ಕಾಂಗ್ರೆಸ್ ಯಾತ್ರೆ: ಸಿಎಂ ಪರ ಕಾಗೋಡು ಬ್ಯಾಟಿಂಗ್
Team Udayavani, Dec 7, 2017, 6:25 AM IST
ಬೆಂಗಳೂರು: ಕಾಂಗ್ರೆಸ್ ಯಾತ್ರೆಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡುವೆ ಇರುವ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ
ಅವರು ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್ ಮಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಪ್ರತ್ಯೇಕ ಪ್ರವಾಸ ಮಾಡುತ್ತಿರುವ ಕುರಿತಂತೆ ಸುದ್ದಿಗಾರರ
ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರದಲ್ಲಿ ಅವರಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಗೊಂದಲ ಇದ್ದರೆ ಅದು ಅಪ್ರಬುದಟಛಿ ವಿಚಾರ. ಒಂದು ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ಸರ್ಕಾರದ ಸಾಧನೆಗಳನ್ನು ವಿವರಿಸಲು ಮುಖ್ಯಮಂತ್ರಿಗಳ ನಾಯಕತ್ವದಲ್ಲಿ ಯಾತ್ರೆ ಹೋಗುತ್ತದೆ. ಕೆಪಿಸಿಸಿ ಅಧ್ಯಕ್ಷರಿಗೆ ಮಾಡಲು ಬೇರೆ ಕೆಲಸಗಳಿರುತ್ತವೆ. ಹೀಗಾಗಿ ಈ ವಿಚಾರದಲ್ಲಿ ಗೊಂದಲ ಸರಿಯಲ್ಲ ಎಂದರು.
ಬಿಜೆಪಿ ಅಪ್ರಬುದ್ಧತೆ: ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಪ್ರತಿಭಟನೆ ನಡೆಸುತ್ತಾ
ಅವರನ್ನು ಅತ್ಯಾಚಾರಿ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರ ಬಗ್ಗೆ ಕಿಡಿ ಕಾರಿದ ಕಾಗೋಡು ತಿಮ್ಮಪ್ಪ, ವೇಣುಗೋಪಾಲ್ ವಿರುದ್ಧ ಆರೋಪ ಇರುವುದು ಕೇರಳದಲ್ಲಿ. ಬಿಜೆಪಿಯವರು ಬೇಕಿದ್ದರೆ ಅಲ್ಲಿ ಹೋಗಿ ಪ್ರತಿಭಟನೆ ಮಾಡಲಿ ಎಂದು ಹೇಳಿದರು.
ಪಕ್ಷದ ತೀರ್ಮಾನಕ್ಕೆ ಬದ್ಧ: ಕಳೆದ ವಿಧಾನಸಭೆ ಚುನಾವಣೆ ವೇಳೆ ಇದು ನನ್ನ ಕಡೇ ಚುನಾವಣೆ ಎಂದು ಘೋಷಿಸಿದ್ದ ಸಚಿವ ಕಾಗೋಡು ತಿಮ್ಮಪ್ಪ ಇದೀಗ ತಮ್ಮ ನಿಲುವು ಬದಲಿಸಿದ್ದು, ತಾವು ಸ್ಪರ್ಧಿಸುವ ವಿಚಾರವನ್ನು ಪಕ್ಷ
ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ನೀವು ಸ್ಪರ್ಧಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು
ಪಕ್ಷದ ತೀರ್ಮಾನಕ್ಕೆ ಬದಟಛಿ. ಪಕ್ಷ ಏನು ಹೇಳುತ್ತದೋ ಅದನ್ನು ಕೇಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ