ಸೈಬರ್‌ ಅಪರಾಧಗಳ ಪತ್ತೆಮಾಡುವ ಪ್ರಯೋಗಾಲಯ ಸ್ಥಾಪನೆಗೆ ಒಪ್ಪಂದ


Team Udayavani, Oct 4, 2018, 11:52 AM IST

blore-6.jpg

ಬೆಂಗಳೂರು: ಸೈಬರ್‌ ಅಪರಾಧಗಳನ್ನು ಪತ್ತೆ ಹಚ್ಚಲು ಪ್ರಯೋಗಾಲಯ ಸ್ಥಾಪನೆಗೆ ರಾಜ್ಯ ಸರ್ಕಾರದೊಂದಿಗೆ
ಇನ್ಫೋಸಿಸ್‌ ಪ್ರತಿಷ್ಠಾನ ಒಪ್ಪಂದ ಮಾಡಿಕೊಂಡಿದೆ. ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಸಮ್ಮುಖದಲ್ಲಿ ಸುಮಾರು 22 ಕೋಟಿ ರೂ. ಮೊತ್ತದ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಯಿತು.

ಈ ವೇಳೆ ಮಾತನಾಡಿದ ಪರಮೇಶ್ವರ್‌, ತಂತ್ರಜ್ಞಾನ ಬಳಸಿ ಅಪರಾಧ ಪತ್ತೆ ಹಚ್ಚಲು ಸಿಐಡಿ ವಿಭಾಗದಲ್ಲಿ ಪ್ರಯೋಗಾಲಯ ಸ್ಥಾಪನೆಯಾಗುತ್ತಿರುವುದು ದೇಶದಲ್ಲಿಯೇ ಮೊದಲು. ಪೊಲೀಸ್‌ ಇಲಾಖೆ ಬಗ್ಗೆ ಎಲ್ಲರೂ ನಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಆದರೆ, ಇನ್ಫೋಸಿಸ್‌ ಸಂಸ್ಥೆ ನಿರಂತರವಾಗಿ ಪೊಲೀಸ್‌ ಇಲಾಖೆಗೆ ಸಹಾಯ ಹಸ್ತ ನೀಡುತ್ತ ಬಂದಿದೆ ಎಂದರು.

ಪೊಲೀಸ್‌ ಇಲಾಖೆಗೆ ಬಜೆಟ್‌ನಲ್ಲಿಯೂ ನಿರೀಕ್ಷಿತ ಹಣಕಾಸು ದೊರೆಯುತ್ತಿಲ್ಲ. ಸಾರ್ವಜನಿಕರಿಂದಲೂ ಸಾಕಷ್ಟು ಸಹಾಯ ದೊರೆಯುವುದಿಲ್ಲ. ಆದರೆ, ರಾಜ್ಯ ಸರ್ಕಾರ ಪೊಲೀಸರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. 1800 ಕೋಟಿ ರೂ. ವೆಚ್ಚದಲ್ಲಿ ಪೊಲೀಸರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಎಲ್ಲ ಪೊಲೀಸ್‌ ಠಾಣೆಗಳಿಗೂ ಇಂಟರ್‌ ನೆಟ್‌ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.

ಈಗ ಸೈಬರ್‌ ಅಪರಾಧಗಳ ಪತ್ತೆಗೆ ಹೊಸ ತಂತ್ರಜ್ಞಾನ ಲಭ್ಯವಿರುವುದರಿಂದ ಈ ಬಗ್ಗೆ ಪೊಲೀಸರಿಗೆ ತಾಂತ್ರಿಕ ತರಬೇತಿ ನೀಡಲು ದೇಶದ ವಿವಿಧ ಭಾಗದಿಂದ ತಂತ್ರಜ್ಞರನ್ನು ಕರೆಸಿ ತರಬೇತಿ ನೀಡಲಾಗುವುದು. ಗುಜರಾತ್‌ನ ಅಹಮದಾಬಾದ್‌ನಲ್ಲಿ ಅತ್ಯಂತ ಸುಸಜ್ಜಿತವಾದ ಸೈಬರ್‌ ಅಪರಾಧ ಪತ್ತೆ ಕೇಂದ್ರವಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಸೈಬರ್‌ ಅಪರಾಧ ಪತ್ತೆ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಮಾತನಾಡಿ, ಸಮಾಜದ ರಕ್ಷಣೆಗಾಗಿ ಪೊಲೀಸರು ಹಗಲಿರುಳು ಶ್ರಮಿಸುತ್ತಾರೆ. ಅವರ ಅನುಕೂಲಕ್ಕೆ ಸಮಾಜದ ಭಾಗವಾಗಿ ಕೆಲಸ ಮಾಡುತ್ತಿರುವುದು ಖುಷಿ ತಂದಿದೆ. ಕಳ್ಳರು ಹೊಸ ಹೊಸ ತಂತ್ರಜ್ಞಾನ ಬಳಸಿ ಅಪರಾಧಗಳನ್ನು ಮಾಡುತ್ತಾರೆ. ಅಂತಹ ತಂತ್ರಜ್ಞಾನವನ್ನು ಪತ್ತೆಹಚ್ಚಲು ಪೊಲೀಸರಿಗೆ
ಅನುಕೂಲವಾಗಲೆಂದು ಇನ್ಫೋಸಿಸ್‌ ಪ್ರತಿಷ್ಠಾನವು ಪ್ರಯೋಗಾಲಯ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡಿದೆ. ಐದು ವರ್ಷಗಳವರೆಗೆ ಇನ್ಫೋಸಿಸ್‌ ಸಂಸ್ಥೆಯೇ ಪ್ರಯೋಗಾಲಯ ನಿರ್ವಹಣೆಯ ಜವಾಬ್ದಾರಿ ವಹಿಸಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.