ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗ್ತೀನೆ: ಎಚ್ಡಿಕೆ
Team Udayavani, Dec 2, 2018, 6:05 AM IST
ಬೆಂಗಳೂರು: ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಸಂಬಂಧಿಸಿದ ಕೆಲಸ ಕಾರ್ಯ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಲು ಡಿ.8 ರಂದು ಕರೆಯಲಾಗಿರುವ ಸಭೆಗೆ ಹಾಜರಾಗಲಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಡಿಸೆಂಬರ್ 8 ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಗೆ ನನಗೂ ಆಹ್ವಾನ ನೀಡಲಾಗಿದೆ. ನಾನು ಪಾಲ್ಗೊಳ್ಳಲಿದ್ದೇನೆ ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರಿಬ್ಬರೂ ಸಮಾನ. ಜತೆಗೆ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದರು.