ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದ್ದಕ್ಕೆ ಅಭಿನಂದನೆ
Team Udayavani, Nov 29, 2018, 6:30 AM IST
ಬೆಂಗಳೂರು: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟು ಕಟ್ಟಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಅನೇಕ ಭಾಗಗಳಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರ ಕೋಲಾರ ಭಾಗದ ಜನತೆಗೆ ಸಮಾಧಾನ ತಂದಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಹಿಂದೆ ಒಪ್ಪಂದಕ್ಕೆ ಸಹಿ ಮಾಡಿತ್ತು. ಈಗ ವಿರೋಧ ಮಾಡುತ್ತಿದೆ. ರಾಜ್ಯದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕ್ರಿಯಾಶೀಲರಾಗಿದ್ದಾರೆ. ಆದಷ್ಟು ಬೇಗ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಯೋಜನೆ ಆರಂಭಿಸಬೇಕು ಎಂದು ಹೇಳಿದರು.
ಬೆಳಗಾವಿಯ ಚಳಿಗಾಲದ ಅಧಿವೇಶದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆಹಾರದ ಬಗ್ಗೆ ಕಳೆದ ಬಾರಿ ಸಾಕಷ್ಟು ದೂರುಗಳು ಬಂದಿದ್ದು, ಈ ವರ್ಷ ಯಾವುದೇ ದೂರುಗಳು ಬಾರದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಮಾಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಪಾಲ್ಗೊಂಡು ಅವರ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಅಧಿವೇಶನದಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ಬೇರೆ ಬೇರೆ ಚರ್ಚೆ ಇಲ್ಲ. ಎಲ್ಲಿಯೇ ಅಧಿವೇಶನ ನಡೆದರೂ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!