಒಳಗೆ ಪರಿಹಾರಕ್ಕೆ ಸೂಚಿಸಿದರು. ವಾರ್ಡ್‌ ಸಮಿತಿ ಸದಸ್ಯರು, ವಾರ್ಡ್‌ನ ಗುತ್ತಿಗೆದಾರರು, ಅಧಿಕಾರಿಗಳನ್ನು ಒಳಗೊಂಡ ವಾಟ್ಸ್‌ ಆ್ಯಪ್‌ ಗ್ರೂಪ್‌ ರಚನೆ ಮಾಡಿಕೊಳ್ಳುವಂತೆ ಸೂಚಿಸಿದರು. ಈ ಗ್ರೂಪ್‌ನಲ್ಲಿ ಬರುವ ದೂರುಗಳನ್ನು ತಕ್ಷಣ ಪರಿಹಾರ ಮಾಡುವಂತೆ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.