ಪ್ರತ್ಯೇಕ ಧರ್ಮ:ಲೋಕ ವಿರಾಮ
Team Udayavani, Dec 16, 2018, 6:00 AM IST
ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತಂತೆ ಲೋಕಸಭೆ ಚುನಾವಣೆ ಬಳಿಕ ನಿರ್ಣಾಯಕ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವ ಕ್ರಮ ಸರಿಯಲ್ಲ ಎಂದಿದ್ದಾರೆ.
ಪ್ರತ್ಯೇಕ ಧರ್ಮ ಮಾನ್ಯತೆ ಕುರಿತು ನಮ್ಮ ಹೋರಾಟ ಗುರಿ ಮುಟ್ಟುವವರೆಗೆ ನಿಲ್ಲುವುದಿಲ್ಲ. ಲೋಕಸಭೆ ಚುನಾವಣೆ ಬಳಿಕ ಈ ಹೋರಾಟಕ್ಕೆ ನಿರ್ಣಾಯಕ ಸ್ವರೂಪ ನೀಡಲಿದ್ದೇವೆ. ಈಗಲೇ ಹೋರಾಟಕ್ಕೆ ಚಾಲನೆ ನೀಡಿದರೆ ಲೋಕಸಭೆ ಚುನಾವಣೆ ಕಾರಣಕ್ಕೆ ಎಂದು ರಾಜಕೀಯ ಬಣ್ಣ ನೀಡಲಾಗುತ್ತದೆ. ಹೀಗಾಗಿ ಅಲ್ಲಿಯವರೆಗೆ ಶಾಂತವಾಗಿದ್ದು, ಲೋಕಸಭೆ ಚುನಾವಣೆ ಬಳಿಕ ಹೋರಾಟ ನಡೆಸುತ್ತೇವೆ ಎಂದರು.
ಲಿಂಗಾಯತರು 12ನೇ ಶತಮಾನದಿಂದ ಇಂದಿನವರೆಗೂ ಎಂದೂ ವೀರಶೈವರಾಗಿಲ್ಲ. ಸ್ವಾತಂತ್ರÂ ಪೂರ್ವದಿಂದಲೇ 1871ರಿಂದಲೂ ಲಿಂಗಾಯತರು ಚಾತುರ್ವರ್ಣ ವ್ಯವಸ್ಥೆಯಿಂದ ದೂರ ಇದ್ದೇವೆ ಎಂಬುದಕ್ಕೆ ಐತಿಹಾಸಿಕ ದಾಖಲೆ ಸಹಿತ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಕನಿಷ್ಠ ಪರಿಶೀಲನೆಗೂ ಮುಂದಾಗಿಲ್ಲ ಎಂಬುದು ಅವರ ನಿರ್ಧಾರದಿಂದ ಸ್ಪಷ್ಟವಾಗಿದೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ