ಕಾಂಗ್ರೆಸ್‌ ಶಾಸಕರ ರಿವರ್ಸ್‌ ಆಪರೇಷನ್‌ ಕಸರತ್ತು

ರಾತ್ರೋರಾತ್ರಿ 'ಕಾವೇರಿ'ಯಲ್ಲಿ ಗೇಮ್‌ಪ್ಲಾನ್‌ | ಮೂವರಿಗೆ ಸಚಿವಗಿರಿ, ಉಳಿದವರಿಗೆ 'ಇಷ್ಟಾರ್ಥ' ಈಡೇರಿಕೆ ಆಮಿಷ

Team Udayavani, May 28, 2019, 1:21 PM IST

bengaluru-tdy-6..

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ನಿಟ್ಟಿನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೆ ಸಜ್ಜಾಗಿದ್ದ ಕಾಂಗ್ರೆಸ್‌ ಶಾಸಕರನ್ನು ರಾತ್ರೋರಾತ್ರಿ ರಿವರ್ಸ್‌ ಆಪರೇಷನ್‌ ಕಸರತ್ತು ಮಾಡಿ ‘ಬೇಲಿ’ ಹಾರದಂತೆ ಕಟ್ಟಿಹಾಕಲಾಗಿದೆ.

ಹದಿನಾಲ್ಕು ಶಾಸಕರು ಬಿಜೆಪಿಗೆ ಹೋಗಲು ಸಿದ್ಧರಾಗಿ ಅತ್ತ ಎರಡನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಮಾಸ್ಟರ್‌ ಪ್ಲಾನ್‌ ಸಿದ್ಧವಾಗಿತ್ತು. ಇದರ ಮಾಹಿತಿ ಪಡೆದ ಕಾಂಗ್ರೆಸ್‌-ಜೆಡಿಎಸ್‌ ರಹಸ್ಯ ಕಾರ್ಯಾಚರಣೆ ನಡೆಸಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಜಮೀರ್‌ ಅಹಮದ್‌ ರಾತ್ರೋರಾತ್ರಿ ಆಪರೇಟ್ ಮಾಡಿ ಹದಿನಾಲ್ಕು ಶಾಸಕರ ಪೈಕಿ ಹನ್ನೆರಡು ಶಾಸಕರನ್ನು ಹಿಡಿದಿಟ್ಟುಕೊಂಡಿದ್ದು ಇದೆಲ್ಲ ಪ್ರಹಸನ ಸಿದ್ದರಾಮಯ್ಯ ಅವರ ‘ಕಾವೇರಿ’ ನಿವಾಸದಲ್ಲೇ ನಡೆದಿದೆ.

ಬಿಜೆಪಿ ಕ್ಯಾಂಪ್‌ ಸೇರಲು ಸಜ್ಜಾಗಿದ್ದ ಇಬ್ಬರು ಪಕ್ಷೇತರರು ಸೇರಿ 9 ಕಾಂಗ್ರೆಸ್‌ ಶಾಸಕರು ಇದೀಗ ಕಾಂಗ್ರೆಸ್‌-ಜೆಡಿಎಸ್‌ ಕ್ಯಾಂಪ್‌ನಲ್ಲಿ ‘ಲಾಕ್‌’ ಆಗಿದ್ದಾರೆ. ಪಕ್ಷೇತರ ಶಾಸಕರಾದ ಆರ್‌.ಶಂಕರ್‌, ನಾಗೇಶ್‌, ಕಾಂಗ್ರೆಸ್‌ ಶಾಸಕರಾದ ಬಿ.ಸಿ.ಪಾಟೀಲ್, ಪ್ರತಾಪ್‌ಗೌಡ ಪಾಟೀಲ್, ಆನಂದ್‌ಸಿಂಗ್‌, ಕಂಪ್ಲಿ ಗಣೇಶ್‌, ಡಾ.ಕೆ.ಸುಧಾಕರ್‌, ಶಿವರಾಂ ಹೆಬ್ಟಾರ್‌, ಭೀಮಾ ನಾಯ್ಕ , ನಾಗೇಂದ್ರ, ಬಸವರಾಜ್‌ ದದ್ದಲ್, ರೋಷನ್‌ಬೇಗ್‌, ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ, ಶ್ರೀಮಂತ ಪಾಟೀಲ್ ಆಪರೇಷನ್‌ ‘ಖೆಡ್ಡಾ’ಗೆ ಬಿದ್ದಿದ್ದರು.

ಈ ಪೈಕಿ ರಮೇಶ್‌ ಜಾರಕಿಹೊಳಿ, ರೋಷನ್‌ಬೇಗ್‌ ಹೊರತುಪಡಿಸಿ ಉಳಿದೆಲ್ಲಾ ಶಾಸಕರನ್ನು ಮತ್ತೆ ರಾತ್ರೋರಾತ್ರಿ ಆಪರೇಟ್ ಮಾಡಲಾಗಿದೆ. ಇವರಲ್ಲಿ ಇಬ್ಬರಿಂದ ಮೂವರಿಗೆ ಸಚಿವಗಿರಿ ‘ಭಾಗ್ಯ’ ದೊರೆಯಲಿದ್ದು, ಉಳಿದವರಿಗೆ ಬೇಕಾದ ಅಧಿಕಾರಿಗಳ ವರ್ಗಾವಣೆ ಸೇರಿ ‘ಇಷ್ಟಾರ್ಥ’ ನೆರವೇರಿಸುವ ‘ಭರಪೂರ’ ಕೊಡುಗೆ ಭರವಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಮೊದಲ ಹಂತವಾಗಿ ಖಾಲಿ ಇರುವ ಮೂರು ಸಚಿವ ಸ್ಥಾನ ಭರ್ತಿಯಾಗಲಿದ್ದು, ಎರಡನೇ ಹಂತದಲ್ಲಿ ಅಗತ್ಯವಾದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ತಲಾ ಮೂವರು ಸಚಿವರ ರಾಜೀನಾಮೆ ಪಡೆದು ಅತೃಪ್ತರಿಗೆ ಸಚಿವಗಿರಿ ಭಾಗ್ಯ ನೀಡಲು ತೀರ್ಮಾನಿಸಲಾಗಿದೆ.

ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ರೂಪಿಸಿರುವ ಸೂತ್ರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮತಿಯೂ ಇದ್ದು, ಎಂತಹುದೇ ಪರಿಸ್ಥಿತಿಯಲ್ಲೂ ಸರ್ಕಾರ ಉಳಿಸಿಕೊಳ್ಳುವಂತೆ ಸೂಚಿಸಿದೆ ಎಂದು ಹೇಳಲಾಗಿದೆ.

ಆದರೆ, ಎರಡನೇ ಹಂತದಲ್ಲಿ ಆರು ಸಚಿವರನ್ನು ಸಂಪುಟದಿಂದ ತೆಗೆಯುವಾಗ ಎಚ್ಚರವಹಿಸಿ. ಆ ಪ್ರಕ್ರಿಯೆ ಜೇನುಗೂಡಿಗೆ ಕಲ್ಲು ಎಸೆದಂತೆ ಆಗಬಾರದು ಎಂಬ ಎಚ್ಚರಿಕೆಯನ್ನು ನೀಡಿದೆ ಎಂದು ತಿಳಿದು ಬಂದಿದೆ. ಆದರೆ, ಹದಿನಾಲ್ಕು ಅತೃಪ್ತರಲ್ಲಿ ಮೂವರಿಗೆ ಸಚಿವಗಿರಿ ಕೊಟ್ಟರೆ ಉಳಿದ 11 ಮಂದಿ ಭರವಸೆಗಳಿಗೆ ಮಾತ್ರ ತೃಪ್ತಿಯಾಗುತ್ತಾರಾ? ಈಗ ಬಿಜೆಪಿಯತ್ತ ಹೋಗುವುದಿಲ್ಲ ಎಂದು ಒಪ್ಪಿರುವವರು ಮಾತು ಉಳಿಸಿಕೊಳ್ಳುತ್ತಾರಾ ಎಂಬುದು ಕಾದು ನೋಡಬೇಕಾಗಿದೆ.

ಈ ಮಧ್ಯೆ, ರಾಜ್ಯ ಬಿಜೆಪಿಯಲ್ಲಿ ಮಾತ್ರ ಪರ್ಯಾಯ ಸರ್ಕಾರ ರಚನೆ ಆಸೆ ಇದೆ. ಆದರೆ, ಕೇಂದ್ರ ಬಿಜೆಪಿ ನಾಯಕರಿಗೆ ಹೊಸದಾಗಿ ಚುನಾ ವಣೆಗೆ ಹೋಗುವ ಚಿಂತನೆಯಿದೆ ಎಂದು ಹೇಳಲಾ ಗಿದ್ದು, ಆದರೆ, ಕಾಂಗ್ರೆಸ್‌, ಜೆಡಿಎಸ್‌ ಅಷ್ಟೇ ಅಲ್ಲದೆ ಬಿಜೆಪಿಯ ಬಹುತೇಕ ಶಾಸಕರಿಗೆ ಹೊಸದಾಗಿ ಚುನಾ ವಣೆಗೆ ಹೋಗುವ ಮನಸ್ಸಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಾಂಗ್ರೆಸ್‌-ಜೆಡಿಎಸ್‌ ಗೇಮ್‌ಪ್ಲಾನ್‌ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.

ಮತ್ತೆ ಒಂದಾದ ಜೋಡಿ:

ಲೋಕಸಭೆ ಚುನಾವಣೆ ಫ‌ಲಿತಾಂಶದ ಹೊರಬಿದ್ದ ದಿನವೇ ಸಮ್ಮಿಶ್ರ ಸರ್ಕಾರ ಪತನಕ್ಕೆ ಬಿಜೆಪಿ ‘ಮುಹೂರ್ತ’ ಫಿಕ್ಸ್‌ ಮಾಡಿ ಹದಿನಾಲ್ಕು ಶಾಸಕರನ್ನು ಒಟ್ಟುಗೂಡಿಸಿತ್ತು. ಇದರ ಮಾಹಿತಿ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಜತೆಗೂಡಿ ಕಾರ್ಯತಂತ್ರ ರೂಪಿಸಿದರು. ಇದಕ್ಕೆ ಹಳೇ ‘ದೋಸ್ತ್’ ಸಚಿವ ಜಮೀರ್‌ ಅಹಮದ್‌ ಸಾಥ್‌ ನೀಡಿದರು. ಮೇ 26 ರಂದು ಮೂವರು ಮೊಬೈಲ್ ಮೂಲಕ ಶಾಸಕರ ಸಂಪರ್ಕಿಸಿ ಅವರ ಮನವೊಲಿಸಿದ್ದಾರೆ. ಆದರೆ, ರಮೇಶ್‌ ಜಾರಕಿಹೊಳಿ ಹಾಗೂ ರೋಷನ್‌ಬೇಗ್‌ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
● ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.