ನ್ಯಾನೊ ಸೆಂಟರ್‌ ಸ್ಥಾಪಿಸಲು ಸಹಕಾರ


Team Udayavani, Dec 6, 2018, 11:43 AM IST

nyano.jpg

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ)ದಲ್ಲಿ ನ್ಯಾನೊ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸೆಂಟರ್‌ ಆಫ್ ಎಕ್ಸಲನ್ಸ್‌ ಸ್ಥಾಪಿಸಲು ಅಗತ್ಯ ಸಹಕಾರ ನೀಡಲು ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.  

ನಗರದಲ್ಲಿ ಹಮ್ಮಿಕೊಂಡ ಮೂರು ದಿನಗಳ ನ್ಯಾನೊ ಬೆಂಗಳೂರು 10ನೇ ಆವೃತ್ತಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ಉದಯೋನ್ಮುಖ ಉದ್ಯಮವಾದ ಈ ನ್ಯಾನೊ ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ.

ಉದ್ಯಮ ಕ್ಷೇತ್ರದಲ್ಲಿನ ದಿಗ್ಗಜರು ರಾಜ್ಯದಲ್ಲಿ ನ್ಯಾನೊ ಸೆಂಟರ್‌ ಆಫ್ ಎಕ್ಸಲನ್ಸ್‌ ಸ್ಥಾಪನೆಗೆ ಮುಂದಾಗಬೇಕು. ಅಂತಹ ಉದ್ಯಮಿಗಳೊಂದಿಗೆ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಆರಂಭಿಸಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.  

ನ್ಯಾನೊ ತಂತ್ರಜ್ಞಾನವು ತೀವ್ರವಾಗಿ ಕಾಡುತ್ತಿರುವ ಆಹಾರ ಭದ್ರತೆ, ಇಂಧನ, ನೀರು ಶುದ್ಧೀಕರಣ, ಮೂಲಸೌಕರ್ಯ, ಆರೋಗ್ಯ, ತ್ಯಾಜ್ಯ ನಿರ್ವಹಣೆಯಂತಹ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು ಸಂಶೋಧನೆ ನಡೆಸುವ ಅಗತ್ಯ ಇದೆ.

ಅದರಲ್ಲೂ ಮುಖ್ಯವಾಗಿ ಆಹಾರ ಸಂರಕ್ಷಣೆ ಮತ್ತು ಮಣ್ಣಿನ ಗುಣಮಟ್ಟ ಸುಧಾರಣೆಗೆ ನ್ಯಾನೊ ತಂತ್ರಜ್ಞಾನ ಪರಿಹಾರ ಒದಗಿಸುವಲ್ಲಿ ಆದ್ಯತೆ ನೀಡಬೇಕು. ಇದು ಸಾಧ್ಯವಾದರೆ, ರೈತರ ಆರ್ಥಿಕ ಮಟ್ಟ ಸುಧಾರಣೆಯಲ್ಲಿ ದೊಡ್ಡ ಬದಲಾವಣೆ ಕಾಣಬಹುದು ಎಂದು ಹೇಳಿದರು.

ಬೆಂಗಳೂರು ಸಂಶೋಧನೆಗಳ ರಾಜಧಾನಿ. ನಗರದಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ), ಜವಾಹರಲಾಲ್‌ ನೆಹರು ಮುಂದುವರಿದ ವಿಜ್ಞಾನ ಸಂಶೋಧನಾ ಕೇಂದ್ರ (ಜೆಎನ್‌ಸಿಎಎಸ್‌ಆರ್‌), ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರ (ಎನ್‌ಸಿಬಿಎಸ್‌)ನಂತಹ ಪ್ರತಿಷ್ಠಿತ ಸಂಸ್ಥೆಗಳು ದಶಕಗಳಿಂದ ಇಲ್ಲಿ ಕೆಲಸ ಮಾಡುತ್ತಿರುವುದೇ ಇದಕ್ಕೆ ಸಾಕ್ಷಿ. ಈಗ ನ್ಯಾನೊ ತಂತ್ರಜ್ಞಾನ ಕ್ಷೇತ್ರದಲ್ಲೂ ಈ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದೆ ಎಂದರು. 

ಸಂಶೋಧನೆಗೆ ಸಲಹೆ: ಭಾರತರತ್ನ ಡಾ.ಸಿ.ಎನ್‌.ಆರ್‌.ರಾವ್‌ ಮಾತನಾಡಿ, ಅಂತಿಮ ಹಂತದಲ್ಲಿ ಪತ್ತೆಯಾಗುವ ಕ್ಯಾನ್ಸರ್‌ ಪ್ರತಿ ವರ್ಷ ಸಾವಿರಾರು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಇದನ್ನು “ನ್ಯಾನೊ ನೋಸ್‌’ ಮೂಲಕ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಲು ಸಾಧ್ಯ ಇದೆ.

ಈ ನಿಟ್ಟಿನಲ್ಲಿ ನಗರದ ರಾಷ್ಟ್ರೀಯ ನ್ಯಾನೊ ತಂತ್ರಜ್ಞಾನ ಸಂಸ್ಥೆ ಸಂಶೋಧನೆ ನಡೆಸುವ ಅಗತ್ಯ ಇದೆ ಎಂದು ಹೇಳಿದರು.  ಮಾಹಿತಿ ತಂತ್ರಜ್ಞಾನ (ಐಟಿ) ಒಂದು ಸಣ್ಣ ಭಾಗವಷ್ಟೇ. ಆದರೆ, ವಿಜ್ಞಾನ ಎನ್ನುವುದು ದೊಡ್ಡ ಸಾಗರ. ಆದ್ದರಿಂದ ಮುಖ್ಯಮಂತ್ರಿಗಳು ಐಟಿ ಬಗ್ಗೆ ಮಾತನಾಡುವಾಗ, ವಿಜ್ಞಾನವನ್ನು ಮರೆಯಬೇಡಿ ಎಂದು ಸೂಚ್ಯವಾಗಿ ಹೇಳಿದ ಪ್ರೊ.ರಾವ್‌, ಕಳೆದ ಆರು ದಶಕಗಳಿಂದ ನಾನು ವಿಜ್ಞಾನ ಕ್ಷೇತ್ರದಲ್ಲಿದ್ದೇನೆ.

ಈಗಲೂ ನಾನು ಪ್ರಯೋಗಾಲಯದಲ್ಲಿ ಸಂಶೋಧನೆ ನಡೆಸುತ್ತಲೇ ಇದ್ದೇನೆ. ಈಗಲೂ ಅನೇಕ ಗೊತ್ತಿರದ ಸಂಗತಿಗಳು ನನ್ನ ಗಮನಕ್ಕೆ ಬರುತ್ತಿರುತ್ತವೆ. ಇದು ವಿಜ್ಞಾನದ ವೈಶಿಷ್ಟ ಎಂದು ತಿಳಿಸಿದರು. ಅಮೆರಿಕದ ನ್ಯಾನೊಮಟೀರಿಯಲ್ಸ್‌ ಗ್ರೂಪ್‌ನ ಡಾ.ಯೂರಿ ಗಾಗೊತ್ಸಿ ಮಾತನಾಡಿ, ನ್ಯಾನೊ ಗಾತ್ರ ಚಿಕ್ಕದು.

ಆದರೆ, ಅದರ ಹಿಂದೆ ದೊಡ್ಡ ಮಾರುಕಟ್ಟೆ ಇದೆ. ಭವಿಷ್ಯದಲ್ಲಿ ಅದೊಂದು ದೈತ್ಯ ಉದ್ಯಮ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕೆ.ಜೆ.ಜಾರ್ಜ್‌, ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ, ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ (ಐಎನ್‌ಎಸ್‌ಎ) ಅಧ್ಯಕ್ಷ ಪ್ರೊ.ಎ.ಕೆ. ಸೂದ್‌ ಮತ್ತಿತರರು ಉಪಸ್ಥಿತರಿದ್ದರು.   

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.