ಜಾಗತೀಕರಣದಿಂದ ಸಂಕಷ್ಟದಲ್ಲಿ ಸಮುದಾಯ
Team Udayavani, Dec 28, 2017, 12:04 PM IST
ಕೆಂಗೇರಿ: ವ್ಯಾಪಾರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಆರ್ಯವೈಶ್ಯ ಸಮುದಾಯ ಇಂದು ಜಾಗತೀಕರಣ, ಉದಾರೀಕರಣದ ಪ್ರಭಾವದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಜೀವನ ಉತ್ತಮವಾಗಲು ಮೀಸಲಾತಿ ಅಗತ್ಯವಿದೆ ಎಂದು ವಿಧಾನ ಪರಿಷತ್ತು ಸದಸ್ಯ ಹಾಗೂ ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ರಾಜ್ಯಾಧ್ಯಕ್ಷ ಟಿ.ಎ.ಶರವಣ ಅಭಿಪ್ರಾಯಪಟ್ಟರು. ಆರ್ಯವೈಶ್ಯ ಮಂಡಳಿಯಿಂದ ಗಂಗೊಂಡನಹಳ್ಳಿಯ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತ ನಾಡಿದರು.
ಫೆ.18ರಂದು ಜಾಗೃತಿ ಸಮಾವೇಶ: ಆರ್ಯವೈಶ್ಯ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಫೆ.18 ರಂದು ಅರಮನೆ ಮೈದಾನದಲ್ಲಿ ಆರ್ಯವೈಶ್ಯ ಸಮುದಾಯದ ಹಕ್ಕುಗಳಿಗಾಗಿ ಒತ್ತಾಯಿಸಿ ಬೃಹತ್ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದ ಮೂಲಕ ಸರ್ಕಾರಕ್ಕೆ ವಸ್ತುಸ್ಥಿತಿ ಹಾಗೂ ವಾಸ್ತವದ ಅರಿವು ಮೂಡಿಸಲಾಗುತ್ತದೆ ಎಂದು ಶರವಣ ತಿಳಿಸಿದರು.
ಕರ್ನಾಟಕ ಆರ್ಯವೈಶ್ಯ ಮಹಾ ಮಂಡಳಿ ಉಪಾಧ್ಯಕ್ಷ ಆದಿಶೇಷಯ್ಯ, ಸಂಘಟನಾ ಕಾರ್ಯದರ್ಶಿ ಡಿ.ಡಿ. ಪ್ರಹ್ಲಾದ್, ವಕ್ತಾರ ಕೆ.ವಿ.ಆದಿಶೇಷಯ್ಯ, ಮುಖಂಡರಾದ ವೇಣುಗೋಪಾಲ್, ಅಮರ್ನಾಥ್, ಸಿ.ರತ್ನಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ