Arrested: ಕಂಟ್ರ್ಯಾಕ್ಟರ್ ಅಪಹರಿಸಿ ಮೂರು ಕೋಟಿ ರೂ.ಗೆ ಬೇಡಿಕೆ; ಬಂಧನ
Team Udayavani, Oct 21, 2023, 1:22 PM IST
ಬೆಂಗಳೂರು: ಗುತ್ತಿಗೆದಾರನನ್ನು ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಬಿಬಿಎಂಪಿ ಮಾಜಿ ಕಾರ್ಪೊರೆಟರ್ ಜಿ.ಕೆ.ವೆಂಕಟೇಶ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಜಿ.ಕೆ.ವೆಂಕಟೇಶ್ ಯಶವಂತಪುರ ವಾರ್ಡ್ನ ಮಾಜಿ ಕಾರ್ಪೊರೇಟರ್ ಆಗಿದ್ದಾರೆ. ಯಶವಂತಪುರ ವಾರ್ಡ್ ಕಾಮಗಾರಿಯನ್ನು ಗುತ್ತಿಗೆದಾರರ ಚಂದ್ರು ಗುತ್ತಿಗೆ ಪಡೆದಿದ್ದರು. ಚಂದ್ರುಗೆ ಗುತ್ತಿಗೆ ಸಿಕ್ಕಿದ ಹಿನ್ನೆಲೆ ವೆಂಕಟೇಶ್ ಆಕ್ರೋಶಗೊಂಡಿದ್ದರು. ನಿನ್ನಿಂದ ಕೈ ತಪ್ಪಿರುವ ಕಾಮಗಾರಿ ಭರಿಸುವಂತೆ ಬೆದರಿಕೆ ಒಡ್ಡಿದ್ದರು. ಇದಕ್ಕೆ ಚಂದ್ರು ಕಿವಿಗೊಡದೆ ಇದ್ದಾಗ ಅ.18 ರಂದು ಸಹಚರರ ಜತೆಗೆ ಸೇರಿಕೊಂಡು ಚಂದ್ರುನನ್ನು ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದರು. ಬಳಿಕ 3 ಕೋಟಿ ರೂ. ಚೆಕ್ ಪಡೆದು ಹಲ್ಲೆ ಮಾಡಿ ಬಿಡುಗಡೆ ಮಾಡಿದ್ದರು. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಗೆ ಗುತ್ತಿಗೆದಾರ ಚಂದ್ರು ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ