ಸತೀಶಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್
Team Udayavani, Sep 18, 2018, 6:45 AM IST
ಬೆಳಗಾವಿ: ಕಾಂಗ್ರೆಸ್ ಪಕ್ಷದ ರಾಜ್ಯ ವಿದ್ಯಮಾನಗಳ ಕುರಿತು ಚರ್ಚಿಸಲು ದೆಹಲಿಗೆ ಬರುವಂತೆ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೈಕಮಾಂಡ್ನಿಂದ ಕರೆ ಬಂದಿದೆ.
ಸತೀಶ ಜಾರಕಿಹೊಳಿ ಅವರಿಗೆ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಕರೆ ಮಾಡಿ ಮಂಗಳವಾರ ಅಥವಾ ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಸತೀಶ, ಈ ಭೇಟಿಯಲ್ಲಿ ವಿಶೇಷವೇನೂ ಇಲ್ಲ. ವೇಣುಗೋಪಾಲ ಅವರನ್ನು ಮಾತ್ರ ಭೇಟಿಯಾಗುತ್ತಿಲ್ಲ. ರಾಹುಲ್ ಗಾಂಧಿ ಭೇಟಿ ಆಗುವ ಬಗ್ಗೆ ತೀರ್ಮಾನವಾಗಿಲ್ಲ. ರಾಜ್ಯದ ಸಮಸ್ಯೆ ಇತ್ಯರ್ಥ ಪಡಿಸಲು ದಿನೇಶ್ಗುಂಡೂರಾವ್ ದೆಹಲಿಗೆ ಬರುತ್ತಿದ್ದಾರೆ ಎಂದರು.
ಸಹೋದರ ರಮೇಶ ಜಾರಕಿಹೊಳಿ ಅವರೇ ಸಚಿವರಾಗಿ ಇರುತ್ತಾರೆ. ಸದ್ಯ ಅವರೊಂದಿಗೆ ಮುಖಾಮುಖೀ ಭೇಟಿಯಾಗಿಲ್ಲ. ಫೋನ್ನಲ್ಲಿ ಸಂಭಾಷಣೆ ನಡೆಸಿದ್ದು, ಬೆಂಗಳೂರಿಗೆ ಬಂದು ಚರ್ಚೆ ಮಾಡುವುದಾಗಿ ತಿಳಿಸಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಸಮ್ಮಿಶ್ರ ಸರಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಕೆಲ ಸಮಸ್ಯೆಗಳ ಕುರಿತು ಚರ್ಚೆಗೆ ಸಿದ್ದರಾಮಯ್ಯ ಅವರನ್ನು ರಮೇಶ ಭೇಟಿಯಾಗುತ್ತಿದ್ದಾರೆ. ಈಗಿನವರೆಗಿನ ಎಲ್ಲ ಸಮಸ್ಯೆಗಳೆಲ್ಲವೂ ಮುಗಿದ ಅಧ್ಯಾಯ ಎಂದು ಸತೀಶ ಹೇಳಿದರು. ಬಿಜೆಪಿಯವರು ದುಡ್ಡು ಕೊಟ್ಟಿದ್ದಾರೆಂದು ನಮ್ಮ ಶಾಸಕರು ಎಲ್ಲಿಯೂ ಹೇಳಿಲ್ಲ. 4 ತಿಂಗಳಿನಿಂದಲೂ ಬಿಜೆಪಿಯವರು ನಮ್ಮ ಶಾಸಕರನ್ನು ಕರೆಯುತ್ತಿದ್ದು, ಸಂಪರ್ಕದಲ್ಲಿ ಇದ್ದಾರೆ ಎಂಬುದನ್ನಷ್ಟೇ ಶಾಸಕರು ಹೇಳುತ್ತಿದ್ದಾರೆ. ಈ ವಿಷಯವನ್ನು ಇಲ್ಲಿಗೇ ಮುಗಿಸಿದರೆ ಒಳ್ಳೆಯದು ಎಂದು ಸತೀಶ ಜಾರಕಿಹೊಳಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು
ಬಿಲ್ಡರ್ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್