ಆರ್ಟಿಇ ಕಾಯ್ದೆ ಉಲ್ಲಂಘನೆ ಬಗ್ಗೆ ದೂರು
Team Udayavani, May 29, 2018, 2:31 PM IST
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ದೂರುಗಳು ದಾಖಲಾಗುತ್ತಿವೆ.
ಆರ್ಟಿಇ ಸಂಬಂಧಿಸಿದ ಎರಡರಿಂದ ಮೂರು ದೂರುಗಳು ಪ್ರತಿ ದಿನ ಆಯೋಗದಲ್ಲಿ ದಾಖಲಾಗುತ್ತಿದ್ದು, ಮೊದಲ ಸುತ್ತಿನಲ್ಲಿ ಸೀಟು ಪಡೆದ ಮಕ್ಕಳನ್ನು ಸೇರಿಸಿಕೊಳ್ಳದಿರುವುದು ಹಾಗೂ ಕೆಲವೊಂದು ಶಾಲೆಗಳು ಒಂದೇ ಒಂದು ಮಗುವನ್ನು ದಾಖಲಿಸಿಕೊಳ್ಳದ ಬಗ್ಗೆ ಅನೇಕ ದೂರುಗಳು ಬಂದಿವೆ.
ನಗರದ ಪ್ರತಿಷ್ಠಿತ ಶಾಲೆಯೊಂದು ಎಂಟು ಮಕ್ಕಳಿಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ಹಂಚಿಕೆಯಾದ ಸೀಟು ನಿರಾಕರಿಸಿದೆ. ಈ ಸಂಬಂಧ ಮೂವರು ಮಕ್ಕಳ ಪೋಷಕರು ಆಯೋಗಕ್ಕೆ ದೂರು ನೀಡಿದ್ದಾರೆ. ಆಯೋಗದಿಂದ ದೂರಿನ ವಿಚಾರಣೆ ನಡೆಸಿ, ಶಾಲೆ ಮಾನ್ಯತೆ ರದ್ದು ಮಾಡುವ ಕುರಿತು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರು, ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧ್ಯಕ್ಷರ ಜತೆ ಮಾತನಾಡಿದ್ದಾರೆ ಎನ್ನಲಾಗಿದೆ.
ಶಾಲಾ ಶುಲ್ಕವನ್ನು ನಗದು ಮೂಲಕ ನೀಡಲು ಒಪ್ಪದ ಪಾಲಕರ ಮಗುವಿಗೆ ವರ್ಗಾವಣೆ ಪತ್ರ ನೀಡಲು ಶಾಲೆಯೊಂದು ಮುಂದಾಗಿತ್ತು. ಈ ಸಂಬಂಧ ನೀಡಿದ ದೂರಿನಂತೆ ವಿಚಾರಣೆ ನಡೆಸಿ, ಇತ್ಯರ್ಥಪಡಿಸಿದ್ದೇವೆ. ಇಂತಹ ಅನೇಕ ದೂರುಗಳು ಆಯೋಗಕ್ಕೆ ಬಂದಿವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷೆ ಡಾ.ಕೃಪಾ ಅಮರ್ ಆಳ್ವ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ