ಸಾಂವಿಧಾನಿಕ ಮಾನ್ಯತೆಗೆ ಕಾಂಗ್ರೆಸ್‌ ಅಡ್ಡಿ


Team Udayavani, May 11, 2018, 6:05 AM IST

ModiC.jpg

ಬೆಂಗಳೂರು: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ಸಿಗಬಾರದೆಂಬ ಕಾರಣಕ್ಕೆ ಕಾಂಗ್ರೆಸ್‌ ಸಂಸತ್‌ ಅಧಿವೇಶನ ನಡೆಯಲು ಬಿಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

ಗುರುವಾರ ಪಕ್ಷದ ಎಸ್‌ಸಿ, ಎಸ್ಟಿ, ಒಬಿಸಿ ಮೋರ್ಚಾ ಪದಾಧಿಕಾರಿಗಳೊಂದಿಗೆ ಅವರು ವಿಡಿಯೋ ಸಂವಾದ
ನಡೆಸಿದರು. 

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಉಡುಪಿಯ ಶ್ಯಾಮಲಾ ಕುಂದರ್‌ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸುಮಾರು 20, 30 ವರ್ಷಗಳ ಕಾಲ ಹಿಂದುಳಿದ ವರ್ಗದ ಸಂಸದರು, ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದರೂ ಕಾಂಗ್ರೆಸ್‌, ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವ ಬಗ್ಗೆ ಚಿಂತನೆ ನಡೆಸಿರಲಿಲ್ಲ. ಹಾಗಾಗಿ, ಬಿಜೆಪಿ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಲು ಮುಂದಾಗಿದೆ ಎಂದು ಹೇಳಿದರು.

ವಿಡಿಯೋ ಸಂವಾದದಲ್ಲಿ ಮಾತನಾಡಿದ ಶ್ಯಾಮಲಾ ಕುಂದರ್‌, ಹಿಂದುಳಿದ ವರ್ಗಕ್ಕೆ ಸೇರಿದ ತಾವು
ಪ್ರಧಾನಿಯಾಗಿರುವುದು ಹೆಮ್ಮೆಯ ಸಂಗತಿ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ
ಸಿಗದಂತೆ ಕಾಂಗ್ರೆಸ್‌ ದುಷ್ಕೃತ್ಯ ನಡೆಸಿದ್ದು ಈ ಬಗ್ಗೆ ಏನು ಹೇಳುವಿರಿ ಎಂದು ಪ್ರಶ್ನಿಸಿದರು.

ಮೊದಲಿಗೆ ನಗುತ್ತಲೇ ಮಾತು ಆರಂಭಿಸಿದ ಪ್ರಧಾನಿ, ನೀವು ಉಡುಪಿಯವರು, ನಾನು ದ್ವಾರಕೆಯವನು. ದ್ವಾರಕೆಗೂ, ಉಡುಪಿಗೂ ವಿಶೇಷ ಸಂಬಂಧವಿದೆ. ಸಮಾಜದಲ್ಲಿ ಸಮಾನವಾಗಿ ವಿಕಾಸವಾಗದಿದ್ದರೆ ಹಿಂದುಳಿದ ವರ್ಗಗಳು ಕಡೆಗಣಿಸಲ್ಪಡುತ್ತವೆ. ಹಿಂದುಳಿದ ವರ್ಗಗಳನ್ನು ಮುಂದಕ್ಕೆ ತರಬೇಕಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಪರಿಶಿಷ್ಟ ಜಾತಿ ಯುವ ಮೋರ್ಚಾ ಅಧ್ಯಕ್ಷರಾದ ಬೆಂಗಳೂರಿನ ಡಾ.ಸಂದೀಪ್‌, ದಲಿತರ ಸ್ಥಿತಿಗತಿ ಸುಧಾರಣೆಗೆ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಪ್ರಧಾನಿ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕೆ ಬಿಜೆಪಿ ಕೈಗೊಳ್ಳುವ ಕ್ರಮಗಳ ಬಗ್ಗೆ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿ ವೇತನ, ಸಾಲ ಸೌಲಭ್ಯ, ಆರೋಗ್ಯ ಸೇವೆಗೆ ವಿಶೇಷ ಒತ್ತು ನೀಡಲಾಗಿದೆ. ಸೌಲಭ್ಯ ವಂಚಿತ ಎಲ್ಲರಿಗೂ ಅಗತ್ಯ ಸೌಕರ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಳ್ಳಾರಿಯ ಎಚ್‌.ಹನುಮಂತಪ್ಪ ಪ್ರಶ್ನೆಗೆ ಉತ್ತರಿಸಿದ ಮೋದಿ,ಪರಿಶಿಷ್ಟ ಪಂಗಡ, ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. 
ಬುಡಕಟ್ಟು ಜನರ ಕಲ್ಯಾಣಕ್ಕೆ ಪೂರಕವಾಗಿ ಕೆಲ ಕಾನೂನುಗಳನ್ನು ಸಡಿಲಗೊಳಿಸಲಾಗಿದೆ. ಹಾಗೆಯೇ ಇತ್ತೀಚೆಗೆ ಕೆಲ ಅರ್ಹ ಸಮುದಾಯಗಳನ್ನು ಬುಡಕಟ್ಟು ಸಮುದಾಯಕ್ಕೆ ಸೇರ್ಪಡೆ ಮಾಡಲಾಗಿದೆ ಎಂದರು.

ಬಿಜೆಪಿ ಸ್ಲಂ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುನಿಕೃಷ್ಣ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಗರಗಳು ಹೆಚ್ಚಾದಂತೆ
ಕೊಳೆಗೇರಿಗಳು ಹೆಚ್ಚಾಗುತ್ತಿವೆ. ಕೊಳೆಗೇರಿಗಳ ಒಂದು ಮಗುವೂ ಶಿಕ್ಷಣದಿಂದ ವಂಚಿತವಾಗದಂತೆ ಎಚ್ಚರ
ವಹಿಸಬೇಕು. ಕೊಳೆಗೇರಿ ಜನರಿಗೂ ಮೂಲ ಸೌಕರ್ಯ ಕಲ್ಪಿಸಿ ಆರ್ಥಿಕವಾಗಿ ಸಬಲರನ್ನಾಗಿಸಲು ಅಗತ್ಯ ಕ್ರಮಗಳನ್ನು  ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ದಲಿತರ ಕಲ್ಯಾಣಕ್ಕೆ ಬದ್ಧ
ಇದಕ್ಕೂ ಮೊದಲು ಪ್ರಸ್ತಾವಿಕವಾಗಿ ಮಾತನಾಡಿದ ಪ್ರಧಾನಿ ಮೋದಿ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದವರು ಬಿಜೆಪಿ ಜತೆಗಿದ್ದು, ಈ ಸಮುದಾಯಗಳಿಂದ ಆಯ್ಕೆಯಾದ ಸಂಸದರು ಪಕ್ಷದಲ್ಲಿ ಹೆಚ್ಚಿನ ಸಂಖ್ಯೆ
ಯಲ್ಲಿದ್ದಾರೆ. ಈ ಸಮುದಾಯದ ಜನರನ್ನು ಭೇಟಿ ಮಾಡಿ ಸರ್ಕಾರದ ಯೋಜನೆಗಳನ್ನು ತಿಳಿಸುವಲ್ಲಿ ಮೋರ್ಚಾಗಳ ಪಾತ್ರ ಮಹತ್ವದ್ದಾಗಿದೆ. ದಲಿತರು, ಬಡವರು, ಆದಿವಾಸಿಗಳು, ಶೋಷಿತರು, ಮಹಿಳೆಯರ ಕಲ್ಯಾಣಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಹೇಳಿದರು. 

ಕರ್ನಾಟಕದಲ್ಲಿ ಮಾದಾರ ಚೆನ್ನಯ್ಯ ಪ್ರಾಚೀನ ವಚನಕಾರರಾಗಿದ್ದು, ಸಾಮಾಜಿಕ ಏಕತೆಯ ಸಂದೇಶ ಸಾರಿದರು. ಹಾಗೆಯೇ ಉರಿಲಿಂಗಪೆದ್ದಿ ವಚನಕಾರರು ಸಹ ಸಾಮಾಜಿಕ ಕ್ರಾಂತಿಗೆ ಪ್ರೇರಣೆ ನೀಡಿದರು. ಕಾಂಗ್ರೆಸ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಸಂಪೂರ್ಣ ಕಡೆಗಣಿಸಿದ್ದು, ಅವರಿಗೆ ಗೌರವ ನೀಡಿರುವ ಒಂದು ವಿಚಾರವೂ ಇಲ್ಲ. ಬಿಜೆಪಿಯು ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಾರ ಗೌರವ ನೀಡಿದ್ದು, ಅವರ ಆಶಯದಂತೆ ಸಶಕ್ತ, ಸದೃಢ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.