ಹೊಸ ಬಜೆಟ್‌ ಖಚಿತ; ಸಿಎಂ ದೃಢ ನಿರ್ಧಾರ


Team Udayavani, Jun 17, 2018, 6:00 AM IST

new-budget.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್‌ ಮಂಡಿಸುವುದು ಹಾಗೂ ರೈತರ ಸಾಲ ಮನ್ನಾ ವಿಚಾರದಲ್ಲಿ ದೃಢ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ನಾಯಕರ ಭಿನ್ನ ರಾಗ ಹಿನ್ನೆಲೆಯಲ್ಲಿ ನೇರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಒಪ್ಪಿಗೆ ಪಡೆಯಲು ಮುಂದಾಗಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮಂಡಿಸಿದ್ದು ಇದೀಗ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಪಕ್ಷವೂ ಭಾಗಿಯಾಗಿರುವುದರಿಂದ ಮತ್ತೂಂದು ಬಜೆಟ್‌ ಮಂಡಿಸುವುದು ಬೇಡ. ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಸಾಲ ಮನ್ನಾ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂಬುದು ರಾಜ್ಯ ಕಾಂಗ್ರೆಸ್‌ ನಾಯಕರ ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವು. ಇತ್ತೀಚೆಗೆ ನಡೆದ ಸಮನ್ವಯ ಸಮಿತಿಯಲ್ಲೂ ಇದೇ ಪ್ರತಿಪಾದನೆ ಮಾಡಿದ್ದಾರೆ.

ಆದರೆ, ನನ್ನ ನೇತೃತ್ವದ ಸರ್ಕಾರದಲ್ಲಿ ಬಜೆಟ್‌ ಮಂಡಿಸದಿದ್ದರೆ ಅದಕ್ಕೆ ಅರ್ಥವೇ ಇರುವುದಿಲ್ಲ. ಬದಲಾಗಿ ಸಾಲ ಮನ್ನಾ ಸೇರಿದಂತೆ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗಳನ್ನು ಬಜೆಟ್‌ನಲ್ಲೇ ಘೋಷಿಸಬೇಕು ಎಂದು ಎಂಬುದು ಎಚ್‌.ಡಿ.ಕುಮಾರಸ್ವಾಮಿ ವಾದ.

ಸಮ್ಮಿಶ್ರ ಸರ್ಕಾರದ ಆಯುಷ್ಯ ಒಂದು ವರ್ಷ ಎಂಬ ಮಾತುಗಳು ಇವೆ. ಲೋಕಸಭೆ ಚುನಾವಣೆ ನಂತರ ಏನಾಗುವುದೋ ಗೊತ್ತಿಲ್ಲ.  ಡಿಸೆಂಬರ್‌ಗೆ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆಯೂ ಇಲ್ಲದಿಲ್ಲ. ಮುಖ್ಯಮಂತ್ರಿಯಾಗಿ ಹಣಕಾಸು ಸಚಿವನೂ ನಾನೇ ಆಗಿದ್ದೇನೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ನಾನು ಬಜೆಟ್‌ ಮಂಡಿಸಿರಲಿಲ್ಲ. ಹೀಗಾಗಿ,  ಈ ಬಾರಿ ಬಜೆಟ್‌ ಮಂಡಿಸಲೇಬೇಕು. ಸಾಲ ಮನ್ನಾ ಸೇರಿ ಜೆಡಿಎಸ್‌ನ ಪ್ರಣಾಳಿಕೆಯ ಭರವಸೆಗಳು ಬಜೆಟ್‌ನಲ್ಲಿ ದಾಖಲಾಗಬೇಕು ಎಂಬುದು ಕುಮಾರಸ್ವಾಮಿಯವರ ಬಯಕೆ ಎಂದು ಹೇಳಲಾಗಿದೆ.

ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೂಂದು ಬಜೆಟ್‌ನ ಅಗತ್ಯವಿಲ್ಲ ಎಂದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರಿಗೆ ಹೇಳಿದ್ದರು. ಇದನ್ನು ಸಮನ್ವಯ ಸಮಿತಿ ಸಭೆಯಲ್ಲೂ ಪ್ರಸ್ತಾಪಿಸಲಾಗಿತ್ತು. ಮತ್ತೂಂದೆಡೆ ಸಿದ್ದರಾಮಯ್ಯ ಅವರು ಬಹಿರಂಗವಾಗಿಯೂ ಅದನ್ನು ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ರಾಜ್ಯದ ಕಾಂಗ್ರೆಸ್‌ ನಾಯಕರು ಬಜೆಟ್‌ ಮಂಡನೆಗೆ ತಕರಾರು ತೆಗೆದದರೆ ನೇರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರ ಜತೆಯೇ ಮಾತನಾಡಿ ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆಯಲು ನಿರ್ಧರಿಸಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರ ಜತೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಸದ್ಯಕ್ಕೆ ಲೋಕಸಭೆ ಚುನಾವಣೆವರೆಗೂ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿರುವ ಹಾಗೂ ಜೆಡಿಎಸ್‌ ಜತೆಗಿನ ಮೈತ್ರಿಯಿಂದಾಗಿ ರಾಷ್ಟ್ರೀಯ ಮಟ್ಟದಲ್ಲಿ ಎಸ್‌ಪಿ, ಬಿಎಸ್‌ಪಿ, ಟಿಟಿಡಿ, ಟಿಆರ್‌ಎಸ್‌, ಟಿಎಂಸಿ, ಬಿಜೆಡಿ, ಆರ್‌ಜೆಡಿ, ಎಡಪಕ್ಷಗಳಿಗೆ ಹತ್ತಿರವಾಗಿರುವ ಕಾಂಗ್ರೆಸ್‌ ಜೆಡಿಎಸ್‌ನ ಯಾವುದೇ ಮಾತಿಗೂ ನಿರಾಕರಿಸುವ ಸಾಧ್ಯತೆಯೂ ಇಲ್ಲ.

ಅಷ್ಟೇ ಅಲ್ಲದೆ ಸಚಿವ ಸ್ಥಾನ ವಂಚಿತ ಕಾಂಗ್ರೆಸ್‌ ನಾಯಕರು ಅಸಮಾಧಾನಗೊಂಡಾಗ ಖುದ್ದು ರಾಹುಲ್‌ಗಾಂಧಿ ದೂರವಾಣಿ ಕರೆ ಮಾಡಿ ನೀವೂ ಅತೃಪ್ತಿ ನಿವಾರಣೆಗೆ ನಿಮ್ಮದೇ ಆದ ಪ್ರಯತ್ನ ಮಾಡಿ ಎಂದೂ ಹೇಳಿದ್ದರು. ಅಲ್ಲಿಂದ ಕರೆ ಬಂದ ನಂತರವೇ ಕುಮಾರಸ್ವಾಮಿ ಎಂ.ಬಿ.ಪಾಟೀಲ್‌ ಅವರ ನಿವಾಸಕ್ಕೆ ಹೋಗಿದ್ದು. ಸತೀಶ್‌ ಜಾರಕಿಹೊಳಿ ಎಚ್‌.ಡಿ.ಕುಮಾರಸ್ವಾಮಿ ನಿವಾಸಕ್ಕೂ ಬಂದಿದ್ದು. ಅಷ್ಟರ ಮಟ್ಟಿಗೆ ಕುಮಾರಸ್ವಾಮಿ-ರಾಹುಲ್‌ಗಾಂಧಿ ಸ್ನೇಹ ಚಿಗುರೊಡೆದಿದೆ.

ಈ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ನಾಯಕತ್ವ ವಹಿಸಿರುವ ತಮಗೆ ಹೊಸ ಬಜೆಟ್‌ ಮಂಡಿಸಲು ರಾಜ್ಯ ನಾಯಕರು ತಕರಾರು ತೆಗೆದರೆ ನೇರವಾಗಿ ರಾಹುಲ್‌ಗಾಂಧಿ ಜತೆಯೇ ಮಾತನಾಡಿ ಬಜೆಟ್‌ ಮಂಡಿಸಲು ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಬಜೆಟ್‌ ಮಂಡಿಸುವ ಪ್ರಸ್ತಾಪ ಕೈ ಬಿಡಲು ಸಾಧ್ಯವಿಲ್ಲ. ನೀವು ಸಿದ್ಧತೆ ಮಾಡಿಕೊಳ್ಳಿ ಎಂದು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಪನ್ಮೂಲ ಕ್ರೂಢೀಕರಣ ಸಂಬಂಧ ಸೂಕ್ತ ಕಾರ್ಯಯೋಜನೆ ರೂಪಿಸುವಂತೆ  ಆರ್ಥಿಕ ಸಲಹೆಗಾರ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಎಸ್‌.ಸುಬ್ರಹ್ಮಣ್ಯ ಅವರಿಗೂ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಸಾಲ ಮನ್ನಾಗೆ 53 ಸಾವಿರ ಕೋಟಿ ರೂ. ಬೇಕು ಎಂಬ ಅಭಿಪ್ರಾಯ ಮೊದಲು ಇತ್ತಾದರೂ ಅಂಕಿ-ಅಂಶ, ಕೆಲವೊಂದು ಷರತ್ತು ಹಿನ್ನೆಲೆಯಲ್ಲಿ 20 ಸಾವಿರ ಕೋಟಿ ರೂ.ವರೆಗೆ ಹಾಗೂ ಉಳಿದ ಯೋಜನೆಗಳಿಗೆ 10 ರಿಂದ 15 ಸಾವಿರ ಕೋಟಿ ರೂ.ವರೆಗೆ ಹೊರೆ ಬೀಳಬಹುದು.  ಹೀಗಾಗಿ,  ಈಗಿನ ಬಜೆಟ್‌ನ ಗಾತ್ರದಲ್ಲಿ 25 ಸಾವಿರ ಕೋಟಿ ರೂ.ವರೆಗೆ ಹೆಚ್ಚಳವಾಗಬಹುದು. ಅದರಲ್ಲೂ ಬೇರೆ ಬೇರೆ ಇಲಾಖೆಗಳ ಅನಗತ್ಯ ಹಾಗೂ ಐದು ವರ್ಷಗಳಲ್ಲಿ ಜಾರಿ ಮಾಡಲು ಸಾಧ್ಯವಾಗದೇ ಇರುವ ಕಾರ್ಯಕ್ರಮಗಳನ್ನು ಕೈ ಬಿಟ್ಟರೆ ಮತ್ತೂ ಬಜೆಟ್‌ ಗಾತ್ರ ಕಡಿಮೆಯಾಗುತ್ತದೆ ಎಂದು ಆರ್ಥಿಕ ಸಲಹೆಗಾರರು ಕುಮಾರಸ್ವಾಮಿಯವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರಿಗೆ ಈ ಎಲ್ಲ ಅಂಶಗಳನ್ನು ವಿವರಿಸಿ ಅಲ್ಲಿಂದಲೇ ಒಪ್ಪಿಗೆ ಪಡೆದು ರಾಜ್ಯ ನಾಯಕರನ್ನು ಸುಮ್ಮನಾಗಿಸಲು ನಿರ್ಧರಿಸಿದ್ದಾರೆ. ಈ ಮೂಲಕ ರಾಜ್ಯದ ಕಾಂಗ್ರೆಸ್‌ ನಾಯಕರಿಗೂ ನಾನು ನೇರವಾಗಿ ಹೈಕಮಾಂಡ್‌ ಜತೆ ಮಾತನಾಡಬಲ್ಲೆ ಎಂಬ ಸಂದೇಶ ರವಾನಿಸುವುದು ಇದರ ಹಿಂದಿದೆ ಎಂದು ಹೇಳಲಾಗಿದೆ.

ಐದು ಯೋಜನೆಗೆ ಓಕೆ
ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್‌ ಯೋಜನೆ ಮುಂದುವರಿಸಲು ಕುಮಾರಸ್ವಾಮಿ ಸಹ ಒಪ್ಪಿಸಿದ್ದಾರೆ. ಬಸ್‌ ಪಾಸ್‌ ವಿಚಾರದಲ್ಲಿ ಯೋಚಿಸಬೇಕು ಎಂದು ಹೇಳಿದ್ದಾರೆ. ಜೆಡಿಎಸ್‌ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಸಾಲ ಮನ್ನಾ, ಗರ್ಭಿಣಿಯರು, ಹಿರಿಯ ನಾಗರಿಕರು ಹಾಗೂ ಬಡ ಮಹಿಳೆಯರಿಗೆ ಮಾಸಾಶನ, ಯುವಕರಿಗೆ  ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹೊಸ ನೀತಿ, ಆಟೋ ಚಾಲಕರು, ಗಾರ್ಮೆಂಟ್ಸ್‌ ನೌಕರರು, ಬೀದಿ ಬದಿ ವ್ಯಾಪಾರಿಗಳಿಗೆ ಅಗ್ಗದ ದರದಲ್ಲಿ ವಸತಿ ಯೋಜನೆ ರೂಪಿಸುವುದು ಬಜೆಟ್‌ನಲ್ಲಿ ಸೇರಿಸಬೇಕು ಎಂಬುದು ಅವರ ಉದ್ದೇಶ.

ಜುಲೈ ಮೊದಲ ವಾರ ಅಧಿವೇಶನ ನಡೆಯಲಿದ್ದು, ಹೊಸ ಬಜೆಟ್‌ ಮಂಡಿಸಲಿದ್ದೇನೆ. ಈಗಾಗಲೇ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲದೆ, ನಾನೂ ಇಲಾಖಾವಾರು ಅಧಿಕಾರಿಗಳ ಸಭೆಯನ್ನು ನಡೆಸಲಿದ್ದೇನೆ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಮತ್ತೂಂದು ಬಜೆಟ್‌ ಅನಗತ್ಯ: ಸಿದ್ದರಾಮಯ್ಯ  
ಬೆಂಗಳೂರು:ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೂಂದು ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮಂಡಿಸಿದ ಬಜೆಟ್‌ನಲ್ಲಿನ ಎಲ್ಲ ಘೋಷಣೆಗಳೂ ಮುಂದುವರೆಯುತ್ತವೆ. ಕುಮಾರಸ್ವಾಮಿ ಹೊಸದಾಗಿ ಯಾವುದಾದರೂ ಕಾರ್ಯಕ್ರಮ ಸೇರಿಸುವುದಾದರೆ ಪೂರಕ ಅಂದಾಜುಗಳಲ್ಲಿ ಸೇರಿಸಬಹುದು. ಜತೆಗೆ ಎರಡೂ ಪಕ್ಷಗಳ ಪ್ರಣಾಳಿಕೆಗಳನ್ನು ಸೇರಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅದಕ್ಕಾಗಿ ಸಮಿತಿಯೂ ರಚನೆಯಾಗಿದೆ. ಹೀಗಾಗಿ, ಮತ್ತೂಂದು ಬಜೆಟ್‌ನ ಅಗತ್ಯ ಬರುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.