ನಿತ್ಯ 10 ಸಾವಿರ ಸೋಂಕು ಪರೀಕ್ಷೆಗೆ ಸಮಿತಿ ಸಲಹೆ


Team Udayavani, Jul 22, 2020, 6:56 AM IST

ನಿತ್ಯ 10 ಸಾವಿರ ಸೋಂಕು ಪರೀಕ್ಷೆಗೆ ಸಮಿತಿ ಸಲಹೆ

ಬೆಂಗಳೂರು: ನಗರದಲ್ಲಿ ನಿತ್ಯ ಕನಿಷ್ಠ 10ಸಾವಿರ ಜನರಿಗೆ ಕೋವಿಡ್ ಸೋಂಕು ಪರೀಕ್ಷೆ ಮಾಡುವಂತೆ ಬಿಬಿಎಂಪಿ ಕೋವಿಡ್‌ ಕಾರ್ಯಪಡೆ ಸಲಹೆ ನೀಡಿದೆ ಎಂದು ಬಿಬಿ  ಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್‌ ಕಾರ್ಯಪಡೆ ಮಾದರಿಯಲ್ಲೇ ಬೆಂಗಳೂರಿಗೆ ಬಿಬಿಎಂಪಿ ಕೋವಿಡ್‌ ಕಾರ್ಯಪಡೆಯನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಹಾಗೂ ಮೇಯರ್‌ ಎಂ.ಗೌತಮ್‌ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಕಾರ್ಯ  ಪಡೆಯ ಮೊದಲ ಸಭೆ ಮಂಗಳವಾರ ನಡೆದಿದೆ. ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಆಯುಕ್ತರು, ನಗರದಲ್ಲಿ ಕನಿಷ್ಠ 10 ಸಾವಿರ ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸುವಂತೆ ಹಾಗೂ ವ್ಯಾಪಕವಾಗಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದ್ದಾರೆ. ಇದರಿಂದ ಸಾರ್ವಜನಿಕ ಭೀತಿ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಿ ಧನಾತ್ಮಕ ಚಿಂತನೆ ಮೂಡಿಸುವಂತೆ ಸಲಹೆ ನೀಡಲಾಗಿದೆ ಎಂದರು.

ಇನ್ನು ಖಾಸಗಿ ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಿದ ಸೋಂಕಿನ ವರದಿಯನ್ನು ತ್ವರಿತವಾಗಿ ಐಸಿಎಂಆರ್‌ ಪೋಟಲ್‌ಗೆ ಅಪ್‌ಡೇಟ್‌ ಮಾಡುವಂತೆ ತಿಳಿಸಿದ್ದಾರೆ. ಸೋಂಕಿತರು ಪತ್ತೆಯಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು, ಸಂಪರ್ಕಿತರ ಕ್ವಾರಂಟೈನ್‌ ಮಾಡಲು, ಸ್ವಾಬ್‌ ಸಂಗ್ರಹಿಸುವುದಕ್ಕೆ ಸಿಬ್ಬಂದಿ ಕೊರತೆ ಸರಿಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಇದರಂತೆ ಪ್ರತಿ ವಾರ್ಡ್‌ ಗೆ 25 ಸಿಬ್ಬಂದಿಯ ಅವಶ್ಯಕತೆ ಇದೆ. ಈ ಮೂಲಕ ಸದ್ಯ ಬಿಬಿಎಂಪಿಗೆ 4,500 ಮಂದಿ ಸಿಬ್ಬಂದಿ ತ್ವರಿತವಾಗಿ ಬೇಕಾಗಿದೆ. ಹೀಗಾಗಿ, ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮಂಡಳಿಯಿಂದ ಸಿಬ್ಬಂದಿ ಪಡೆಯಬೇಕು, ಪದವಿ ಮುಗಿಸದ (ಅಂತಿಮ ವರ್ಷದ) ವಿದ್ಯಾರ್ಥಿಗಳು ನೇಮಕ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. ನಗರದಲ್ಲಿ ಖಾಸಗಿ ಲ್ಯಾಬ್‌ ಗಳಲ್ಲಿ ಕೋವಿಡ್ ಸೋಂಕಿತರ ಪರೀಕ್ಷೆ ಮಾಡಿದ ವರದಿಗಳನ್ನು ತ್ವರಿತವಾಗಿ ಐಸಿಎಂಆರ್‌ ಪೋರ್ಟಲ್‌ಗೆ ಅಪ್‌ ಡೇಟ್‌ ಮಾಡುವಂತೆ ಸೂಚಿಸಿದ್ದು, ಈ ಅಂಶಗಳ ಮೇಲೆ ಯೋಜನೆ ರೂಪಿಸಲಾಗುವುದು ಎಂದರು.

ಸ್ವಯಂ ಹೋಂ ಕ್ವಾರಂಟೈನ್‌ಗೆ :  ಕೋವಿಡ್ ಸೋಂಕಿನ ಲಕ್ಷಣಗಳು ಐದನೇ ದಿನ ಕಾಣಿಸಿಕೊಳ್ಳುತ್ತದೆ. ನಾಲ್ಕನೇ ದಿನ ಸೋಂಕು ಪರೀಕ್ಷೆಗೆ ಒಳಪಟ್ಟರೆ ಸೋಂಕು ದೃಢಪಡುವುದಿಲ್ಲ.ಇದಾದ ಮೇಲೆ ಮತ್ತೂಮ್ಮೆ ಸೋಂಕು ಪರೀಕ್ಷೆಗೆ ಒಳಪಡುವ ವೇಳೆಗೆ ಸೋಂಕಿತರು ಇತರರಿಗೂ ಸೋಂಕು ಹಬ್ಬಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ, ಸೋಂಕು ಪರೀಕ್ಷೆ ವರದಿ ಬರುವವರೆಗೆ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿರುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಸೋಂಕು ಪರೀಕ್ಷೆ ವರದಿ ಬರುವವರೆಗೆ ಹೋಂಕ್ವಾರಂಟೈನ್‌ ಆಗಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.