ಕಾಲುವೆ, ತೊರೆಗಳಿಗೆ ಸೇತುವೆ ನಿರ್ಮಾಣ: ಸಿಎಂ ಕುಮಾರಸ್ವಾಮಿ
Team Udayavani, Sep 27, 2018, 6:00 AM IST
ಬೆಂಗಳೂರು: ಮಲೆನಾಡು, ಕರಾವಳಿ ಸೇರಿ ಇನ್ನಿತರ ಭಾಗಗಳಲ್ಲಿ ಶಾಲಾ-ಕಾಲೇಜು ಮಕ್ಕಳ ಅನುಕೂಲಕ್ಕಾಗಿ ತೊರೆ ಹಾಗೂ ಕಾಲುವೆಗಳಿಗೆ ಶಾಶ್ವತ ಸೇತುವೆಗಳ ನಿರ್ಮಾಣಕ್ಕೆ 121 ಕೋಟಿ ರೂ. ಮೀಸಲಿಟ್ಟಿದ್ದು, ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬಿಬಿಎಂಪಿ ವತಿಯಿಂದ ಬೆಂಗಳೂರಿನ ಟೌನ್ಹಾಲ್ನಲ್ಲಿ ಹಮ್ಮಿಕೊಂಡಿದ್ದ “ಬಿಬಿಎಂಪಿ ರೋಷಣಿ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಬೇಕು ಎಂಬುದು ಸಮ್ಮಿಶ್ರ ಸರ್ಕಾರದ ಉದ್ದೇಶವಾಗಿದೆ. ಹಿಗಾಗಿ ಮಕ್ಕಳ ಜೀವ ರಕ್ಷಣೆಯ ಉದ್ದೇಶದಿಂದ ಶಾಶ್ವತ ಕಾಲುವೆಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ಮಳೆಗಾಲದಲ್ಲಿ ಶಾಲಾ ಮಕ್ಕಳು ಕಾಲುವೆ, ತೊರೆ ದಾಟುವಾಗ ಬಿದ್ದು ಮೃತಪಟ್ಟಿರುವ ಘಟನೆಗಳ ಮಾಹಿತಿಯನ್ನು ಪಡೆಯಲಾಗಿದ್ದು, ಇಂತಹ ಘಟನೆಗಳು ಮತ್ತೆ ಸಂಭವಿಸಬಾರದೆಂಬ ಉದ್ದೇಶದಿಂದ ಅಪಾಯಕಾರಿ ಎನಿಸುವ ಸ್ಥಳಗಳಲ್ಲಿ ಶಾಶ್ವತ ಕಾಲು ಸೇತುವೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಅದಕ್ಕಾಗಿಯೇ ಸರ್ಕಾರದಿಂದ 121 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳ ಮೇಲ್ದರ್ಜೆಗೆ ಸಾವಿರ ಕೋಟಿ ರೂ.
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಿದ್ದು, ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಅನಿವಾರ್ಯತೆಯಿದೆ. ಅದರಂತೆ ರಾಜ್ಯದ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ನವೀಕರಣಕ್ಕಾಗಿ ಇದೇ ಮೊದಲ ಬಾರಿಗೆ 1000 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ತ್ವರಿತವಾಗಿ ಹೊಸ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯ ನಡೆಸಲಾಗುತ್ತದೆ ಎಂದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ