ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಕೆ.ಎಚ್ ಮುನಿಯಪ್ಪ
Team Udayavani, Jun 23, 2021, 7:32 AM IST
ಬೆಂಗಳೂರು: ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಮುಖ್ಯಮಂತ್ರಿ ಯಾರು ಆಗಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಡಿ.ಕೆ. ಶಿವಕುಮಾರ್ ಇದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ ಪಿ ನಾಯಕರು. ನೀವು ಮುಖ್ಯಮಂತ್ರಿ ಆಗಿದ್ದವರು ಎಲ್ಲರನ್ನು ನೀವೆ ಒಗ್ಗಟ್ಟನಿಂದ ತೆಗೆದುಕೊಂಡು ಹೋಗಬೇಕು. ಅಧ್ಯಕ್ಷರ ಜೊತೆಗೆ ಕೈ ಜೋಡಿಸಿ ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಕೆಲಸ ಮಾಡಬೇಕು ಎಂದು ನಾನು ಸಿದ್ದರಾಮಯ್ಯ ಅವರಿಗೆ ಸಭೆ ಒಂದರಲ್ಲಿ ತಿಳಿಸಿದ್ದೆ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಲವಾರು ಕೆಲಸ ಮಾಡಿದ್ದಾರೆ. ನಮ್ಮಲ್ಲಿ ಈಗ ಸಿಎಂ ವಿಚಾರ ಅಪ್ರಸ್ತುತ. ಪ್ರಜಾಪ್ರಭುತ್ವದಲ್ಲಿ ನಾವು ಕೆಲವೊಂದು ವಿಚಾರಕ್ಕೆ ತಲೆ ಬಾಗಲೇಬೇಕು. ಸಿದ್ದರಾಮಯ್ಯ ಅವರು ಸಿಎಂ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ. ಕೆಲವರು ಹೀಗೆ ಮಾತಾಡುತ್ತಿದ್ದಾರೆ. ಅದೆಲ್ಲ ಆಗಬಾರದು ಅಂತ ನಾನು ಹೇಳುತ್ತೇನೆ ಎಂದರು.
ಇದನ್ನೂ ಓದಿ: ಟಿಡಿಎಸ್ ಸಲ್ಲಿಸದವರಿಗೆ “ಡಬಲ್ ತೆರಿಗೆ’ ಬರೆ
ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಕೆಲಸ. ಪಕ್ಷ ದೊಡ್ಡದು, ವ್ಯಕ್ತಿ ದೊಡ್ಡವರಲ್ಲ. ಪಕ್ಷದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಮಿಟಿ ಇದೆ. ಯಾರು ಇಷ್ಟ ಬಂದ ಹಾಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವಹಾಗೆ ಇಲ್ಲ. ಪಕ್ಷದಲ್ಲಿ ಎಲ್ಲರಿಗೂ ಪ್ರಾಶಸ್ತ್ಯ ನೀಡಬೇಕು. ಹೈಕಮಾಂಡ್ ಆದೇಶದಮೇಲೆ ನಡೆಯಿರಿ ಎಂದು ಹೇಳಿದ್ದೇನೆ. ಡಿ.ಕೆ. ಶಿವಕುಮಾರ್ ಅವರಿಗೆ ಹಿರಿಯರ ಸಭೆ ಕರೆಯಲು ಹೇಳುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ