ಮಾಜಿ ಶಾಸಕರಿಂದ ಕಾಂಗ್ರೆಸ್ ಉಳಿಸಿ ಅಭಿಯಾನ
Team Udayavani, Dec 19, 2018, 9:33 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ನಾಯಕರಿಂದ ಕಿರುಕುಳ ಆಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ನ ಮಾಜಿ ಶಾಸಕರು ಜನವರಿ 14ರ ನಂತರ ಕಾಂಗ್ರೆಸ್ ಉಳಿಸಿ ಅಭಿಯಾನ ಆರಂಭಿಸಲು ನಿರ್ಧರಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ 2018ರ ಚುನಾವಣೆಯಲ್ಲಿ ಪರಾಭವಗೊಂಡ 15ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ನಾಯಕರಿಂದ ತಮಗೆ ಕಿರುಕುಳ ಆಗುತ್ತಿರುವ ಬಗ್ಗೆ ಸಭೆಯಲ್ಲಿ
ಅಸಮಾಧಾನ ಹೊರ ಹಾಕಿದ್ದಾರೆಂದು ತಿಳಿದು ಬಂದಿದೆ.
ಕಾಂಗ್ರೆಸ್ನ ಮಾಜಿ ಶಾಸಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ರಾಜ್ಯದ ಅನೇಕ ನಾಯಕರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಳಿಸಿ ಅಭಿಯಾನ ನಡೆಸಲು ತೀರ್ಮಾನಿಸಿದ್ದಾರೆ. ಸಭೆ ನಂತರ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ಪಕ್ಷದ ಹಿತ ಹಾಗೂ ಮುಂದಿನ ಚುನಾವಣೆ ದೃಷ್ಟಿಯಿಂದ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು. ಸಭೆಯಲ್ಲಿ ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ನರೇಂದ್ರ ಸ್ವಾಮಿ, ಎಚ್.ಸಿ.ಬಾಲಕೃಷ್ಣ, ವೆಂಕಟೇಶ್, ಎಂ.ಡಿ. ಲಕ್ಷ್ಮೀನಾರಾಯಣ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?