ಗ್ರಾಮೀಣ ಅಂಚೆ ಸೇವಕರ ಮುಷ್ಕರ ಮುಂದುವರಿಕೆ
Team Udayavani, May 25, 2018, 7:30 AM IST
ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ನೇತೃತ್ವದಲ್ಲಿ ಗ್ರಾಮೀಣ ಅಂಚೆ ಸೇವಕರು ನಡೆಸುತ್ತಿರುವ ಅರ್ನಿದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯದ ಹಲವೆಡೆ ಮುಷ್ಕರ ನಡೆಸುತ್ತಿರುವ ಅಂಚೆ ಸೇವಕರು, ಬೇಡಿಕೆ ಈಡೇರಿಕೆಗೆ ಒತ್ತಾಯಿಸುತ್ತಿದ್ದಾರೆ. ಗ್ರಾಮೀಣ ಅಂಚೆ ಇಲಾಖೆ ನೌಕರರಿಗೆ 7ನೇ ವೇತನ ಆಯೋಗದ ಸವಲತ್ತು ದೊರೆತು 20 ತಿಂಗಳಾದರೂ ಇಲಾಖೆಗೆ ಬೆನ್ನಲುಬಾಗಿರುವ ಅಂಚೆ ಸೇವಕರಿಗೆ ಸೂಕ್ತ ವೇತನ ಮತ್ತು ಸೇವಾ ಸವಲತ್ತುಗಳನ್ನು ನೀಡದೆ ಅನ್ಯಾಯ ಮಾಡಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರ ಕಮಲೇಶ್ಚಂದ್ರ ನೇತೃತ್ವದ ಸಮಿತಿ ಸಲ್ಲಿಸಿದ 7ನೇ ವೇತನ ಆಯೋಗದ ವರದಿ ಜಾರಿಗೊಳಿಸದೆ ತಾರತಮ್ಯ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಅಂಚೆ ಇಲಾಖೆಯಲ್ಲಿ ಅಂದಾಜು 2.60 ಲಕ್ಷಕ್ಕೂ ಹೆಚ್ಚು ಜಿಡಿಎಸ್ ನೌಕರರು 40 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರೂ ಅವರಿಗೆ ಯಾವುದೇ ಸವಲತ್ತುಗಳನ್ನು ನೀಡಲಾಗುತ್ತಿಲ್ಲ. ಇಲಾಖೆ ನೌಕರರ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಬಾರಿ ಪ್ರಧಾನಮಂತ್ರಿ, ದೂರ ಸಂಪರ್ಕ ಸಚಿವರು, ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಇದೀಗ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಹೋರಾಟ ನಡೆಸುತ್ತಿದ್ದು, ಈ ಬೇಡಿಕೆ ಈಡೇರುವವರೆಗೂ ನಿರಂತರವಾಗಿ ನಮ್ಮ ಹೋರಾಟ ನಡೆಯಲಿದೆ. ಬೇಡಿಕೆ ಈಡೇರಿಕೆಗಾಗಿ ಕಳೆದ ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರೂ, ಯಾವುದೇ ಜನಪ್ರತಿನಿಧಿಗಳು ಸಮಸ್ಯೆ ಆಲಿಸಿಲ್ಲ ಎಂದು ವಿಷಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ