ಕಾಂಗ್ರೆಸ್-ಜೆಡಿಎಸ್ ಒಂದೇ ಪಕ್ಷ: ಎಚ್.ಡಿ.ರೇವಣ್ಣ
Team Udayavani, Jan 1, 2019, 12:30 AM IST
ಬೆಂಗಳೂರು:ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದೇ ಪಕ್ಷ ಇದ್ದಂತೆ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ನಿಂದ ದಲಿತರಿಗೆ ಸಚಿವಗಿರಿ ಕೊಟ್ಟರೂ ಜೆಡಿಎಸ್ನಿಂದ ಸಚಿವಗಿರಿ ಕೊಟ್ಟರೂ ಒಂದೇ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಜೆಡಿಎಸ್ನಿಂದ ದಲಿತರಿಗೆ ಸಚಿವಗಿರಿ ಕೊಡಲಿ ಎಂಬ ದೇಶಪಾಂಡೆ, ತಿಮ್ಮಾಪುರ ಹೇಳಿಕೆಗೆ ಟಾಂಗ್ ನೀಡಿರುವ ಅವರು, ಎರಡೂ ಪಕ್ಷಗಳು ಒಂದೇ ಆದಾಗ ದಲಿತರಿಗೆ ಯಾರು ಸಚಿವಗಿರಿ ಕೊಟ್ಟರೂ ಒಂದೇ ಅಲ್ಲವೇ ಎಂದರು.ಜೆಡಿಎಸ್ನ ಕೋಟಾದ ಎರಡು ಸಚಿವ ಸ್ಥಾನ ಆದಷ್ಟು ಬೇಗ ತುಂಬಲಾಗುವುದು. ಎಲ್ಲರಿಗೂ ನ್ಯಾಯ ಕೊಡಲಾಗುವುದು ಎಂದು ಹೇಳಿದರು.
ಬಿಜೆಪಿಯವರು ಆರು ತಿಂಗಳಿನಿಂದ ಸಮ್ಮಿಶ್ರ ಸರ್ಕಾರ ಬಿದ್ದು ಹೋಗಿ ನಾವು ಸರ್ಕಾರ ರಚನೆ ಮಾಡಬಹುದು ಎಂದು ಕನಸು ಕಾಣುತ್ತಲೇ ಇದ್ದಾರೆ. ಅವರ ಆಸೆ ಈಡೇರುವುದಿಲ್ಲ ಎಂದು ತಿಳಿಸಿದರು.
ನಾನು ಬೇರೆಯವರು ಖಾತೆಯಲ್ಲಿ ಹಸ್ತಕ್ಷೇಪ ಮಾಡುತ್ತೇನೆ. ಗೃಹ ಖಾತೆ ಬೇರೆಯವರಿಗೆ ಕೊಟ್ಟರೆ ನಾನು ಹಸ್ತಕ್ಷೇಪ ಮಾಡಲು ಆಗಲ್ಲ ಎಂದು ವಿರೋಧ ಮಾಡಿದೆ ಎಂಬೆಲ್ಲಾ ಮಾತುಗಳು ಸತ್ಯಕ್ಕೆ ದೂರ. ನಾನು ಎಂದೂ ಯಾವ ಖಾತೆಯಲ್ಲೂ ಮಧ್ಯಪ್ರವೇಶ ಮಾಡಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಹೇಳಿದರು.
ನಾನು ಎಂದಾದರೂ ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದೆನಾ ಎಂದು ಗೃಹ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ್ ಅವರನ್ನೇ ಬೇಕಾದರೆ ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್